ಪಠಾಣ್ ಕೋಟ್ 
ದೇಶ

ಪಠಾಣ್ ಕೋಟ್ ದಾಳಿಗೆ ಪಾಕ್ ಸರ್ಕಾರದ ನೆರವಿತ್ತು ಎಂಬುದಕ್ಕೆ ಸಾಕ್ಷ್ಯ ಇಲ್ಲ: ಎನ್ಐಎ ನಿರ್ದೇಶಕ

ಪಠಾಣ್ ಕೋಟ್ ವಾಯು ನೆಲೆ ಮೇಲೆ ನಡೆದ ಭಯೋತ್ಪಾದಕ ದಾಳಿಗೆ ಪಾಕಿಸ್ತಾನ ಸರ್ಕಾರ ಬೆಂಬಲ ನೀಡಿದೆ ಎಂಬುದಕ್ಕೆ ಯಾವುದೇ ಸಾಕ್ಷ್ಯಾಧಾರಗಳಿಲ್ಲ

ನವದೆಹಲಿ: ಪಠಾಣ್ ಕೋಟ್ ವಾಯು ನೆಲೆ ಮೇಲೆ ನಡೆದ ಭಯೋತ್ಪಾದಕ ದಾಳಿಗೆ ಪಾಕಿಸ್ತಾನ ಸರ್ಕಾರ ಬೆಂಬಲ ನೀಡಿದೆ ಎಂಬುದಕ್ಕೆ ಯಾವುದೇ ಸಾಕ್ಷ್ಯಾಧಾರಗಳಿಲ್ಲ ಎಂದು ರಾಷ್ಟ್ರೀಯ ತನಿಖಾ ತಂಡದ ಪ್ರಧಾನ ನಿರ್ದೇಶಕ ಶರದ್ ಕುಮಾರ್ ಹೇಳಿದ್ದಾರೆ.
ವಾಯುನೆಲೆ ಮೇಲೆ ನಡೆದ ಭಯೋತ್ಪಾದಕ ದಾಳಿಗೆ ಪಾಕಿಸ್ತಾನ ಸರ್ಕಾರವಾಗಲಿ ಅಥವಾ ಪಾಕಿಸ್ತಾನದ ಸರ್ಕಾರಿ ಸಂಸ್ಥೆಗಳಾಗಲಿ ಜೈಶ್-ಎ-ಮೊಹಮ್ಮದ್ ಉಗ್ರ ಸಂಘಟನೆಗೆ ನೆರವು ನೀಡಿಲ್ಲ ಎಂದು ನ್ಯೂಸ್ 18 ಸುದ್ದಿ ವಾಹಿನಿಗೆ ನೀಡಿರುವ ಸಂದರ್ಶನದಲ್ಲಿ ಎನ್ಐಎ ನಿರ್ದೇಶಕ ಶರದ್ ಕುಮಾರ್ ತಿಳಿಸಿದ್ದಾರೆ. 
ದಾಳಿ ನಡೆಸಲು 'ಒಳಗಿನವರ' ಸಹಕಾರವಿತ್ತಾ? ಎಂಬ ಪ್ರಶ್ನೆಗೆ ಉತ್ತರಿಸಿರುವ ಶರದ್ ಕುಮಾರ್, ಈ ವರೆಗಿನ ತನಿಖೆಗಳಲ್ಲಿ ಒಳಗಿನವರ ಕೈವಾಡ ಇರುವ ಬಗ್ಗೆಯೂ ಸಾಕ್ಷ್ಯಗಳು ದೊರೆತಿಲ್ಲ. ಪ್ರಕರಣದ ಬಗ್ಗೆ ಭಾರತದಲ್ಲಿ ತನಿಖೆಯನ್ನು ಸಂಪೂರ್ಣಗೊಳಿಸಲಾಗಿದ್ದು, ಪಾಕಿಸ್ತಾನದಲ್ಲಿ ತನಿಖೆ ನಡೆಸಲು ಅಲ್ಲಿನ ಸರ್ಕಾರದಿಂದ ಅನುಮತಿಗಾಗಿ ಕಾಯುತ್ತಿದ್ದೇವೆ ಎಂದು ಶರದ್ ಕುಮಾರ್ ತಿಳಿಸಿದ್ದಾರೆ.
ಪಠಾಣ್ ಕೋಟ್ ನಲ್ಲಿ ನಡೆದ ಉಗ್ರ ದಾಳಿಗೆ ಜೈಶ್-ಎ- ಮೊಹಮ್ಮದ್ ಉಗ್ರ ಸಂಘಟನೆ ಮುಖಂಡ ಮಸೂದ್ ಅಜರ್ ಹಾಗೂ ಆತನ ಸಹೋದರ ರೌಫ್ ಅಜರ್ ವಿರುದ್ಧ ಸ್ಪಷ್ಟ ಸಾಕ್ಷ್ಯಾಧಾರಗಳಿವೆ ಎಂದು ಶರದ್ ಕುಮಾರ್ ಮಾಹಿತಿ ನೀಡಿದ್ದಾರೆ. ಜವರಿಯಲ್ಲಿ ನಡೆದಿದ್ದ ಭಯೋತ್ಪಾದಕ ದಾಳಿಗೆ ಸಂಬಂಧಿಸಿದಂತೆ ತನಿಖೆ ನಡೆಸಲು ಪಾಕಿಸ್ತಾನದ ಜಂಟಿ ತನಿಖಾ ತಂಡ ಮಾರ್ಚ್ ತಿಂಗಳಲ್ಲಿ ಭಾರತಕ್ಕೆ ಭೇಟಿ ನೀಡಿ, ಪಾಕ್ ಉಗ್ರರ ಕೈವಾಡ ಇರುವುದನ್ನು ಒಪ್ಪಿಕೊಂಡಿತ್ತು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

ಶಿಬು ಸೊರೇನ್ 'ರಾಜ್ಯದ ಪಿತಾಮಹ' ಎಂದು ಘೋಷಿಸುವಂತೆ ಜೆಎಂಎಂ ಆಗ್ರಹ

Indian Stock Market: ಸತತ ಕುಸಿತ, ಬರೊಬ್ಬರಿ ಶೇ.1ರಷ್ಟು ಕುಸಿದ Sensex, Nifty 50, ರೂಪಾಯಿ ಮೌಲ್ಯ ಇಳಿಕೆ!

SCROLL FOR NEXT