ಅರವಿಂದ್ ಕೇಜ್ರಿವಾಲ್ 
ದೇಶ

3 ವಾರಗಳಲ್ಲಿ ಪ್ರಾಕೃತಿಕ ಜಲಮೂಲಗಳನ್ನು ಶುದ್ಧೀಕರಿಸಿ: ದೆಹಲಿ ಸರ್ಕಾರಕ್ಕೆ ಎನ್ ಜಿಟಿ ಆದೇಶ

ಮುಂಗಾರು ಮಳೆ ಆಗಮನಕ್ಕೆ ಮುನ್ನ ಅಂದರೆ ಮೂರು ವಾರಗಳ ಒಳಗಾಗಿ ದೆಹಲಿಯಲ್ಲಿರುವ ಎಲ್ಲಾ ಜಲಮೂಲಗಳನ್ನೂ ಸ್ವಚ್ಛಗೊಳಿಸುವಂತೆ ದೆಹಲಿ ಸರ್ಕಾರಕ್ಕೆ ...

ದೆಹಲಿ: ಮುಂಗಾರು ಮಳೆ ಆಗಮನಕ್ಕೆ ಮುನ್ನ ಅಂದರೆ ಮೂರು ವಾರಗಳ ಒಳಗಾಗಿ ದೆಹಲಿಯಲ್ಲಿರುವ ಎಲ್ಲಾ ಜಲಮೂಲಗಳನ್ನೂ  ಸ್ವಚ್ಛಗೊಳಿಸುವಂತೆ ದೆಹಲಿ ಸರ್ಕಾರಕ್ಕೆ ಹಸಿರು ನ್ಯಾಯಮಂಡಳಿಯ ಆದೇಶ ನೀಡಿದೆ.

ಎನ್​ಜಿಟಿ ಅಧ್ಯಕ್ಷ ನ್ಯಾಯಮೂರ್ತಿ ಸ್ವತಂತರ್​ಕುಮಾರ್ ನೇತೃತ್ವದ ಪೀಠವು ಪರಿಸರ ಮತ್ತು ಅರಣ್ಯ ಸಚಿವಾಲಯ, ನಗರಾಭಿವೃದ್ಧಿ ಸಚಿವಾಲಯ, ಕೇಂದ್ರ ಅಂತರ್ಜಲ ಪ್ರಾಧಿಕಾರ, ದೆಹಲಿ ಅಭಿವೃದ್ಧಿ ಪ್ರಾಧಿಕಾರ ಮತ್ತು ದೆಹಲಿ ಜಲ ಮಂಡಳಿ ಮತ್ತು ಪರಿಸರ ಇಲಾಖೆಗೆ ನೋಟಿಸ್ ಜಾರಿ ಮಾಡಿದ್ದು ಎರಡು ವಾರಗಳಲ್ಲಿ ಉತ್ತರಿಸುವಂತೆ ತಿಳಿಸಿದೆ.

ಪರಿಸರ ಮಿತ್ರ, ಅಗ್ಗದ ವಿಧಾನಗಳ ಮೂಲಕ ಮಳೆ ನೀರು ಕೊಯ್ಲಿಗೆ ರಾಷ್ಟ್ರವ್ಯಾಪಿ ವ್ಯವಸ್ಥೆ ಕಲ್ಪಿಸಲು ಕ್ರಮ ಕೈಗೊಳ್ಳುವಂತೆ ಸರ್ಕಾರಕ್ಕೆ ನಿರ್ದೇಶನ ಕೋರಿ ಸರ್ಕಾರೇತರ ಸಂಘಟನೆ ಚೇತನ ಸಲ್ಲಿಸಿದ ಅರ್ಜಿಯ ವಿಚಾರಣೆ ಸಂದರ್ಭದಲ್ಲಿ ಹಸಿರು ನ್ಯಾಯಮಂಡಳಿ ಈ ಆದೇಶ ಹೊರಡಿಸಿದೆ.

ಜಲಮೂಲಗಳನ್ನು ಸ್ವಚ್ಚಗೊಳಿಸಿದರೇ ಮುಂಬರುವ ಮುಂಗಾರುವೇಳೆ ಹೆಚ್ಚಿ ನ ಪ್ರಮಾಣದ ನೀರನ್ನು ಶೇಖರಿಸಲು ಸಾಧ್ಯವಾಗುತ್ತದೆ ಎಂದು ನ್ಯಾಯಮಂಡಳಿ ಅಭಿಪ್ರಾಯ ಪಟ್ಟಿದ್ದು, ಮುಂದಿನ ವಿಚಾರಣೆಯನ್ನು ಆಗಸ್ಟ್ 9ಕ್ಕೆಮುಂದೂಡಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ?

ಮಂಗಳೂರು: Muslim ಕ್ಯಾಬ್ ಚಾಲಕನಿಗೆ 'ಭಯೋತ್ಪಾದಕ' ಎಂದು ಕರೆದಿದ್ದ ಕೇರಳ ನಟನ ಬಂಧನ!

ಅಯೋಧ್ಯೆಯಲ್ಲಿ ಮತ್ತೊಂದು 'ನಿಗೂಢ' ಸ್ಫೋಟ: ಸಾವಿನ ಸಂಖ್ಯೆ 6ಕ್ಕೆ ಏರಿಕೆ, Video Viral

BMTC ಬಸ್ ಚಾಲಕನಿಗೆ ಫಿಡ್ಸ್, ಚಿನ್ನಸ್ವಾಮಿ ಕ್ರೀಡಾಂಗಣ ರಸ್ತೆಯಲ್ಲಿ ಸರಣಿ ಅಪಘಾತ

ಬೆಂಗಳೂರು: ರಾತ್ರಿಯಿಡೀ ಸುರಿದ ಮಳೆಯಿಂದ ಹಲವೆಡೆ ಜಲಾವೃತ, ಸಂಚಾರ ದಟ್ಟಣೆ, ಇಂದಿನ IMD ವರದಿ!

SCROLL FOR NEXT