ಕೇಂದ್ರ ಜಲಸಂಪನ್ಮೂಲ ಸಚಿವೆ ಉಮಾ ಭಾರತಿ 
ದೇಶ

ಸುಬ್ರಮಣಿಯನ್ ಸ್ವಾಮಿ ನನ್ನ ಹೀರೋ: ಸಚಿವೆ ಉಮಾ ಭಾರತಿ

ವಿವಾದಿತ ಆಯೋಧ್ಯೆ ರಾಮಮಂದಿರ ನಿರ್ಮಾಣ ವಿಚಾರಕ್ಕೆ ಸಂಬಂಧಿಸಿದಂತೆ ಸುಬ್ರಮಣಿಯನ್ ಸ್ವಾಮಿ ಅವರು ಹೇಳಿರುವ ಮಾತಿನ ಮೇಲೆ ನನಗೆ ಸಂಪೂರ್ಣವಾದ ನಂಬಿಕೆಯಿದ್ದು...

ನವದೆಹಲಿ: ವಿವಾದಿತ ಆಯೋಧ್ಯೆ ರಾಮಮಂದಿರ ನಿರ್ಮಾಣ ವಿಚಾರಕ್ಕೆ ಸಂಬಂಧಿಸಿದಂತೆ ಸುಬ್ರಮಣಿಯನ್ ಸ್ವಾಮಿ ಅವರು ಹೇಳಿರುವ ಮಾತಿನ ಮೇಲೆ ನನಗೆ ಸಂಪೂರ್ಣವಾದ ನಂಬಿಕೆಯಿದ್ದು, ಸುಬ್ರಮಣಿಯನ್ ಸ್ವಾಮಿ ಅವರು ನನ್ನ ಹೀರೋ ಎಂದು ಕೇಂದ್ರ ಜಲಸಂಪನ್ಮೂಲ ಸಚಿವೆ ಉಮಾ ಭಾರತಿ ಅವರು ಭಾನುವಾರ ಹೇಳಿದ್ದಾರೆ.

ಈ ಕುರಿತಂತೆ ಖಾಸಗಿ ಮಾಧ್ಯಮವೊಂದರ ಸಂದರ್ಶನದಲ್ಲಿ ಮಾತನಾಡಿರುವ ಅವರು, ಸ್ವಾಮಿ ಅವರನ್ನು ಬಹಳ ಗೌರವಿಸುತ್ತೇನೆ. ಸುಬ್ರಮಣಿಯನ್ ಸ್ವಾಮಿ ಅವರು ನನ್ನ ಹೀರೋ. ನಾನು 15-16 ವರ್ಷದವಳಿರುವಾಗ ದೇಶದಲ್ಲಿ ತುರ್ತುಪರಿಸ್ಥಿತಯನ್ನು ಹೇರಲಾಗಿತ್ತು. ಅಂದು  ಡಾ.ಸ್ವಾಮಿ, ಜಾರ್ಜ್ ಫರ್ನಾಂಡೀಸ್ ನನ್ನ ಹೀರೋಗಳಾಗಿದ್ದು, ಸ್ವಾಮಿ ಅವರು ಏನೇ ಹೇಳಿದರೂ ಅವರ ಮಾತಿನ ನನಗೆ ಸಂಪೂರ್ಣ ನಂಬಿಕೆಯಿದೆ ಎಂದು ಹೇಳಿದ್ದಾರೆ.

ಮುಂಬೈನಲ್ಲಿ ಕಳೆದ ಏಪ್ರಿಲ್ ತಿಂಗಳನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ್ದ ಸ್ವಾಮಿ ಅವರು, ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಕಾರ್ಯಗಳು ಈ ವರ್ಷಾಂತ್ಯದಲ್ಲಿ ಆರಂಭವಾಗುತ್ತದೆ. ಮುಂದಿನ ವರ್ಷ ಎಲ್ಲಾ ಹಿಂದೂಗಳು ರಾಮನವಮಿಯನ್ನು ಆಯೋಧ್ಯೆಯಲ್ಲಿಯೇ ಆಚರಿಸಬಹುದು ಎಂದು ಹೇಳಿದ್ದರು.

ಮುಂಬರುವ ಉತ್ತರಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಜಲಸಂಪನ್ಮೂಲ ಸಚಿವೆ ಉಮಾ ಭಾರತಿ ಅವರು ಬಿಜೆಪಿಯ ಮುಖ್ಯಮಂತ್ರಿ ಅಭ್ಯರ್ಥಿಯಾಗಲಿದ್ದಾರೆಂದು ಬಿಂಬಿಸಲಾಗುತ್ತಿದೆ. ಬಿಜೆಪಿ ಪ್ರಮುಖ ಅಜೆಂಡಾ ರಾಮಮಂದಿರ ನಿರ್ಮಾಣವಾಗಿದೆ ಎಂದು ವಿರೋಧ ಪಕ್ಷಗಳು ಬಿಜೆಪಿ ವಿರುದ್ಧ ಹರಿಹಾಯುತ್ತಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT