ಸಾಂದರ್ಭಿಕ ಚಿತ್ರ 
ದೇಶ

ದೆಹಲಿ: ಒಂದೇ ಕುಟುಂಬದ ಮೂವರ ಭೀಕರ ಹತ್ಯೆ

ರಾಷ್ಟ್ರ ರಾಜಧಾನಿಯ ದೆಹಲಿಯ ಬ್ರಹ್ಮಪುರಿ ಪ್ರದೇಶದಲ್ಲಿ ತ್ರಿವಳಿ ಕೊಲೆ ನಡೆದಿದ್ದು ನಾಗರಿಕರು ಬೆಚ್ಚಿ ಬೆದ್ದಿದ್ದಾರೆ...

ನವದೆಹಲಿ: ರಾಷ್ಟ್ರ ರಾಜಧಾನಿಯ ದೆಹಲಿಯ ಬ್ರಹ್ಮಪುರಿ ಪ್ರದೇಶದಲ್ಲಿ ತ್ರಿವಳಿ ಕೊಲೆ ನಡೆದಿದ್ದು ನಾಗರಿಕರು ಬೆಚ್ಚಿ ಬೆದ್ದಿದ್ದಾರೆ.

50 ವರ್ಷದ ಮಹಿಳೆ ಮತ್ತು ಆಕೆಯ ಇಬ್ಬರು ಮಕ್ಕಳು ಅತ್ಯಂತ ಕ್ರೂರವಾಗಿ ಕೊಲ್ಲಲಾಗಿದೆ. ಶನಿವಾರ ಸಂಜೆ ಈ ಘಟನೆ ಬೆಳಕಿಗೆ ಬಂದಿದ್ದು, ಮೃತರನ್ನು 50 ವರ್ಷದ ಸಾಯಿರಾ ಮತ್ತು ಆಕೆಯ ಮಕ್ಕಳಾದ 19 ವರ್ಷದ ಮೆಹರುನ್ನೀಯಾ ಮತ್ತು 9 ವರ್ಷದ ಶಬನಮ್ ಎಂದು ಗುರುತಿಸಲಾಗಿದೆ.

ಮನೆಯ ಹೊರಗಿನಿಂದ ಲಾಕ್ ಆಗಿದ್ದು ಮನೆಯ ಒಳಗಿನಿಂದ ಕೆಟ್ಟ ವಾಸನೆ ಬರುತ್ತಿರುವ ಬಗ್ಗೆ ನೆರೆಹೊರೆಯವರು ಪೊಲೀಸರಿಗೆ ಮಾಹಿತಿ ನೀಡಿದಾಗ ಘಟನೆ ಬೆಳಕಿಗೆ ಬಂದಿದೆ. ಬಾಗಿಲು ಒಡೆದು ಒಳ ಹೋದ ಪೊಲೀಸರಿಗೆ ಮೂರು ದೇಹಗಳು ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿವೆ.

ಮೂವರ ದೇಹದ ತುಂಬ ಗಾಯದ ಗುರುತುಗಳಿದ್ದು, ಹರಿತ ಆಯುಧದಿಂದ ತಾಯಿ ಸಾಯಿರಾ ಕತ್ತು ಸೀಳಿ ಕೊಲೆಗೈಯ್ಯಲಾಗಿದೆ. ಮೆಹರುನ್ನೀಸಾಳನ್ನು ಬೆಡ್ ರೂಮ್‌ನಲ್ಲಿ ಬೀಭತ್ಸವಾಗಿ ಕೊಲೆಗೈದರೆ, ಪುಟ್ಟ ಹುಡುಗಿ ಶಬನಮ್ ದೇಹ ಬಾತ್ ರೂಮ್‌ನಲ್ಲಿ ಕಂಡು ಬಂದಿದೆ. ಸಾಯಿರಾ ದೇಹವನ್ನು ಟೆರೆಸ್ ಕಡೆ ಎಳೆದೊಯ್ಯಲು ಪ್ರಯತ್ನಿಸಿ ಮೆಟ್ಟಿಲುಗಳ ಮೇಲೆ ಬಿಡಲಾಗಿದೆ.

ಮೂರು ದಿನಗಳ ಹಿಂದೆ ಈ ಘಟನೆ ನಡೆದಿರಬಹುದು ಎಂದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ. ಶವಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.

ಮನೆ ಅವ್ಯವಸ್ಥಿತವಾಗಿದ್ದು ಕೊಲೆಗಾರರು ಮತ್ತು ಸತ್ತವರ ಮಧ್ಯೆ ಮಾರಾ ಮಾರಿಯಾಗಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.ಸಾಯಿರಾ ಪತಿ ಮುನ್ನಾ ಎರಡು ವರ್ಷಗಳ ಹಿಂದೆ ಸಾವನ್ನಪ್ಪಿದ್ದ. ಆತನಿಗೆ ಎರಡನೆಯ ಪತ್ನಿ ಸಹ ಇದ್ದು ಎರಡು ಕುಟುಂಬಗಳ ಮಧ್ಯೆ ಇದ್ದ ಆಸ್ತಿ ವಿವಾದ ಘಟನೆಗೆ ಕಾರಣವಾಗಿರಬಹುದೆಂದು ಪೊಲೀಸರು ಶಂಕಿಸಿದ್ದಾರೆ. ಪ್ರಕರಣವನ್ನು ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಗಳಿಗಾಗಿ ಬಲೆ ಬೀಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

ಶಿಬು ಸೊರೇನ್ 'ರಾಜ್ಯದ ಪಿತಾಮಹ' ಎಂದು ಘೋಷಿಸುವಂತೆ ಜೆಎಂಎಂ ಆಗ್ರಹ

Indian Stock Market: ಸತತ ಕುಸಿತ, ಬರೊಬ್ಬರಿ ಶೇ.1ರಷ್ಟು ಕುಸಿದ Sensex, Nifty 50, ರೂಪಾಯಿ ಮೌಲ್ಯ ಇಳಿಕೆ!

SCROLL FOR NEXT