ಸುಪ್ರೀಂಕೋರ್ಟ್ 
ದೇಶ

ಮಥುರಾ ಘರ್ಷಣೆ: ಸಿಬಿಐ ತನಿಖೆ ಕೋರಿ ಸಲ್ಲಿಸಿದ್ದ ಅರ್ಜಿ ತಿರಸ್ಕರಿಸಿದ ಸುಪ್ರೀಂ

29 ಜನರನ್ನು ಬಲಿ ಪಡೆದುಕೊಂಡಿದ್ದ ಮಥುರಾ ಗಲಭೆ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸುವ ಕುರಿತಂತೆ ಸಲ್ಲಿಸಲಾಗಿದ್ದ ಅರ್ಜಿ ವಿಚಾರಣೆ ನಡೆಸಲು ಸುಪ್ರೀಂಕೋರ್ಟ್...

ಲಖನೌ: 29 ಜನರನ್ನು ಬಲಿ ಪಡೆದುಕೊಂಡಿದ್ದ ಮಥುರಾ ಗಲಭೆ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸುವ ಕುರಿತಂತೆ ಸಲ್ಲಿಸಲಾಗಿದ್ದ ಅರ್ಜಿ ವಿಚಾರಣೆ ನಡೆಸಲು ಸುಪ್ರೀಂಕೋರ್ಟ್ ಮಂಗಳವಾರ ತಿರಸ್ಕರಿಸಿದೆ.

ನ್ಯಾಯಾಮೂರ್ತಿ ಪಿ.ಸಿ ಘೋಷ್ ಮತ್ತು ಅಮಿತಾವ್ ರಾಯ್ ಅವರಿದ್ದ ಪೀಠ ಈ ಕುರಿತ ಅರ್ಜಿಯನ್ನು ವಜಾಗೊಳಿಸಿ ಆದೇಶ ಹೊರಡಿಸಿದೆ.

ದೆಹಲಿ ಬಿಜೆಪಿ ವಕ್ತಾರ ಹಾಗೂ ನ್ಯಾಯವಾದಿಯಾಗಿರುವ ಅಶ್ವಿನ್ ಉಪಾಧ್ಯಾಯ ಅವರು ಸಿಬಿಐ ತನಿಖೆ ಕೋರಿ ಅರ್ಜಿಯನ್ನು ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಮಂಗಳವಾರಕ್ಕೆ ನಿಗದಿ ಪಡಿಸಿ ಆದೇಶಿಸಿತ್ತು.

ಇದರಂತೆ ಇಂದು ಆದೇಶ ಹೊರಡಿಸಿರುವ ಅಮಿತ್ ರಾಯ್ ಅವರಿದ್ದ ಪೀಠವು, ಪ್ರಕರಣವನ್ನು ಸಿಬಿಐಗೆ ವಹಿಸುವ ಹಕ್ಕು ರಾಜ್ಯ ಸರ್ಕಾರಕ್ಕೆ ಮಾತ್ರ ಇದೆ, ವಿಚಾರದಲ್ಲಿ ಕೇಂದ್ರ ಸರ್ಕಾರ ಕೂಡ ಆದೇಶ ಹೊರಡಿಸುವಂತಿಲ್ಲ. ಸಿಬಿಐ ತನಿಖೆ ವಹಿಸುವಂತೆ ಆಗ್ರಹಿಸುವುದು ದಿನಚರಿಯಾಗಬಾರದು ಎಂದು ಹೇಳಿದೆ.

ಅಲ್ಲದೆ, ಪ್ರಕರಣವನ್ನು ಸಿಬಿಐ ತನಿಖೆಗೆ ಆಗ್ರಹಿಸುತ್ತಿರುವ ಅರ್ಜಿದಾರ ಉತ್ತರ ಪ್ರದೇಶ ತನಿಖೆಯಲ್ಲಿ ವಿಫಲತೆ ಕಂಡಿರುವುದಾಗಿ ಅಥವಾ ಕೆಲಸ ಮಾಡದಿರುವ ಬಗ್ಗೆ ಯಾವುದೇ ಹೇಳಿಕೆಗಳನ್ನು ನೀಡಿಲ್ಲ ಎಂದು ಹೇಳಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮನೆಗಳಿಗೆ ಎಲ್‌ಪಿಜಿ, ವಾಹನಗಳಿಗೆ ಸಿಎನ್‌ಜಿ ಪೂರೈಕೆ 100 ಪರ್ಸೆಂಟ್ ಗ್ಯಾರಂಟಿ: ಕೇಂದ್ರ ಭರವಸೆ

ಗೃಹ ಬಳಕೆ ಎಲ್ ಪಿಜಿಗೆ ಆದ್ಯತೆ, ಕೈಗಾರಿಕಾ ಅನಿಲ ಬಳಕೆ ಶೇ. 50 ರಷ್ಟು ಕಡಿತಗೊಳಿಸಿದ ಗುಜರಾತ್

ಸರ್ಕಾರಿ ವೈದ್ಯರ ಮುಷ್ಕರ: ಶೀಘ್ರ ಸಮಸ್ಯೆ ಪರಿಹರಿಸುವುದಾಗಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಭರವಸೆ

ಡಿಕೆಶಿಗೆ ಉಜ್ವಲ ರಾಜಕೀಯ ಭವಿಷ್ಯವಿದೆ ಎನ್ನುತ್ತಾ ಹೊಸ ಟ್ವಿಸ್ಟ್ ನೀಡಿದ ಸಿಎಂ ಸಿದ್ದರಾಮಯ್ಯ!

'ನಾವಿರೋದ್ರಿಂದ ಹಿಂದೂಗಳು ಸುರಕ್ಷಿತ.. ಇಲ್ಲ ಅಂದ್ರೆ ಆ ಸಮುದಾಯದವ್ರು ಮುಗಿಸಿಬಿಡುತ್ತಿದ್ದರು': Mamata Banerjee ವಿವಾದಾತ್ಮಕ ಹೇಳಿಕೆ, ಬಿಜೆಪಿ ಕಿಡಿ

SCROLL FOR NEXT