ಕಾಂಗ್ರೆಸ್ ನಾಯಕ ಪ್ರಮೋದ್ ತಿವಾರಿ 
ದೇಶ

ರಾಮ ಮಂದಿರ ವಿವಾದ: ದ್ವಿಮುಖ ಮಾತನ್ನು ನಿಲ್ಲಿಸಿ- ಅಮಿತ್ ಶಾಗೆ ಕಾಂಗ್ರೆಸ್

ವಿವಾದಿತ ಅಯೋಧ್ಯೆ ರಾಮಮಂದಿರ ವಿಚಾರವನ್ನು ಬಿಜೆಪಿ ರಾಜಕೀಯ ದಾಳವಾಗಿ ಬಳಸಿಕೊಳ್ಳುತ್ತಿದ್ದು, ಮಂದಿರ ನಿರ್ಮಾಣ ವಿಚಾರದಲ್ಲಿ ದ್ವಿಮುಖವಾಗಿ...

ನವದೆಹಲಿ: ವಿವಾದಿತ ಅಯೋಧ್ಯೆ ರಾಮಮಂದಿರ ವಿಚಾರವನ್ನು ಬಿಜೆಪಿ ರಾಜಕೀಯ ದಾಳವಾಗಿ ಬಳಸಿಕೊಳ್ಳುತ್ತಿದ್ದು, ಮಂದಿರ ನಿರ್ಮಾಣ ವಿಚಾರದಲ್ಲಿ ದ್ವಿಮುಖವಾಗಿ ಮಾತನಾಡುತ್ತಿರುವುದನ್ನು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರು ನಿಲ್ಲಿಸಬೇಕೆಂದು ಕಾಂಗ್ರೆಸ್ ಬುಧವಾರ ಹೇಳಿದೆ.

ನಿನ್ನೆಯಷ್ಟೇ ಉತ್ತರಪ್ರದೇಶದಲ್ಲಿ ಬಿಜೆಪಿ ಏರ್ಪಡಿಸಿದ್ದ ಕಾರ್ಯಕ್ರಮವೊಂದರಲ್ಲಿ ಅಯೋಧ್ಯೆ ರಾಮ ಮಂದಿರ ವಿಚಾರ ಕುರಿತು ಅಮಿತ್ ಶಾ ಅವರು ಮಾತನಾಡಿದ್ದರು. ರಾಮಮಂದಿರ ನಿರ್ಮಾಣ ಬಿಜೆಪಿಯ ಮೊದಲ ಆದ್ಯತೆಯಾಗಿದ್ದು, ಚುನಾವಣಾ ಪ್ರಣಾಳಿಕೆಯಲ್ಲಿ ಇದನ್ನು ನಮೂದಿಸಲಾಗಿದೆ. ಮುಂದಿನ ವರ್ಷ ರಾಮಮಂದಿರ ನಿರ್ಮಾಣವಾಗಲಿದೆ ಇದರಲ್ಲಿ ಯಾವುದೇ ಅನುಮಾನವಿಲ್ಲ ಎಂದು ಹೇಳಿದ್ದರು.

ಶಾ ಅವರ ಈ ಹೇಳಿಕೆ ಸಂಬಂಧ ಇಂದು ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್ ನಾಯಕ ಪ್ರಮೋದ್ ತಿವಾರಿ ಅವರು, ಮಂದಿರ ನಿರ್ಮಾಣ ವಿವಾದ ಕುರಿತಂತೆ ಸುಪ್ರೀಂಕೋರ್ಟ್ ವರದಿ ಬರುವವರೆಗೂ ಈ ಬಗ್ಗೆ ಏನನ್ನೂ ಮಾತನಾಡದಂತೆ ಕಾಂಗ್ರೆಸ್ ನಿರ್ಧರಿಸಿದೆ. ಇದನ್ನು ಎಲ್ಲರೂ ಒಪ್ಪಿಕೊಂಡಿದ್ದಾರೆ. ಅಮಿತ್ ಶಾ ಅವರನ್ನು ಒಂದು ಪ್ರಶ್ನೆ ಕೇಳಲು ಇಚ್ಛಿಸುತ್ತೇನೆ. ಆದೇಶ ಹೊರಬೀಳದೆಯೇ ನಿಮ್ಮ ಪಕ್ಷದವರು ಮಂದಿರ ನಿರ್ಮಾಣ ಕುರಿತಂತೆ ಹೇಗೆ ಹೇಳಿಕೆ ನೀಡುತ್ತಿದ್ದಾರೆ.

ಅಮಿತ್ ಶಾ ಅವರೇ ನಿಮ್ಮ ದ್ವಿಮುಖ ಮಾತುಗಳನ್ನು ನಿಲ್ಲಿಸಿ. ಸಮಸ್ಯೆ ಈಡೇರಿಸಲು ನಿಮಗೆ ಇಷ್ಟವಿಲ್ಲ. ವಿವಾದವನ್ನು ಜೀವಂತವಾಗಿಟ್ಟು ರಾಜಕೀಯ ಗಾಳವಾಗಿ ಬಳಸಿಕೊಳ್ಳುವುದೇ ನಿಮಗೆ ಬೇಕಿದೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT