ಟಿ.ಎಸ್.ಜಾನ್ 
ದೇಶ

ಕೇರಳ ವಿಧಾನಸಭೆ ಮಾಜಿ ಸ್ಪೀಕರ್ ಟಿ.ಎಸ್.ಜಾನ್ ನಿಧನ

ಮಾಜಿ ಸಚಿವ ಹಾಗೂ ಕೇರಳ ವಿಧಾನಸಭೆ ಮಾಜಿ ಸ್ಪೀಕರ್ ಟಿ.ಎಸ್.ಜಾನ್ ಅವರು ಗುರುವಾರ ನಿಧನರಾಗಿದ್ದಾರೆ.

ಕೊಚ್ಚಿ: ಮಾಜಿ ಸಚಿವ ಹಾಗೂ ಕೇರಳ ವಿಧಾನಸಭೆ ಮಾಜಿ ಸ್ಪೀಕರ್ ಟಿ.ಎಸ್.ಜಾನ್ ಅವರು ಗುರುವಾರ ನಿಧನರಾಗಿದ್ದಾರೆ.
ಕ್ಯಾನ್ಸರ್ ನಿಂದ ಬಳಲುತ್ತಿದ್ದ ಹಿರಿಯ ಕಾಂಗ್ರೆಸ್ ನಾಯಕ ಹಾಗೂ ಕೇರಳ ಕಾಂಗ್ರೆಸ್(ಸೆಕ್ಯೂಲರ್)ನ ಅಧ್ಯಕ್ಷ ಜಾನ್ ಅವರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ 76 ವರ್ಷದ ಜಾನ್ ಅವರು ಇಂದು ಕೊನೆಯುಸಿರೆಳೆದಿದ್ದಾರೆ.
1977-78ರಲ್ಲಿ ಎ.ಕೆ.ಆಂಟನಿ ಮತ್ತು ಪಿಕೆ ವಸುದೇವನ್ ನಾಯರ್ ನೇತೃತ್ವದ ಸರ್ಕಾರದ ಜಾನ್ ಅವರು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವರಾಗಿದ್ದರು.
ವೃತ್ತಿಯಲ್ಲಿ ವಕೀಲರಾಗಿದ್ದ ಜಾನ್ ಅವರು ಕೇರಳ ಕಾಂಗ್ರೆಸ್ ಸಂಸ್ಥಾಪಕರಲ್ಲಿ ಒಬ್ಬರಾಗಿದ್ದು, ಕಲೂಪ್ಪಾರ ವಿಧಾನಸಭಾ ಕ್ಷೇತ್ರದಿಂದ ನಾಲ್ಕು ಬಾರಿ ವಿಧಾನಸಭೆಗೆ ಆಯ್ಕೆಯಾಗಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT