ಗುಲ್ಬರ್ಗ್ ಹತ್ಯಾಕಾಂಡ (ಸಂಗ್ರಹ ಚಿತ್ರ) 
ದೇಶ

ಗುಲ್ಬರ್ಗ್ ಹತ್ಯಾಕಾಂಡ: ಶಿಕ್ಷೆ ಪ್ರಮಾಣ ಘೋಷಣೆ ನಾಳೆಗೆ ಮುಂದೂಡಿಕೆ

ಗೋದ್ರೋತ್ತರ ಹಿಂಸಾಚಾರದ ವೇಳೆ 69 ಮಂದಿಯ ಸಾವಿಗೆ ಕಾರಣವಾಗಿದ್ದ ಗುಲ್ಬರ್ಗ್ ಸೊಸೈಟಿಯಲ್ಲಿ ನಡೆದಿದ್ದ ಹತ್ಯಾಕಾಂಡ ಪ್ರಕರಣದ ಅಪರಾಧಿಗಳ ಶಿಕ್ಷೆ ಪ್ರಮಾಣ ಘೋಷಣೆಯನ್ನು ಅಹ್ಮದಾಬಾದ್ ವಿಶೇಷ ನ್ಯಾಯಾಲಯ ಮತ್ತೆ ಮುಂದೂಡಿದ್ದು, ನಾಳೆ ಶಿಕ್ಷೆ ಪ್ರಮಾಣ ಘೋಷಣೆ ವಿಚಾರಣೆ ನಡೆಯಲಿದೆ...

ಅಹ್ಮದಾಬಾದ್: ಗೋದ್ರೋತ್ತರ ಹಿಂಸಾಚಾರದ ವೇಳೆ 69 ಮಂದಿಯ ಸಾವಿಗೆ ಕಾರಣವಾಗಿದ್ದ ಗುಲ್ಬರ್ಗ್ ಸೊಸೈಟಿಯಲ್ಲಿ ನಡೆದಿದ್ದ ಹತ್ಯಾಕಾಂಡ ಪ್ರಕರಣದ ಅಪರಾಧಿಗಳ ಶಿಕ್ಷೆ ಪ್ರಮಾಣ  ಘೋಷಣೆಯನ್ನು ಅಹ್ಮದಾಬಾದ್ ವಿಶೇಷ ನ್ಯಾಯಾಲಯ ಮತ್ತೆ ಮುಂದೂಡಿದ್ದು, ನಾಳೆ ಶಿಕ್ಷೆ ಪ್ರಮಾಣ ಘೋಷಣೆ ವಿಚಾರಣೆ ನಡೆಯಲಿದೆ.

2002ರ ಗುಜರಾತ್ ಹಿಂಸಾಚಾರ ವೇಳೆ ಕಾಂಗ್ರೆಸ್ ಮಾಜಿ ಸಂಸದ ಎಹ್ಸಾನ್ ಜಾಫ್ರಿ ಸೇರಿದಂತೆ 69 ಮಂದಿಯ ಧಾರುಣ ಸಾವಿಗೆ ಕಾರಣವಾಗಿದ್ದ ಗುಲ್ಬರ್ಗ್ ಸೊಸೈಟಿ ಹತ್ಯಾಕಾಂಡದ   ಆರೋಪಿಗಳ ಪರ-ವಿರೋಧ ವಕೀಲರ ವಾದಗಳನ್ನು ಆಲಿಸಿದ ಅಹ್ಮದಾಬಾದ್ ವಿಶೇಷ ನ್ಯಾಯಾಲಯದ ಶಿಕ್ಷೆ ಪ್ರಮಾಣದ ಘೋಷಣೆಯನ್ನು ಸತತ ಎರಡನೇ ಬಾರಿಗೆ ಮುಂದೂಡುತ್ತಿದ್ದು, ಈ  ಹಿಂದೆ ಕಳೆದ ಸೋಮವಾರ ನಡೆದಿದ್ದ ವಿಚಾರಣೆ ವೇಳೆ ಶಿಕ್ಷೆ ಪ್ರಮಾಣ ಘೋಷಣೆಯನ್ನು ಗುರುವಾರಕ್ಕೆ ಮುಂದೂಡಿತ್ತು.

ಇಂದು ಪ್ರಕರಣದ ವಿಚಾರಣೆ ನಡೆದಿದ್ದು, ಅಪರಾಧಿಗಳ ಪರ ವಕೀಲ ಅಭಯ್ ಭಾರದ್ವಾಜ್ ಅವರು ಕಡಿಮೆ ಪ್ರಮಾಣದ ಶಿಕ್ಷೆ ನೀಡಲು ಮಂಡಿಸಿದ ಪ್ರಬಲ ವಾದವನ್ನು ಆಲಿಸಿದ ನ್ಯಾಯಮೂರ್ತಿ ಪಿಬಿ ದೇಸಾಯಿ ಅವರು ವಿಚಾರಣೆಯನ್ನು ನಾಳೆಗೆ ಮುಂದೂಡಿದ್ದಾರೆ. ಇದಕ್ಕೂ ಮೊದಲು ತಮ್ಮ ವಾದ ಮಂಡಿಸಿದ ಪ್ರಾಸಿಕ್ಯೂಷನ್ ಪರ ವಕೀಲ ಎಸ್ ಎಂ ವೋರ್ಹಾ ಅವರು, ಅಪರಾಧಿಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕು. ಇವರಿಗೆ ನೀಡುವ ಶಿಕ್ಷೆ ಇತರರಿಗೆ  ಮಾದರಿಯಾಗಬೇಕು ಎಂದು ನ್ಯಾಯಾಧೀಶರಲ್ಲಿ ಮನವಿ ಮಾಡಿದರು.

ಪ್ರಕರಣ ಸಂಬಂಧ ಕಳೆದ ಗುರುವಾರ ತನ್ನ ಅಂತಿಮ ತೀರ್ಪು ನೀಡಿದ್ದ ನ್ಯಾಯಾಲಯ ಒಟ್ಟು 50 ಮಂದಿ ಆರೋಪಿಗಳ ಪೈಕಿ 36 ಮಂದಿಯನ್ನು ಸಾಕ್ಷ್ಯಾಧಾರದ ಕೊರತೆಯಿಂದಾಗಿ ಖುಲಾಸೆ   ಮಾಡಿ 24 ಮಂದಿ ಆರೋಪಗಳು ಎಂದು ಘೋಷಿಸಿತ್ತು. ಈ ಪೈಕಿ 11 ಆರೋಪಿಗಳ ವಿರುದ್ಧ ಕೊಲೆ ಆರೋಪ ದಾಖಲಾಗಿದ್ದು, ಉಳಿದ 13 ಮಂದಿಯ ವಿರುದ್ಧ ಇತರೆ ಆರೋಪಗಳು   ಸಾಬೀತಾಗಿದ್ದವು.

2002ರಲ್ಲಿ ನಡೆದ ಗೋದ್ರಾ ಹತ್ಯಾಕಾಂಡಕ್ಕೆ ಪ್ರತಿಯಾಗಿ ನಡೆದ ಗೋದ್ರೋತ್ತರ ಹತ್ಯಾಕಾಂಡಗಳಲ್ಲಿ ಗುಲ್ಬರ್ಗ್ ಸೊಸೈಟಿ ಹತ್ಯಾಕಾಂಡ ಪ್ರಮುಖ ಪ್ರಕರಣವಾಗಿದೆ. ಈ ಹತ್ಯಾಕಾಂಡದಲ್ಲಿ   ಕಾಂಗ್ರೆಸ್‌ನ ಮಾಜಿ ಸಂಸದ ಎಹ್ಸಾನ್ ಜಾಫ್ರಿ ಸೇರಿದಂತೆ ಸುಮಾರು  69 ಮಂದಿಯನ್ನು ಧಾರುಣವಾಗಿ ಕೊಲ್ಲಲಾಗಿತ್ತು. ಈವರೆಗೂ ಪ್ರಕರಣದ ವಿಚಾರಣೆ ನಡೆಸುತ್ತಿದ್ದ ನಾಲ್ಕು ಮಂದಿ   ನ್ಯಾಯಾಧೀಶರ ಬದಲಾವಣೆಯಾಗಿದ್ದು, ಇಂದು ತೀರ್ಪು ನೀಡಿರುವ ನ್ಯಾ. ಪಿಬಿ ದೇಸಾಯಿ 5ನೇ ನ್ಯಾಯಾಧೀಶರಾಗಿದ್ದಾರೆ. ಕಳೆದ ಒಂದು ವರ್ಷದ ಹಿಂದೆ ದೇಸಾಯಿ ಅವರು ಪ್ರಕರಣದ  ವಿಚಾರಣೆ ಆರಂಭಿಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

Watch| Traffic Fine ಗೆ ಶೇ.50 ರಷ್ಟು ರಿಯಾಯಿತಿ; ವಂಚಕರಿಂದ ಮೋಸಹೋದ ಟೆಕ್ಕಿ!; Dharmasthala Case: ಮಹೇಶ್ ಶೆಟ್ಟಿ ತಿಮರೋಡಿ ಮನೆಯಲ್ಲಿ SIT ದಾಳಿ; ಮೊಬೈಲ್ ವಶಕ್ಕೆ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT