ಸಂಗ್ರಹ ಚಿತ್ರ 
ದೇಶ

ನಾಯಿ ದಾಳಿಯಿಂದ ತಪ್ಪಿಸಿಕೊಳ್ಳಲು ಹೋಗಿ ಪ್ರಾಣ ಕಳೆದುಕೊಂಡರು!

ನಾಯಿಯಿಂದ ತಪ್ಪಿಸಿಕೊಳ್ಳಲು ಕಟ್ಟಡದ ಮೂರನೇ ಮಹಡಿಯಿಂದ ಜಿಗಿದು ಇಬ್ಬರು ಕಾರ್ಮಿಕರು ಜೀವ ಕಳೆದುಕೊಂಡಿರುವ ಅಸಹಜ ಘಟನೆ ಆಂಧ್ರ ಪ್ರದೇಶದ ವಿಶಾಖಪಟ್ಟಣದಲ್ಲಿ ನಡೆದಿದೆ.

ವಿಶಾಖಪಟ್ಟಣ: ನಾಯಿಯಿಂದ ತಪ್ಪಿಸಿಕೊಳ್ಳಲು ಕಟ್ಟಡದ ಮೂರನೇ ಮಹಡಿಯಿಂದ ಜಿಗಿದು ಇಬ್ಬರು ಕಾರ್ಮಿಕರು ಜೀವ ಕಳೆದುಕೊಂಡಿರುವ ಅಸಹಜ ಘಟನೆ ಆಂಧ್ರ ಪ್ರದೇಶದ ವಿಶಾಖಪಟ್ಟಣದಲ್ಲಿ ನಡೆದಿದೆ.

ಆಂಧ್ರ ಪ್ರದೇಶದ ಪಂಚಾಯತ್ ರಾಜ್ ಸಚಿವರ ಸಂಬಂಧಿಕರಿಗೆ ಸೇರಿದ ಕಟ್ಟಡದ ಮೂರನೇ ಮಹಡಿಯಲ್ಲಿ ಪಾಲಿಶ್ ಕೆಲಸದಲ್ಲಿ ತೊಡಗಿದ್ದ ಕಾರ್ಮಿಕರಾದ ಗೋಪಿ(28 ) ಹುಸೇನ್(43) ನಾಯಿ ದಾಳಿಯಿಂದ ತಪ್ಪಿಸಿಕೊಳ್ಳಲು ಜಿಗಿದು  ಮೃತಪಟ್ಟವರಾಗಿದ್ದಾರೆ.

ಪಾಲೀಶ್ ಕೆಲಸಕ್ಕಾಗಿ ಒಟ್ಟು ಐವರು ಕಾರ್ಮಿಕರನ್ನು ನಿಯೋಜಿಸಲಾಗಿತ್ತು. ಆದರೆ ಕಟ್ಟಡದಲ್ಲಿ ವಾಸಿಸುತ್ತಿರುವ ರಾಮ್ ಬಾಬು ಎಂಬುವವರು ತಮ್ಮ ಮನೆಯ ಜರ್ಮನ್ ಶೆಫರ್ಡ್ ನಾಯಿಯನ್ನು ಕಟ್ಟಿಹಾಕಲು ಮರೆತಿದ್ದರು. ಕಾರ್ಮಿಕರು ಕೆಲಸ ಮಾಡುತ್ತಿದ್ದಾಗ ನಾಯಿ ಏಕಾಏಕಿ ದಾಳಿ ಮಾಡಿದೆ. ಐವರು ಕಾರ್ಮಿಕರಲ್ಲಿ ಇಬ್ಬರು ಕಾರ್ಮಿಕರು ರೂಮ್ ಒಂದಕ್ಕೆ ತೆರಳಿ ಬಾಗಿಲು ಹಾಕಿಕೊಂಡು ನಾಯಿಯಿಂದ ತಪ್ಪಿಸಿಕೊಂಡಿದ್ದಾರೆ. ಆದರೆ ನಾಯಿಯ ದಾಳಿಯಿಂದ ತಪ್ಪಿಸಿಕೊಳ್ಳಲು ಯತ್ನಿಸಿರುವ ಉಳಿದ ಮೂವರು ಕಾರ್ಮಿಕರು ಕಟ್ಟಡದ ಮೂರನೇ ಮಹಡಿಯಿಂದ ಜಿಗಿದಿದ್ದಾರೆ ಪರಿಣಾಮ ಶ್ರೀನಿವಾಸ್(30) ಎಂಬ ಓರ್ವ ಕಾರ್ಮಿಕ ಗಂಭೀರವಾಗಿ ಗಾಯಗೊಂಡಿದ್ದರೆ ಇಬ್ಬರು ಮೃತಪಟ್ಟಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

Afghan-Pak War: 'ಅಲ್ಲಾ ಕಾಪಾಡು' ಅಫ್ಘಾನ್ ಪ್ರತೀಕಾರದ ದಾಳಿ; ಆಗಸದೆತ್ತರಕ್ಕೆ ಚಿಮ್ಮಿದ ಪಾಕ್ ಸೈನಿಕರ ಶವಗಳು, ಗಡಿಯಿಂದ ಕಾಲ್ಕಿತ್ತ ಸೇನೆ, Video

ಯಾವುದೇ ಸಿದ್ಧಾಂತ ಅಥವಾ ಅಜೆಂಡಾವನ್ನು ಪ್ರಚಾರ ಮಾಡುತ್ತಿಲ್ಲ; 'ಕಾಂತಾರ: ಚಾಪ್ಟರ್ 1' ಕುರಿತು ರಿಷಬ್ ಶೆಟ್ಟಿ

'ಆಕೆ ಮಧ್ಯರಾತ್ರಿ 12.30ಕ್ಕೆ ಹೇಗೆ ಹೊರಬಂದಳು?': ಗ್ಯಾಂಗ್ ರೇಪ್ ಕುರಿತು ಮಮತಾ ಬ್ಯಾನರ್ಜಿ ಹೇಳಿಕೆ

ಹಾಸನಾಂಬ ದರ್ಶನಕ್ಕೆ ಭಕ್ತರ ಸಂಖ್ಯೆ ಹೆಚ್ಚಳ: ಎರಡೇ ದಿನಗಳಲ್ಲಿ ರೂ. 2.24 ಕೋಟಿ ಆದಾಯ, ಆರು ಸಿಬ್ಬಂದಿ ಅಮಾನತು!

SCROLL FOR NEXT