ಭೂಗತ ಪಾತಕಿ ಛೋಟಾ ರಾಜನ್ (ಸಂಗ್ರಹ ಚಿತ್ರ) 
ದೇಶ

ಭೂಗತ ಪಾತಕಿ ಛೋಟಾ ರಾಜನ್ ಹತ್ಯೆಗೆ ಸಂಚು: 4 ಬಂಧನ

ರಾಜಧಾನಿ ದೆಹಲಿಯ ತಿಹಾರ್ ಜೈಲಿನಲ್ಲಿರುವ ಭೂಗತ ಪಾತಕಿ ಛೋಟಾ ರಾಜನ್ ನನ್ನು ಹತ್ಯೆ ಮಾಡಲು ಸಂಚು ರೂಪಿಸಿದ್ದ ನಾಲ್ವರನ್ನು ದೆಹಲಿ ಪೊಲೀಸರ ವಿಶೇಷ ತಂಡ ಶುಕ್ರವಾರ...

ನವದೆಹಲಿ: ರಾಜಧಾನಿ ದೆಹಲಿಯ ತಿಹಾರ್ ಜೈಲಿನಲ್ಲಿರುವ ಭೂಗತ ಪಾತಕಿ ಛೋಟಾ ರಾಜನ್ ನನ್ನು ಹತ್ಯೆ ಮಾಡಲು ಸಂಚು ರೂಪಿಸಿದ್ದ ನಾಲ್ವರನ್ನು ದೆಹಲಿ ಪೊಲೀಸರ ವಿಶೇಷ ತಂಡ ಶುಕ್ರವಾರ ಬಂಧನಕ್ಕೊಳಪಡಿಸಿದೆ.

ಛೋಟಾ ರಾಜನ್ ಹತ್ಯೆಗೆ ಗುಂಪೊಂದು ಸಂಚು ರೂಪಿಸಿದ್ದು, ಇದಕ್ಕಾಗಿ ದಾವೂದ್ ಭಂಟ ಛೋಟಾ ಶಕೀಲ್  ಗುತ್ತಿಗೆ ಹಂತಕನ್ನು ನಿಯೋಜಿಸಿದ್ದಾನೆಂದು ಹೇಳಲಾಗುತ್ತಿತ್ತು. ಇದರಂತೆ ಖಚಿತ ಮಾಹಿತಿ ಮೇರೆಗೆ ಹಂತಕರ ಭೇಟೆಗೆ ಇಳಿದಿದ್ದ ಪೊಲೀಸರು ಸಂಚು ರೂಪಿಸಿದ್ದ ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ.

ಬಂಧಿತರನ್ನು ರೋಜನ್ ರಾಬಿನ್ ಸನ್, ಜುನೈದ್, ಮನೀಶ್ ಮತ್ತು ಯೂನುಸ್ ಎಂದು ಗುರ್ತಿಸಲಾಗಿದೆ. ಎಲ್ಲಾ ಆರೋಪಿಗಳನ್ನು ದೆಹಲಿ ಎನ್ ಸಿಆರ್ ಪ್ರದೇಶದಲ್ಲಿ ಬಂಧಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಬಂಧನಕ್ಕೊಳಗಾಗಿರುವ ಎಲ್ಲಾ ಆರೋಪಿಗಳು ದೂರವಾಣಿ ಮೂಲಕ ಛೋಟಾ ಶಕೀಲ್ ಜೊತೆ ಸಂಪರ್ಕದಲ್ಲಿದ್ದರು. ಖಚಿತ ಮಾಹಿತಿ ಪಡೆದಿದ್ದ ಪೊಲೀಸರು ಜೂನ್.3 ರಂದು ಬಂಧಿಸಿದ್ದರು, ಬಂಧಿತ ಆರೋಪಗಳನ್ನು 5 ದಿನಗಳವರೆಗೆ ವಿಚಾರಣೆ ನಡೆಸಲಾಗಿದ್ದು. ಇದೀಗ ಬಂಧಿತರನ್ನು ನ್ಯಾಯಾಲಯ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ ಎಂದು ತಿಳಿದುಬಂದಿದೆ.

2015ರ ನವೆಂಬರ್ ತಿಂಗಳಿನಲ್ಲಿ ಭೂಗತ ಪಾತಕಿ ಛೋಟಾ ರಾಜನ್ ನನ್ನು ಇಂಡೋನೇಷ್ಯಾದ ಬಾಲಿಯಲ್ಲಿ ಬಂಧಿಸಲಾಗಿತ್ತು. ಇದೀಗ ರಾಜನ್ ನನ್ನು ದೆಹಲಿಯ ತಿಹಾರ್ ಜೈಲಿನಲ್ಲಿ ಹೆಚ್ಚಿನ ಭದ್ರತೆಯೊಂದಿಗೆ ಇರಿಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಜೂನ್ 30ರೊಳಗೆ ಮುಗಿಸಿ: ರಾಜ್ಯ ಸರ್ಕಾರಕ್ಕೆ 'ಸುಪ್ರೀಂ' ಗಡುವು

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

ಟಿ20 ವಿಶ್ವಕಪ್: 'ಅಲ್ಲಿ ಬೇಡ ಅಂದ್ರೆ ಇಲ್ಲಿ ಆಡಿ..': ಬಾಂಗ್ಲಾದೇಶಕ್ಕೆ ಹೊಸ ಮೈದಾನಗಳ ಸೂಚಿಸಿದ ICC

ಕ್ರಿಕೆಟ್ ಇತಿಹಾಸದಲ್ಲೇ ಮೊದಲು: ಅಂತಾರಾಷ್ಟ್ರೀಯ ಕ್ರಿಕೆಟ್ ಲೀಗ್ ನಲ್ಲಿ ಜೊತೆಯಾಗಿ ಕಣಕ್ಕಿಳಿದ ಅಪ್ಪ-ಮಗ.. ಯಾರಿವರು?

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

SCROLL FOR NEXT