ಕೇಂದ್ರ ಸಚಿವ ರವಿಶಂಕರ ಪ್ರಸಾದ್(ಸಂಗ್ರಹ ಚಿತ್ರ) 
ದೇಶ

ಮೋದಿಯವರಿಗೆ ಭಟ್ಟಂಗಿಗಳ ಅಗತ್ಯವಿಲ್ಲ: ರವಿಶಂಕರ ಪ್ರಸಾದ್

ಕೇಂದ್ರ ಚಲನಚಿತ್ರ ಸೆನ್ಸಾರ್ ಮಂಡಳಿಯ ಮುಖ್ಯಸ್ಥ ಪಹ್ಲಾಜ್ ನಿಹಲಾನಿಯವರ ಹೇಳಿಕೆಗೆ ಆಕ್ಷೇಪ ವ್ಯಕ್ತಪಡಿಸಿರುವ...

ಮುಂಬೈ: ಕೇಂದ್ರ ಚಲನಚಿತ್ರ ಸೆನ್ಸಾರ್ ಮಂಡಳಿಯ ಮುಖ್ಯಸ್ಥ ಪಹ್ಲಾಜ್ ನಿಹಲಾನಿಯವರ ಹೇಳಿಕೆಗೆ ಆಕ್ಷೇಪ ವ್ಯಕ್ತಪಡಿಸಿರುವ ಕೇಂದ್ರ ಸಚಿವ ರವಿಶಂಕರ ಪ್ರಸಾದ್, ಪ್ರಧಾನ ಮಂತ್ರಿ ನರೇಂದ್ರ ಮೋದಿಯವರಿಗೆ ಭಟ್ಟಂಗಿಗಳು ಅಥವಾ ಹೊಗಳುಭಟರ ಅಗತ್ಯವಿಲ್ಲ ಎಂದು ಹೇಳಿದ್ದಾರೆ.

ಉಡ್ತಾ ಪಂಜಾಬ್ ಚಿತ್ರಕ್ಕೆ ಕತ್ತರಿ ಪ್ರಯೋಗ ಮಾಡಿದ್ದಕ್ಕಾಗಿ ಕೇಳಿಬರುತ್ತಿರುವ ವ್ಯಾಪಕ ಟೀಕೆಗೆ ಖಾಸಗಿ ಸುದ್ದಿವಾಹಿನಿಯೊಂದಕ್ಕೆ ಈ ಮುನ್ನ ಪ್ರತಿಕ್ರಿಯೆ ನೀಡಿದ್ದ ನಿಹಲಾನಿ, ''ಹೌದು, ಚಿತ್ರ ನಿರ್ದೇಶಕ ಅನುರಾಗ್ ಕಶ್ಯಪ್ ಹೇಳಿದಂತೆ ನಾನು ನರೇಂದ್ರ ಮೋದಿಯವರ ಚಮಚ. ಮೋದಿಯವರ ಚಮಚನಾಗಿರುವುದಕ್ಕೆ ನನಗೆ ಹೆಮ್ಮೆಯಿದೆ. ಮತ್ತೇನು ನಾನು ಇಟೆಲಿಯ ಪ್ರಧಾನಿಗೆ ಚಮಚನಾಗಿರಬೇಕೆ ಎಂದು ಕೇಳಿದ್ದರು.

ಪಹ್ಲಾಜ್ ಅವರ ಹೇಳಿಕೆಗೆ ಆಕ್ಷೇಪ ವ್ಯಕ್ತಪಡಿಸಿರುವ ಕೇಂದ್ರ ಸಚಿವ ರವಿಶಂಕರ್ ಪ್ರಸಾದ್, ಇಂತಹ ಹೇಳಿಕೆ ನೀಡಬಾರದು. ನಮ್ಮ ಪ್ರಧಾನಿಗಳು ತಮ್ಮನ್ನು ಪ್ರಧಾನ್ ಸೇವಕ್ (ಜನಗಳ ಸೇವೆ ಮಾಡುವವರು) ಎಂದು ಸಂಬೋಧಿಸಿಕೊಳ್ಳುತ್ತಾರೆ. ಪ್ರಧಾನ ಸೇವಕನಾದವನಿಗೆ ಹೊಗಳುಭಟರ, ಭಟ್ಟಂಗಿಗಳ ಅಗತ್ಯವಿಲ್ಲ ಎಂದರು.

ಬಿಜೆಪಿ ಬೆಂಬಲಿಗ ಎಂದು ಗುರುತಿಸಿಕೊಂಡಿರುವ ಪಹ್ಲಾಜ್ ನಿಹಲಾನಿ, ಡ್ರಗ್ ಮಾಫಿಯಾ ಬಗ್ಗೆ ಚಿತ್ರದಲ್ಲಿರುವುದರಿಂದ ಮುಂದಿನ ವರ್ಷ ಪಂಜಾಬ್ ನಲ್ಲಿ ಚುನಾವಣೆ ನಡೆಯಲಿರುವುದರಿಂದ ಬಿಜೆಪಿ ಮೇಲೆ ಯಾವುದೇ ಪ್ರಭಾವ ಬೀರಬಾರದು ರಾಜಕೀಯ ಒತ್ತಡಕ್ಕೊಳಗಾಗಿ ಚಿತ್ರಕ್ಕೆ ಕತ್ತರಿ ಹಾಕಿದ್ದಾರೆ ಎಂಬುದು ಆಪ್ ಮತ್ತು ಕಾಂಗ್ರೆಸ್ ಪಕ್ಷಗಳ ಆರೋಪ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT