ದೇಶ

2000 ಜನರು ಭೂಕಬಳಿಕೆ ಮಾಡಿದ್ದರೂ ಮಾಹಿತಿ ಇಲ್ಲ...ಇದೆಂತಹ ಸರ್ಕಾರ: ರಾಜನಾಥ್

ಮಥುರಾದಲ್ಲಿ 2 ಸಾವಿರದಷ್ಟು ಜನರು ಭೂಕಬಳಿಕೆಮಾಡಿದ್ದಾರೆ. ರಾಜ್ಯದಲ್ಲಿ ಇಷ್ಟು ದೊಡ್ಡಮಟ್ಟದಲ್ಲಿ ಭೂಕಬಳಿಕೆಯಾಗಿದ್ದರೂ ಇಲ್ಲಿ ಸರ್ಕಾರಕ್ಕೆ ಮಾತ್ರ ಈ ಬಗೆಗಿನ ಮಾಹಿತಿ ತಿಳಿದಿಲ್ಲ...

ಲಖನೌ: ಮಥುರಾದಲ್ಲಿ 2 ಸಾವಿರದಷ್ಟು ಜನರು ಭೂಕಬಳಿಕೆಮಾಡಿದ್ದಾರೆ. ರಾಜ್ಯದಲ್ಲಿ ಇಷ್ಟು ದೊಡ್ಡಮಟ್ಟದಲ್ಲಿ ಭೂಕಬಳಿಕೆಯಾಗಿದ್ದರೂ ಇಲ್ಲಿ ಸರ್ಕಾರಕ್ಕೆ ಮಾತ್ರ ಈ ಬಗೆಗಿನ ಮಾಹಿತಿ ತಿಳಿದಿಲ್ಲ. ಇದೆಂತಹ ಸರ್ಕಾರ ಎಂದು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರು ಗುರುವಾರ ಹೇಳಿದ್ದಾರೆ.

ಉತ್ತರಪ್ರದೇಶದಲ್ಲಿ ಆಯೋಜನೆ ಮಾಡಲಾಗಿದ್ದ ಸಾರ್ವಜನಿಕ ಸಭೆಯೊಂದರಲ್ಲಿ ಮಾತನಾಡಿರುವ ಅವರು, ಮಥುರಾದಲ್ಲಿ 2 ಸಾವಿರಕ್ಕೂ ಅಧಿಕ ಮಂದಿ ಇಲ್ಲಿನ ಭೂಮಿಯನ್ನು ಕಬಳಿಕೆ ಮಾಡಿದ್ದಾರೆ. ಆದರೆ, ಈ ಬಗ್ಗೆ ಸರ್ಕಾರದ ಅರಿವೇ ಇಲ್ಲ. ಇದಾವ ರೀತಿಯ ಸರ್ಕಾರ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಅಲಹಾಬಾದ್ ಹೈ ಕೋರ್ಟ್ ಆದೇಶದ ಮೇರೆಗೆ ಪೊಲೀಸರು ಅಕ್ರಮವಾಗಿ ಕಬಳಿಕೆ ಮಾಡಿದ್ದ ಭೂಮಿಯನ್ನು ತೆರವುಗೊಳಿಸಲು ಹೋದಾಗ ಬಹುಸಂಖ್ಯಾತ ಜನರು ಒಟ್ಟಾರೆ ಸೇರಿದ್ದಾರೆ. ಈ ವೇಳೆ ಸ್ಥಳದಲ್ಲಿ ಘರ್ಷಣೆ ಆರಂಭವಾಗಿ ಘರ್ಷಣೆ ಹಿಂಸಾಚಾರಕ್ಕೆ ತಿರುಗಿದೆ. ಘಠನೆಯಲ್ಲಿ 29 ಮಂದಿ ಸಾವನ್ನಪ್ಪಿದ್ದಾರೆ.

ಉತ್ತರ ಪ್ರದೇಶ ಸರ್ಕಾರ ಮಥುರಾ ಘರ್ಷಣೆಯನ್ನು ಸಿಬಿಐ ತನಿಖೆಗೆ ಒಪ್ಪಿಸಲು ಆಗ್ರಹಿಸಿದ್ದೇ ಆದರೆ, ಸಿಬಿಐ ತನಿಖೆಗೆ ಒಪ್ಪಿಸಲು ಕೇಂದ್ರ ಸಿದ್ಧವಿದೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್