ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ (ಸಂಗ್ರಹ ಚಿತ್ರ) 
ದೇಶ

ಹಣದುಬ್ಬರದ ವಿರುದ್ಧ ನಮ್ಮ ಹೋರಾಟ ಮುಂದುವರೆಯಲಿದೆ: ರಾಹುಲ್ ಗಾಂಧಿ

ದೇಶದ ಹಣದುಬ್ಬರ ಪರಿಶೀಲನೆ ನಡೆಸುವಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ವಿಫಲವಾಗಿದ್ದು, ಹಣದುಬ್ಬರದ ವಿರುದ್ಧ ನಮ್ಮ ಹೋರಾಟ ಮುಂದುವರೆಯಲಿದೆ...

ಘಾಜಿಯಾಬಾದ್: ದೇಶದ ಹಣದುಬ್ಬರ ಪರಿಶೀಲನೆ ನಡೆಸುವಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ವಿಫಲವಾಗಿದ್ದು, ಹಣದುಬ್ಬರದ ವಿರುದ್ಧ ನಮ್ಮ ಹೋರಾಟ ಮುಂದುವರೆಯಲಿದೆ ಎಂದು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿಯವರು ಶನಿವಾರ ಹೇಳಿದ್ದಾರೆ.

ಜೂ.8 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಭಾವಚಿತ್ರಕ್ಕೆ ಬೆಂಕಿ ಹಚ್ಚುವಾಗ ಗಾಯಗೊಂಡಿದ್ದ ಕಾಂಗ್ರೆಸ್ ಕಾರ್ಯಕರ್ತೆ ಮೀನಾ ದೇವಿಯವರನ್ನು ಭೇಟಿ ಮಾಡಿದ ಬಳಿಕ ಮಾತನಾಡಿರುವ ಅವರು, ಹಣದುಬ್ಬರ ದೇಶದ ಪ್ರಮುಖ ಸಮಸ್ಯೆಗಳಲ್ಲಿ ಒಂದಾಗಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಅಧಿಕಾರಕ್ಕೆ ಬರುವಾಗ ಹಣದುಬ್ಬರವನ್ನು ಇಳಿಕೆ ಮಾಡುವುದಾಗಿ ಹೇಳಿದ್ದರು. ಆದರೆ, ಹಣದುಬ್ಬರ ಏರಿಕೆಯಾಗುತ್ತಲೇ ಬಂದಿದೆ. ಹೀಗಾಗಿ ಹಣದುಬ್ಬರದ ವಿರುದ್ಧ ನಮ್ಮ ಹೋರಾಟವನ್ನು ಮುಂದುವರೆಸುತ್ತೇವೆಂದು ಹೇಳಿದ್ದಾರೆ.

ಜೂನ್. 8 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಭಾವಚಿತ್ರಕ್ಕೆ ಬೆಂಕಿ ಹಚ್ಚುತ್ತಿದ್ದ ವೇಳೆ ಮೀನಾ ದೇವಿಯವರು ಹತ್ತಿರದಲ್ಲೇ ಇದ್ದ ಕಾರಣ ಗಂಭೀರವಾಗಿ ಗಾಯಗೊಂಡಿದ್ದರು. ಅಲ್ಲದೆ, ಅವರ ಗಾರ್ಮೆಂಟ್ಸ್ ಕಾರ್ಖಾನೆಗೆ ಬೆಂಕಿ ಹತ್ತಿಕೊಂಡಿತ್ತು. ಘಟನೆ ವೇಳೆ ಮೀನಾ ದೇವಿಯವರನ್ನು ರಕ್ಷಿಸಲು ಹೋಗಿದ್ದ ನರೇಂದ್ರ ಬಾಲ್ಮಿಕಿ ಎಂಬುವವರು ಗಾಯಗೊಂಡಿದ್ದರು, ನಂತರ ಇಬ್ಬರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

Eiffel Tower ಇನ್ನು ನೆನಪು ಮಾತ್ರ?: ಪ್ರಸಿದ್ಧ ಸ್ಮಾರಕ ಕೆಡವುತ್ತಿರುವ ಬಗ್ಗೆ ಟ್ಯಾಪಿಯೋಕಾ ಟೈಮ್ಸ್ ಹೇಳಿದ್ದೇನು?

SCROLL FOR NEXT