ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ (ಸಂಗ್ರಹ ಚಿತ್ರ) 
ದೇಶ

ಹಣದುಬ್ಬರದ ವಿರುದ್ಧ ನಮ್ಮ ಹೋರಾಟ ಮುಂದುವರೆಯಲಿದೆ: ರಾಹುಲ್ ಗಾಂಧಿ

ದೇಶದ ಹಣದುಬ್ಬರ ಪರಿಶೀಲನೆ ನಡೆಸುವಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ವಿಫಲವಾಗಿದ್ದು, ಹಣದುಬ್ಬರದ ವಿರುದ್ಧ ನಮ್ಮ ಹೋರಾಟ ಮುಂದುವರೆಯಲಿದೆ...

ಘಾಜಿಯಾಬಾದ್: ದೇಶದ ಹಣದುಬ್ಬರ ಪರಿಶೀಲನೆ ನಡೆಸುವಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ವಿಫಲವಾಗಿದ್ದು, ಹಣದುಬ್ಬರದ ವಿರುದ್ಧ ನಮ್ಮ ಹೋರಾಟ ಮುಂದುವರೆಯಲಿದೆ ಎಂದು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿಯವರು ಶನಿವಾರ ಹೇಳಿದ್ದಾರೆ.

ಜೂ.8 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಭಾವಚಿತ್ರಕ್ಕೆ ಬೆಂಕಿ ಹಚ್ಚುವಾಗ ಗಾಯಗೊಂಡಿದ್ದ ಕಾಂಗ್ರೆಸ್ ಕಾರ್ಯಕರ್ತೆ ಮೀನಾ ದೇವಿಯವರನ್ನು ಭೇಟಿ ಮಾಡಿದ ಬಳಿಕ ಮಾತನಾಡಿರುವ ಅವರು, ಹಣದುಬ್ಬರ ದೇಶದ ಪ್ರಮುಖ ಸಮಸ್ಯೆಗಳಲ್ಲಿ ಒಂದಾಗಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಅಧಿಕಾರಕ್ಕೆ ಬರುವಾಗ ಹಣದುಬ್ಬರವನ್ನು ಇಳಿಕೆ ಮಾಡುವುದಾಗಿ ಹೇಳಿದ್ದರು. ಆದರೆ, ಹಣದುಬ್ಬರ ಏರಿಕೆಯಾಗುತ್ತಲೇ ಬಂದಿದೆ. ಹೀಗಾಗಿ ಹಣದುಬ್ಬರದ ವಿರುದ್ಧ ನಮ್ಮ ಹೋರಾಟವನ್ನು ಮುಂದುವರೆಸುತ್ತೇವೆಂದು ಹೇಳಿದ್ದಾರೆ.

ಜೂನ್. 8 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಭಾವಚಿತ್ರಕ್ಕೆ ಬೆಂಕಿ ಹಚ್ಚುತ್ತಿದ್ದ ವೇಳೆ ಮೀನಾ ದೇವಿಯವರು ಹತ್ತಿರದಲ್ಲೇ ಇದ್ದ ಕಾರಣ ಗಂಭೀರವಾಗಿ ಗಾಯಗೊಂಡಿದ್ದರು. ಅಲ್ಲದೆ, ಅವರ ಗಾರ್ಮೆಂಟ್ಸ್ ಕಾರ್ಖಾನೆಗೆ ಬೆಂಕಿ ಹತ್ತಿಕೊಂಡಿತ್ತು. ಘಟನೆ ವೇಳೆ ಮೀನಾ ದೇವಿಯವರನ್ನು ರಕ್ಷಿಸಲು ಹೋಗಿದ್ದ ನರೇಂದ್ರ ಬಾಲ್ಮಿಕಿ ಎಂಬುವವರು ಗಾಯಗೊಂಡಿದ್ದರು, ನಂತರ ಇಬ್ಬರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಶಾಂತಿ ಮಾತುಕತೆ ವಿಫಲ: ಅಮೆರಿಕ ಟೆಹ್ರಾನ್‌ನ ವಿಶ್ವಾಸ ಗಳಿಸಲು ಸಾಧ್ಯವಾಗಲಿಲ್ಲ; ಇರಾನ್ ಸ್ಪೀಕರ್

US-Iran ಶಾಂತಿ ಮಾತುಕತೆ ವಿಫಲ ಬೆನ್ನಲ್ಲೇ Pakistanಗೆ ಜಾಕ್‌ಪಾಟ್‌: ಕತಾರ್, ಸೌದಿಯಿಂದ 5 ಬಿಲಿಯನ್ ಡಾಲರ್ ಆರ್ಥಿಕ ನೆರವು!

IPL 2026: ಖಂಡಿತಾ ಕ್ರಮ ಕೈಗೊಳ್ಳುತ್ತೇವೆ ; RR vs RCB ಪಂದ್ಯದ 'ಭ್ರಷ್ಟಾಚಾರ ವಿರೋಧಿ' ಶಿಷ್ಟಾಚಾರ ಉಲ್ಲಂಘನೆಗೆ BCCI ಖಡಕ್ ಪ್ರತಿಕ್ರಿಯೆ

'ಬಹು ಅಂಗಾಂಗ ವೈಫಲ್ಯದಿಂದ ಗಾಯಕಿ ಆಶಾ ಭೋಸ್ಲೆ ನಿಧನ': ಬ್ರೀಚ್ ಕ್ಯಾಂಡಿ ಆಸ್ಪತ್ರೆ ಸ್ಪಷ್ಟನೆ

US-Iran ಶಾಂತಿ ಒಪ್ಪಂದ ವಿಫಲ: ಪಾಕಿಸ್ತಾನ ಕುತಂತ್ರ; ಸೌದಿಗೆ 13,000 Pak ಸೈನಿಕರು, 18 ಯುದ್ಧ ವಿಮಾನ ರವಾನೆ!

SCROLL FOR NEXT