ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ (ಸಂಗ್ರಹ ಚಿತ್ರ) 
ದೇಶ

ಹಣದುಬ್ಬರದ ವಿರುದ್ಧ ನಮ್ಮ ಹೋರಾಟ ಮುಂದುವರೆಯಲಿದೆ: ರಾಹುಲ್ ಗಾಂಧಿ

ದೇಶದ ಹಣದುಬ್ಬರ ಪರಿಶೀಲನೆ ನಡೆಸುವಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ವಿಫಲವಾಗಿದ್ದು, ಹಣದುಬ್ಬರದ ವಿರುದ್ಧ ನಮ್ಮ ಹೋರಾಟ ಮುಂದುವರೆಯಲಿದೆ...

ಘಾಜಿಯಾಬಾದ್: ದೇಶದ ಹಣದುಬ್ಬರ ಪರಿಶೀಲನೆ ನಡೆಸುವಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ವಿಫಲವಾಗಿದ್ದು, ಹಣದುಬ್ಬರದ ವಿರುದ್ಧ ನಮ್ಮ ಹೋರಾಟ ಮುಂದುವರೆಯಲಿದೆ ಎಂದು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿಯವರು ಶನಿವಾರ ಹೇಳಿದ್ದಾರೆ.

ಜೂ.8 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಭಾವಚಿತ್ರಕ್ಕೆ ಬೆಂಕಿ ಹಚ್ಚುವಾಗ ಗಾಯಗೊಂಡಿದ್ದ ಕಾಂಗ್ರೆಸ್ ಕಾರ್ಯಕರ್ತೆ ಮೀನಾ ದೇವಿಯವರನ್ನು ಭೇಟಿ ಮಾಡಿದ ಬಳಿಕ ಮಾತನಾಡಿರುವ ಅವರು, ಹಣದುಬ್ಬರ ದೇಶದ ಪ್ರಮುಖ ಸಮಸ್ಯೆಗಳಲ್ಲಿ ಒಂದಾಗಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಅಧಿಕಾರಕ್ಕೆ ಬರುವಾಗ ಹಣದುಬ್ಬರವನ್ನು ಇಳಿಕೆ ಮಾಡುವುದಾಗಿ ಹೇಳಿದ್ದರು. ಆದರೆ, ಹಣದುಬ್ಬರ ಏರಿಕೆಯಾಗುತ್ತಲೇ ಬಂದಿದೆ. ಹೀಗಾಗಿ ಹಣದುಬ್ಬರದ ವಿರುದ್ಧ ನಮ್ಮ ಹೋರಾಟವನ್ನು ಮುಂದುವರೆಸುತ್ತೇವೆಂದು ಹೇಳಿದ್ದಾರೆ.

ಜೂನ್. 8 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಭಾವಚಿತ್ರಕ್ಕೆ ಬೆಂಕಿ ಹಚ್ಚುತ್ತಿದ್ದ ವೇಳೆ ಮೀನಾ ದೇವಿಯವರು ಹತ್ತಿರದಲ್ಲೇ ಇದ್ದ ಕಾರಣ ಗಂಭೀರವಾಗಿ ಗಾಯಗೊಂಡಿದ್ದರು. ಅಲ್ಲದೆ, ಅವರ ಗಾರ್ಮೆಂಟ್ಸ್ ಕಾರ್ಖಾನೆಗೆ ಬೆಂಕಿ ಹತ್ತಿಕೊಂಡಿತ್ತು. ಘಟನೆ ವೇಳೆ ಮೀನಾ ದೇವಿಯವರನ್ನು ರಕ್ಷಿಸಲು ಹೋಗಿದ್ದ ನರೇಂದ್ರ ಬಾಲ್ಮಿಕಿ ಎಂಬುವವರು ಗಾಯಗೊಂಡಿದ್ದರು, ನಂತರ ಇಬ್ಬರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel