ಕಾಶ್ಮೀರದ ಭವಾನಿ ದೇವಾಲಯ 
ದೇಶ

ಕಾಶ್ಮೀರದಲ್ಲಿರುವ ಭವಾನಿ ದೇವಾಲಯಕ್ಕೆ ಭೇಟಿ ನೀಡಿದ ನೂರಾರು ಕಾಶ್ಮೀರಿ ಪಂಡಿತರು

ಮಾತಾ ರಾಜ್ಞ್ಯಾ ದೇವಿಗೆ ವಾರ್ಷಿಕ ಪೂಜೆ ಸಲ್ಲಿಸುವ ಸಂಪ್ರದಾಯ ಹೊಂದಿರುವ ಕಾಶ್ಮೀರಿ ಪಂಡಿತರು, ಜೂ.12 ರಂದು ಕಾಶ್ಮೀರದಲ್ಲಿರುವ ಭವಾನಿ ದೇವಾಲಯಕ್ಕೆ ಭೇಟಿ ನೀಡಿ ರಾಜ್ಞ್ಯಾ ದೇವಿಗೆ ಪೂಜೆ ಸಲ್ಲಿಸಿದ್ದಾರೆ.

ಶ್ರೀನಗರ: ಮಾತಾ ರಾಜ್ಞ್ಯಾ ದೇವಿಗೆ ವಾರ್ಷಿಕ ಪೂಜೆ ಸಲ್ಲಿಸುವ ಸಂಪ್ರದಾಯ ಹೊಂದಿರುವ ಕಾಶ್ಮೀರಿ ಪಂಡಿತರು, ಜೂ.12 ರಂದು ಕಾಶ್ಮೀರದಲ್ಲಿರುವ ಭವಾನಿ ದೇವಾಲಯಕ್ಕೆ ಭೇಟಿ ನೀಡಿ ರಾಜ್ಞ್ಯಾ ದೇವಿಗೆ ಪೂಜೆ ಸಲ್ಲಿಸಿದ್ದಾರೆ.

ಖೀರ್ ಭವಾನಿ ದೇವಾಲಯಕ್ಕೆ ಭೇಟಿ ನೀಡಿದ್ದ ಕಾಶ್ಮೀರಿ ಪಂಡಿತರ ಪೈಕಿ ಹೆಚ್ಚಿನವರು ವಲಸೆ ಹೋಗಿರುವ ಪಂಡಿತರಾಗಿದ್ದು, ರಾಜ್ಞ್ಯಾ ದೇವಿಗೆ ಪೂಜೆ ಸಲ್ಲಿಸಲು ದೇಶದ ವಿವಿಧ ಭಾಗಗಳಿಂದ ಆಗಮಿಸಿದ್ದರು. ಕಾಶ್ಮೀರದ ರಾಜಧಾನಿ ಶ್ರೀನಗರದಿಂದ 24 ಕಿಮಿ ದೂರದಲ್ಲಿರುವ ಖೀರ್ ಭವಾನಿ ದೇವಾಲಯದಲ್ಲಿ ಕಾಶ್ಮೀರಿ ಪಂಡಿತರು ಪ್ರತಿ ವರ್ಷವೂ ಪೂಜೆ ಸಲ್ಲಿಸುವ ಪದ್ಧತಿ ಹೊಂದಿದ್ದಾರೆ.   
1990 ರಲ್ಲಿ ಕಾಶ್ಮೀರದಲ್ಲಿ ಪಂಡಿತರ ಮೇಲೆ ಇಸ್ಲಾಮಿಕ್ ಮೂಲಭೂತವಾದಿಗಳಿಂದ ದೌರ್ಜನ್ಯ ನಡೆದು ಬಹುತೇಕ ಪಂಡಿತರ ಕುಟುಂಬಗಳು ಹೊರನಡೆದಿದ್ದರು ಇಂದಿಗೂ ದೇವಾಲಯಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸುವ ಪದ್ಧತಿ ಚಾಲ್ತಿಯಲ್ಲಿದೆ. ಈ ಬಾರಿ ಸುಮಾರು 13 ,000 ವಲಸೆ ಹೋಗಿರುವ ಕಾಶ್ಮೀರಿ ಪಂಡಿತರು ದೇವಾಲಯಕ್ಕೆ ಆಗಮಿಸಿ ಪೂಜೆ ಸಲ್ಲಿಸಿದ್ದಾರೆ. ಇನ್ನು ದೇವಾಲಯದ ಪ್ರದೇಶದಲ್ಲಿರುವ ಮುಸ್ಲಿಮರು ಕಾಶ್ಮೀರಿ ಪಂಡಿತರನ್ನು ಸ್ವಾಗತಿಸಿದರು, ದೇವಿ ರಾಜ್ಞ್ಯಾ ದೇವಾಲಯಕ್ಕೆ ಪಂಡಿತರು ಭೇಟಿ ನೀಡುವುದಕ್ಕೂ ಮುನ್ನ ಜಮ್ಮು-ಕಾಶ್ಮೀರ ಸಿಎಂ ಮೆಹಬೂಮಾ ಮುಫ್ತಿ ಸಹ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೆಹಲಿಯಲ್ಲಿ ಭೀಕರ ಅಪಘಾತ: ನಿಯಂತ್ರಣ ತಪ್ಪಿ ಡಿವೈಡರ್‌ ದಾಟಿ SUVಗೆ ಕಾರು ಡಿಕ್ಕಿ, ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸೇರಿ 6 ಮಂದಿಗೆ ಗಾಯ..!

ರಾಹುಲ್ ಗಾಂಧಿ ನಿಲುವಿಗೆ ಉಲ್ಟಾ ಹೊಡೆದರೇ ಡಿಕೆಶಿ? CM ನಿವಾಸಕ್ಕೆ ಅದಾನಿ ಭೇಟಿ; ಕೈ ಪಾಳಯದಲ್ಲಿ ಭುಗಿಲೆದ್ದ ಅಸಮಾಧಾನ..!

KPSC ಹಗರಣ: IAS ಅಧಿಕಾರಿ ಗಂಗ್ವಾರ್ ಮನೆ ಮೇಲೆ ED ದಾಳಿ; ಗೇಟ್ ಲಾಕ್ ಮಾಡಿ ಸೆಕ್ಯೂರಿಟಿ ಹೈಡ್ರಾಮಾ, ಕೀ ಮೇಕರ್ ಕರೆಯಿಸಿ ಬಾಗಿಲು ಮುರಿದ ಅಧಿಕಾರಿಗಳು..!

Operation Sindoorನಲ್ಲಿ ಧ್ವಂಸವಾಗಿದ್ದ ಜೈಶ್ ನೆಲೆ ಮರುನಿರ್ಮಾಣ! ಪಾಕ್‌ ಸರ್ಕಾರದಿಂದ 25 ಕೋಟಿ ನೆರವು!

Onion Price: ದಿಢೀರ್ ಈರುಳ್ಳಿ ಬೆಲೆ ಏರಿಕೆ; ಸೆಪ್ಟೆಂಬರ್-ಅಕ್ಟೋಬರ್‌ನಲ್ಲಿ ಮತ್ತಷ್ಟು ದುಬಾರಿ ಸಾಧ್ಯತೆ, ದರ ಏರಿಕೆಗೆ ಕಾರಣವೇನು?