ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ 
ದೇಶ

ಲೈಂಗಿಕ ಕಾರ್ಯಕರ್ತರು, ಹೆಚ್ಐವಿ ರೋಗಿಗಳಿಗೆ ರು.2ಗೆ 1 ಕೆ.ಜಿ ಅಕ್ಕಿ: ದೀದಿ ಸರ್ಕಾರದ ಹೊಸ ಘೋಷಣೆ

ಲೈಂಗಿಕ ಕಾರ್ಯಕರ್ತರು ಹಾಗೂ ಹೆಚ್ಐವಿ ಪೀಡಿತ ರೋಗಿಗಳ ಕುರಿತಂತೆ ಕಾಳಜಿ ವಹಿಸಿರುವ ಪಶ್ಚಿಮ ಬಂಗಾಳ ಸರ್ಕಾರ ದೇಶದಲ್ಲೇ ಮೊದಲ ಬಾರಿಗೆ ಲೈಂಗಿಕ ಕಾರ್ಯಕರ್ತರು...

ಕೋಲ್ಕತಾ: ಲೈಂಗಿಕ ಕಾರ್ಯಕರ್ತರು ಹಾಗೂ ಹೆಚ್ಐವಿ ಪೀಡಿತ ರೋಗಿಗಳ ಕುರಿತಂತೆ ಕಾಳಜಿ ವಹಿಸಿರುವ ಪಶ್ಚಿಮ ಬಂಗಾಳ ಸರ್ಕಾರ ದೇಶದಲ್ಲೇ ಮೊದಲ ಬಾರಿಗೆ ಲೈಂಗಿಕ ಕಾರ್ಯಕರ್ತರು ಹಾಗೂ ಹೆಚ್ಐವಿ ಪೀಡಿತ ರೋಗಿಗಳಿಗೆ ರು.2ಕ್ಕೆ 1 ಕೆ.ಜಿ ಅಕ್ಕಿ ನೀಡುವುದಾಗಿ ಭಾನುವಾರ ಘೋಷಣೆ ಮಾಡಿದೆ.

ಈ ಕುರಿತಂತೆ ಖಾಸಗಿ ಮಾಧ್ಯಮವೊಂದರ ಸಂದರ್ಶದನಲ್ಲಿ ಮಾತನಾಡಿರುವ ರಾಜ್ಯ ಆಹಾರ ಮತ್ತು ಸರಬರಾಜು ಸಚಿವ ಜ್ಯೋತಿಪ್ರಿಯೋ ಮುಲ್ಲಿಖ್ಕ್ ಅವರು, ಲೈಂಗಿಕ ಕಾರ್ಯಕರ್ತರು ಹಾಗೂ ಹೆಚ್ಐವಿ ಪೀಡಿತ ರೋಗಿಗಳಿಗೆ ರು.2ಕ್ಕೆ 1 ಕೆ.ಜಿ ಅಕ್ಕಿ ನೀಡಲು ರಾಜ್ಯ ಸರ್ಕಾರ ತೀರ್ಮಾನಿಸಿದ್ದು, ಯೋಜನೆಯಡಿಯಲ್ಲಿ ಕುಷ್ಠರೋಗಿಗಳು ಹಾಗೂ ಕಿವಿ ಕೇಳದ, ಮಾತುಬಾರದ ಮಕ್ಕಳ ಕುಟುಂಬಕ್ಕೂ ರು.2ಕ್ಕೆ 1 ಕೆಜಿಅಕ್ಕಿಯನ್ನು ನೀಡಲಾಗುತ್ತದೆ ಎಂದು ಹೇಳಿದ್ದಾರೆ.

ರೋಗಿಗಳು, ಮಕ್ಕಳ ಕುರಿತಂತೆ ಸರ್ಕಾರ ಸಮೀಕ್ಷೆ ನಡೆಸಲು ತೀರ್ಮಾನಿಸಿದ್ದು, ಸಮೀಕ್ಷೆ ಇನ್ನು ಕೆಲವೇ ದಿನಗಳಲ್ಲಿ ಆರಂಭಗೊಳ್ಳಲಿದೆ. ಸಮೀಕ್ಷೆಯಲ್ಲಿ ಲೈಂಗಿಕ ಕಾರ್ಯಕರ್ತರು, ಹೆಚ್ಐವಿ ಪೀಡಿತ ರೋಗಿಗಳ ಸಂಖ್ಯೆಯನ್ನು ತಿಳಿದುಕೊಂಡು ಆ ಕುಟುಂಬಗಳಿಗೆ ಯೋಜನೆಯ ಫಲ ಸಿಗುವಂತೆ ಮಾಡಲಾಗುತ್ತದೆ. ಈ ಸಮೀಕ್ಷೆ 6 ತಿಂಗಳಳೊಗಾಗಿ ಪೂರ್ಣಗೊಳಿಸಲಾಗುತ್ತದೆ. ಯೋಜನೆಯನ್ನು ಮುಂದಿನ ವರ್ಷ ಆರಂಭಿಕ ತಿಂಗಳಿನಲ್ಲಿ ಅನುಷ್ಠಾನಕ್ಕೆ ತರಲಾಗುತ್ತದೆ.

ಅನಾರೋಗ್ಯ ಪೀಡಿತರಾದ ಲೈಂಗಿಕ ಕಾರ್ಯಕರ್ತರು ಹಾಗೂ ಕುಷ್ಟರೋಗಿಗಳು ಅನುಭವಿಸುವ ಯಾತನೆಯನ್ನು ನಾವು ನೋಡಿದ್ದೇವೆ. ಹೀಗಾಗಿ ಅವರ ಸಹಾಯಕ್ಕಾಗಿ ಹೊಸ ಯೋಜನೆಯನ್ನು ಜಾರಿಗೆ ತರಲು ಚಿಂತನೆ ನಡೆಸಲಾಗಿದೆ. ಯೋಜನೆಯಿಂದಾಗಿ ಕೊಂಚ ಮಟ್ಟಿಗಾದರೂ ಸಹಾಯವಾಗಲಿ ಎಂಬುದು ನಮ್ಮ ಅನಿಸಿಕೆ. ಸಮೀಕ್ಷೆಯನ್ನು ಸ್ಥಳೀಯ ಅಧಿಕಾರಿಗಳು ಹಾಗೂ ಆಹಾರ ಇಲಾಖೆಯ ವತಿಯಿಂದಲೇ ನಡೆಸಲಾಗುತ್ತದೆ. ಹೆಚ್ಐವಿ ರೋಗಿಗಳಿಗೆ ಚಿಕಿತ್ಸೆ ನೀಡುತ್ತಿರುವ ಎಲ್ಲಾ ಆಸ್ಪತ್ರೆಗಳಿಗೂ ಆಹಾರ ಇಲಾಖೆ ಅಧಿಕಾರಿಗಳನ್ನು ನೇಮಿಸಲಾಗುತ್ತದೆ. ಆಸ್ಪತ್ರೆಯ ವರದಿಯನ್ನು ಪರಿಶೀಲಿಸಿ ರೋಗಿಗಳಿಗೆ ಯೋಜನೆಯ ಫಲ ಒದಗಿಸಲಾಗುತ್ತದೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT