ಪರ್ಕಾಶ್ ಸಿಂಗ್ ಬಾದಲ್ 
ದೇಶ

ಕಮಾಲ್ ನಾಥ್ ಗೆ ಪಂಜಾಬ್ ಕಾಂಗ್ರೆಸ್ ಉಸ್ತುವಾರಿ; ಸಿಖ್ಖರಿಗೆ ಮಾಡಿದ ಅವಮಾನ: ಬಾದಲ್

ಕಾಂಗ್ರೆಸ್ ಪಕ್ಷ ಸಿಖ್-ವಿರೋಧಿ ದಂಗೆಯ ಪ್ರಮುಖ ಆರೋಪಿ ಕಮಲ್ ನಾಥ್ ಅವರನ್ನು ಪಂಜಾಬ್ ನ ಕಾಂಗ್ರೆಸ್ ಉಸ್ತುವಾರಿಯಾಗಿ ನೇಮಕ ಮಾಡಿರುವುದು ಸಿಖ್ ಸಮುದಾಯಕ್ಕೆ ಮಾಡಿದ ಬಹುದೊಡ್ಡ ಅವಮಾನ ಎಂದು ಪಂಜಾಬ್ ಸಿಎಂ ಪರ್ಕಾಶ್ ಸಿಂಗ್ ಬಾದಲ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಚಂಡೀಗಢ: ಕಾಂಗ್ರೆಸ್ ಪಕ್ಷ ಸಿಖ್-ವಿರೋಧಿ ದಂಗೆಯ ಪ್ರಮುಖ ಆರೋಪಿ ಕಮಲ್ ನಾಥ್ ಅವರನ್ನು ಪಂಜಾಬ್ ನ ಕಾಂಗ್ರೆಸ್ ಉಸ್ತುವಾರಿಯಾಗಿ ನೇಮಕ ಮಾಡಿರುವುದು ಸಿಖ್ ಸಮುದಾಯಕ್ಕೆ ಮಾಡಿದ ಬಹುದೊಡ್ಡ ಅವಮಾನ ಎಂದು ಪಂಜಾಬ್ ಸಿಎಂ ಪರ್ಕಾಶ್ ಸಿಂಗ್ ಬಾದಲ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ರಾಷ್ಟ್ರೀಯ ಪಕ್ಷವಾಗಿರುವ ಕಾಂಗ್ರೆಸ್ ಪಕ್ಷ ಸಿಖ್ ನರಮೇಧದಲ್ಲಿ ಪ್ರಮುಖ ಆರೋಪಿಯಾಗಿರುವವರನ್ನು ಪಂಜಾಬ್ ಘಟಕದ ಉಸ್ತುವಾರಿಯನ್ನಾಗಿ ನೇಮಿಸುವ ಮಟ್ಟಿಗೆ ಸಿಖ್ ಸಮುದಾಯದ ಬಗ್ಗೆ ಸಂವೇದನೆ ಕಳೆದುಕೊಂಡಿರುವುದು ಆಘಾತಕಾರಿ ವಿಷಯ ಎಂದು ಪರ್ಕಾಶ್ ಸಿಂಗ್ ಬಾದಲ್  ಹೇಳಿದ್ದಾರೆ. ಸಿಖ್ ಸಮುದಾಯಕ್ಕೆ ಉಂಟಾಗಿರುವ ನೋವಿನ ಮೇಲೆ ಮತ್ತೊಮ್ಮೆ ಬಾರೆ ಹಾಕಲು ಕಾಂಗ್ರೆಸ್ ಹೈಕಮಾಂಡ್ ಈ ಕ್ರಮ ಕೈಗೊಂಡಿರುವ ಬಗ್ಗೆ ಆಘಾತವಾಗಿದ್ದು ನಂಬಲು ಸಾಧ್ಯವಾಗುತ್ತಿಲ್ಲ ಎಂದಿದ್ದಾರೆ. ಇನ್ನು ಕಾಂಗ್ರೆಸ್ ಕ್ರಮವನ್ನು ಟೀಕಿಸಿರುವ ವಕೀಲ ಫೋಲ್ಕಾ ಕಾಂಗ್ರೆಸ್ ಹಣ ಮತ್ತು ತೋಳ್ಬಲ ಇರುವವರ ಪರ ಇರುತ್ತದೆ ಎಂದು ಟೀಕಾಪ್ರಹಾರ ನಡೆಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

Afghan-Pak War: 'ಅಲ್ಲಾ ಕಾಪಾಡು' ಅಫ್ಘಾನ್ ಪ್ರತೀಕಾರದ ದಾಳಿ; ಆಗಸದೆತ್ತರಕ್ಕೆ ಚಿಮ್ಮಿದ ಪಾಕ್ ಸೈನಿಕರ ಶವಗಳು, ಗಡಿಯಿಂದ ಕಾಲ್ಕಿತ್ತ ಸೇನೆ, Video

ಯಾವುದೇ ಸಿದ್ಧಾಂತ ಅಥವಾ ಅಜೆಂಡಾವನ್ನು ಪ್ರಚಾರ ಮಾಡುತ್ತಿಲ್ಲ; 'ಕಾಂತಾರ: ಚಾಪ್ಟರ್ 1' ಕುರಿತು ರಿಷಬ್ ಶೆಟ್ಟಿ

'ಆಕೆ ಮಧ್ಯರಾತ್ರಿ 12.30ಕ್ಕೆ ಹೇಗೆ ಹೊರಬಂದಳು?': ಗ್ಯಾಂಗ್ ರೇಪ್ ಕುರಿತು ಮಮತಾ ಬ್ಯಾನರ್ಜಿ ಹೇಳಿಕೆ

ಹಾಸನಾಂಬ ದರ್ಶನಕ್ಕೆ ಭಕ್ತರ ಸಂಖ್ಯೆ ಹೆಚ್ಚಳ: ಎರಡೇ ದಿನಗಳಲ್ಲಿ ರೂ. 2.24 ಕೋಟಿ ಆದಾಯ, ಆರು ಸಿಬ್ಬಂದಿ ಅಮಾನತು!

SCROLL FOR NEXT