ಮಾಯಾವತಿ 
ದೇಶ

ಸೋಲಿನಿಂದ ವಿಷಯಾಂತರ ಮಾಡಲು ಬಿಜೆಪಿಯಿಂದ ಕೈರಾನ ವಿವಾದ ಬಳಕೆ: ಮಾಯಾವತಿ

ಉತ್ತರ ಪ್ರದೇಶದ ಕೈರಾನದಲ್ಲಿ ಹಿಂದೂ ಕುಟುಂಬಗಳ ಸಾಮೂಹಿಕ ವಲಸೆ ವಿಷಯವನ್ನು ಬಿಜೆಪಿ ತನ್ನ ಸೋಲನ್ನು ಮುಚ್ಚಿಹಾಕಲು ಬಳಸಿಕೊಳ್ಳುತ್ತಿದೆ ಎಂದು ಬಿಎಸ್ ಪಿ ನಾಯಕಿ ಮಾಯಾವತಿ ಆರೋಪಿಸಿದ್ದಾರೆ.

ಲಖನೌ: ಉತ್ತರ ಪ್ರದೇಶದ ಕೈರಾನದಲ್ಲಿ ಹಿಂದೂ ಕುಟುಂಬಗಳ ಸಾಮೂಹಿಕ ವಲಸೆ ವಿಷಯವನ್ನು ಬಿಜೆಪಿ ತನ್ನ ಸೋಲನ್ನು ಮುಚ್ಚಿಹಾಕಲು ಬಳಸಿಕೊಳ್ಳುತ್ತಿದೆ ಎಂದು ಬಿಎಸ್ ಪಿ ನಾಯಕಿ ಮಾಯಾವತಿ ಆರೋಪಿಸಿದ್ದಾರೆ. ಉತ್ತರ ಪ್ರದೇಶದ ವಿಧಾನಪರಿಷತ್ ಹಾಗೂ ರಾಜ್ಯಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳು ಸೋತಿದ್ದಾರೆ. ಆದರೆ ಸೋಲನ್ನು ಕೈರಾಣ ಹಿಂದೂಗಳ ಸಾಮೂಹಿಕ ವಿಷಯವ6/14/2016ನ್ನು ದೊಡ್ಡದು ಮಾಡುವುದರಿಂದ ಮುಚ್ಚಿಹಾಕಲು ಬಿಜೆಪಿ ಯತ್ನಿಸುತ್ತಿದೆ ಎಂಬುದು ಮಾಯಾವತಿ ಅವರ ಆರೋಪವಾಗಿದೆ.

ಸೋಲನ್ನು ಮುಚ್ಚಿಹಾಕುವುದಷ್ಟೇ ಅಲ್ಲದೇ ಬಿಜೆಪಿ ಕೈರಾನ ವಿಷಯವನ್ನು ಕೋಮು ಭಾವನೆ ಕೆರಳಿಸುವುದಕ್ಕೆ ಬಳಸಿಕೊಳ್ಳುತ್ತಿದೆ ಎಂದು ಮಾಯಾವತಿ ಆರೋಪಿಸಿದ್ದಾರೆ. ಯೋಜಿತ ಪಿತೂರಿಯ ಭಾಗವಾಗಿ ವಿಧಾನಪರಿಷತ್, ರಾಜ್ಯಸಭಾ ಚುನಾವಣೆ ಫಲಿತಾಂಶ ಹೊರಬೀಳುತ್ತಿದ್ದಂತೆಯೇ ಬಿಜೆಪಿ ಕೈರಾನದಲ್ಲಿ ಹಿಂದೂಗಳನ್ನು ಸಾಮೂಹಿಕ ವಲಸೆ ಹೋಗುವಂತೆ ಮುಸ್ಲಿಮರು ಒತ್ತಡ ಹೇರುತ್ತಿರುವ ವಿಷಯವನ್ನು ದೊಡ್ಡದು ಮಾಡಿದ್ದು ಇದೊಂದು ಕೋಮು ಭಾವನೆ ಕೆರಳಿಸಲು ಹೂಡಿರುವ ತಂತ್ರ ಎಂಬುದು ಸ್ಪಷ್ಟವಾಗುತ್ತದೆ ಎಂದು ಮಾಯಾವತಿ ಹೇಳಿದ್ದಾರೆ. ಉತ್ತರ ಪ್ರದೇಶದ 50 ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಬರಪರಿಸ್ಥಿತಿ ಇರುವ ಕಾರಣ ಸಾಮೂಹಿಕ ವಲಸೆ ಕಂಡುಬರುತ್ತಿದೆ. ಇದಕ್ಕೆ ಕೇಂದ್ರವೇ ಹೊಣೆ ಎಂದು ಮಾಯಾವತಿ ದೂರಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?