ಜೆಎನ್ ಯು ವಿದ್ಯಾರ್ಥಿ ಸಂಘದ ಅಧ್ಯಕ್ಷ ಕನ್ಹಯ್ಯ ಕುಮಾರ್ 
ದೇಶ

ವಿಡಿಯೋ-ಮಾಂಸ ಬದಲಾವಣೆಯಿಂದ ದೇಶ ಬದಲಾಗಲ್ಲ: ಮೋದಿಗೆ ಕನ್ನಯ್ಯ

ಇಂದು ದೇಶದಲ್ಲಿನ ಎಲ್ಲಾ ವಿಶ್ವವಿದ್ಯಾಲಯದಲ್ಲಿ ತುರ್ತುಪರಿಸ್ಥಿತಿಯಂದ ಸ್ಥಿತಿ ಎದುರಾಗಿದ್ದು, ಮಾಂಸ ಅಥವಾ ವಿಡಿಯೋ ಬದಲಾವಣೆಯಿಂದ ದೇಶ ಬದಲಾಗಲ್ಲ ಎಂದು ಜೆಎನ್ ಯು ವಿದ್ಯಾರ್ಥಿ...

ನವದೆಹಲಿ: ಇಂದು ದೇಶದಲ್ಲಿನ ಎಲ್ಲಾ ವಿಶ್ವವಿದ್ಯಾಲಯದಲ್ಲಿ ತುರ್ತುಪರಿಸ್ಥಿತಿಯಂದ ಸ್ಥಿತಿ ಎದುರಾಗಿದ್ದು, ಮಾಂಸ ಅಥವಾ ವಿಡಿಯೋ ಬದಲಾವಣೆಯಿಂದ ದೇಶ ಬದಲಾಗಲ್ಲ ಎಂದು ಜೆಎನ್ ಯು ವಿದ್ಯಾರ್ಥಿ ಸಂಘದ ಅಧ್ಯಕ್ಷ ಕನ್ಹಯ್ಯ ಕುಮಾರ್ ಹೇಳಿದ್ದಾರೆ.

ದಾದ್ರಿ ಪ್ರಕರಣ ಸಂಬಂಧ ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಪತ್ರವೊಂದನ್ನು ಬರೆದಿರುವ ಕನ್ನಯ್ಯ, ಮೋದಿ ಜೀ, ನಿಮ್ಮ ಅಧಿಕಾರದ ಅವಧಿಯಲ್ಲಿ ವಿಡಿಯೋ ಅಥವಾ ಮಾಂಸ ಬದಲಾವಣೆ ಮಾಡಿದ ಕೂಡಲೇ ದೇಶ ಬದಲಾಗಲ್ಲ. ಕೆಟ್ಟದರಿಂದ ಒಳ್ಳೆಯ ದಾರಿಯೆಡೆಗೆ ಸಾಗಿದರೆ ಮಾತ್ರ ದೇಶ ಬದಲಾಗಲು ಸಾಧ್ಯ. ಯುವಕರು ಹಾಗೂ ವಿದ್ಯಾರ್ಥಿಗಳು ನಿಮ್ಮ ಮೇಲೆ ಸಾಕಷ್ಟು ನಂಬಿಕೆಗಳನ್ನಿಟ್ಟುಕೊಂಡು ಆಯ್ಕೆ ಮಾಡಿದ್ದಾರೆ ಎಂದು ಹೇಳಿದ್ದಾನೆ.

ಇಂದು ದೇಶದಲ್ಲಿನ ಪ್ರತೀಯೊಂದು ವಿಶ್ವವಿದ್ಯಾಲಯದಲ್ಲೂ ತುರ್ತುಪರಿಸ್ಥಿಯಂತಹ ವಾತಾವರಣ ಎದುರಾಗಿದೆ. ಅಧಿಕಾರಕ್ಕೆ ಬರುವಾದ ಅಚ್ಛೇ ದಿನ್ ಎಂಬ ಘೋಷಣೆಗಳನ್ನು ಕೂಗಿದ್ದಿರಿ. ಇಂತಹ ಪರಿಸ್ಥಿತಿಯನ್ನು ತಂದೊಡ್ಡು ಸಲುವಾಗಿಯೇ ಘೋಷಣೆಯನ್ನು ನೀಡಿದ್ದಿರಾ?

ಕಳೆದ 2 ವರ್ಷದಲ್ಲಿ ಅಭಿವೃದ್ಧಿ ಕಾರ್ಯ ಏನು ಮಾಡಿದ್ದೀರಿ? ಕೇವಲ ಜಾಹೀರಾತುಗಳಿಗಾಗಿಯೇ ನೀವು ಕೋಟಿಗಟ್ಟಲೆ ಹಣವನ್ನು ಖರ್ಚು ಮಾಡಿದ್ದೀರಿ. ಒಬ್ಬ ವಿದ್ಯಾರ್ಥಿಯಾಗಿ ನಿಮ್ಮನ್ನು ಪ್ರಶ್ನೆ ಮಾಡಲು ಇಚ್ಛಿಸುತ್ತೇನೆ. ರು.200 ಕೋಟಿ ಹಣವನ್ನು ಕೇವಲ ಜಾಹೀರಾತುಗಳಿಗಾಗಿ ವ್ಯಯಿಸಿದ್ದೀರಿ. ಆದರೆ. ರು.90 ಕೋಟಿಯಾದರೂ  ನಾನ್ ನೆಟ್ ಸಂಶೋಧನಾ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನವಾಗಿ ನೀಡಿಲ್ಲ. ಯುವಕರಿಗೆ ಉದ್ಯೋಗಾವಕಾಶ ಸೃಷ್ಟಿಸುವುದಾಗಿ ಹೇಳಿದ್ದಿರಿ, ಆದರೆ, ಯಾವುದೇ ಹೊಸ ಉದ್ಯೋಗಗಳು ಸೃಷ್ಟಿಯಾಗಲಿಲ್ಲ.

ಕಷ್ಟ ತಾಳಲಾರದೆ ಇಂದು ದೇಶದಲ್ಲಿ ಸಾಕಷ್ಟು ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಬಡತನದಲ್ಲಿ ಜೀವನ ನಡೆಸುತ್ತಿರುವವರ ಏಳಿಗೆಯಾಗದೆ ಮತ್ತಷ್ಟು ಬಡತನದಿಂದ ಕುಗ್ಗುತ್ತಿದ್ದಾರೆ. ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಮುಂದುವರಿಸಲು ಸಹಾಯ ಸಿಗುತ್ತಿಲ್ಲ. ಇನ್ನು ವಿಶ್ವವಿದ್ಯಾಲಗಳಲ್ಲಿ ವಿದ್ಯಾರ್ಥಿಗಳು ತಾರತಮ್ಯಗಳನ್ನು ಎದುರಿಸುತ್ತಿದ್ದಾರೆಂದು ಹೇಳಿಕೊಂಡಿದ್ದಾನೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

SCROLL FOR NEXT