ಹಿಂದೂಗಳ ಸಾಮೂಹಿಕ ವಲಸೆಗೆ ಕಾರಣ ತಿಳಿಯಲು ಕೈರಾನ ತಲುಪಿದ ಬಿಜೆಪಿ ಸಮಿತಿ 
ದೇಶ

ಹಿಂದೂಗಳ ಸಾಮೂಹಿಕ ವಲಸೆಗೆ ಕಾರಣ ತಿಳಿಯಲು ಕೈರಾನ ತಲುಪಿದ ಬಿಜೆಪಿ ಸಮಿತಿ

ಉತ್ತರ ಪ್ರದೇಶದ ಕೈರಾನದಲ್ಲಿ ಹಿಂದೂ ಕುಟುಂಬಗಳ ಸಾಮೂಹಿಕ ವಲಸೆ ವಿಷಯಕ್ಕೆ ಸಂಬಂಧಿಸಿದಂತೆ ಬಿಜೆಪಿ ರಚಿಸಿದ್ದ 9 ಸದಸ್ಯರ ಸಮಿತಿ ಸ್ಥಳಕ್ಕೆ ಭೇಟಿ ನೀಡಿದ್ದು ಪರಿಶೀಲನೆ ನಡೆಸಿದೆ.

ಕೈರಾನ: ಉತ್ತರ ಪ್ರದೇಶದ ಕೈರಾನದಲ್ಲಿ ಹಿಂದೂ ಕುಟುಂಬಗಳ ಸಾಮೂಹಿಕ ವಲಸೆ ವಿಷಯಕ್ಕೆ ಸಂಬಂಧಿಸಿದಂತೆ ಬಿಜೆಪಿ ರಚಿಸಿದ್ದ 9 ಸದಸ್ಯರ ಸಮಿತಿ ಸ್ಥಳಕ್ಕೆ ಭೇಟಿ ನೀಡಿದ್ದು ಪರಿಶೀಲನೆ ನಡೆಸಿದೆ. ಹಿಂದೂ ಕುಟುಂಬಗಳ ಸಾಮೂಹಿಕ ವಲಸೆ ವಿಷಯದ ಬಗ್ಗೆ ಕೇಂದ್ರ ಗೃಹ ಇಲಾಖೆ ಉತ್ತರ ಪ್ರದೇಶ ಸರ್ಕಾರದಿಂದ ವಿಸ್ತೃತ ವರದಿ ಕೇಳಿದ ಬೆನ್ನಲೇ ಬಿಜೆಪಿ ರಚಿಸಿದ್ದ 9 ಸದಸ್ಯರ ಸಮಿತಿ ಕೈರಾನ ಗೆ ಭೇಟಿ ನೀಡಿದ್ದು ಹಿಂದೂ ಕುಟುಂಬಗಳ ಸಾಮೂಹಿಕ ವಲಸೆಗೆ ಕಾರಣವಾಗಿರುವ ಅಂಶಗಳನ್ನು ಪತ್ತೆ ಮಾಡಲು ಮುಂದಾಗಿದೆ.

ಉತ್ತರ ಪ್ರದೇಶದ ಅಲಹಾಬಾದ್ ನಲ್ಲಿ ನಡೆದ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಕೈರಾನ ಸಾಮೂಹಿಕ ವಲಸೆಯ ವಿಚಾರವನ್ನು ಪ್ರಸ್ತಾಪಿಸಲಾಗಿತ್ತು. ಇದರ ಬೆನ್ನಲ್ಲೇ ಜೂ.14 ರಂದು ಬಿಜೆಪಿ ಹೊಸದಾಗಿ ವಲಸೆ ಹೋಗಿರುವ ಹಿಂದೂ ಕುಟುಂಬಗಳ ಪಟ್ಟಿಯನ್ನು ಬಿಡುಗಡೆ ಮಾಡಿತ್ತು. ಮುಸ್ಲಿಮರು ಬಹುಸಂಖ್ಯಾತರಾಗಿರುವ ಕೈರಾನದಲ್ಲಿ ಸ್ಥಳಿಯ ಗೂಂಡಾಗಳ ಕಾಟ ಹೆಚ್ಚುತ್ತಿದ್ದು, ಮುಸ್ಲಿಂ ಕುಟುಂಬಗಳು ಹಾಗೂ ಹೆಚ್ಚಿನ ಸಂಖ್ಯೆಯಲ್ಲಿ ಹಿಂದೂ ಕುಟುಂಬಗಳು ಸಾಮೂಹಿಕ ವಲಸೆ ಹೋಗುತ್ತಿವೆ ಎಂದು ಉತ್ತರ ಪ್ರದೇಶ ಬಿಜೆಪಿ ಮುಖಂಡ, ಸಂಸದ ಹುಕುಂ ಸಿಂಗ್ ಆರೋಪಿಸಿದ್ದರು. ಈ ಹಿನ್ನೆಲೆಯಲ್ಲಿ 9 ಸದಸ್ಯರ ಸಮಿತಿ ರಚಿಸಿದ್ದ ಬಿಜೆಪಿ ಹಿಂದು ಕುಟುಂಬಗಳ ಸಾಮೂಹಿಕ ವಲಸೆಗೆ ಕಾರಣವಾಗಿರುವ ಅಂಶಗಳ ಬಗ್ಗೆ ವರದಿ ನೀಡಲು ಸೂಚಿಸಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026: SRH ವಿರುದ್ಧ RR ಗೆ 47 ರನ್ ಗಳ ಭರ್ಜರಿ ಗೆಲುವು

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

SCROLL FOR NEXT