ದೇಶ

ಫೇಸ್ ಬುಕ್ ನಲ್ಲಿ ಬ್ರಾಹ್ಮಣ ವಿರೋಧಿ ಪೋಸ್ಟ್ ಹಾಕಿದ್ದಕ್ಕೆ ದಲಿತ ಮುಖಂಡನನ್ನು ಉಚ್ಛಾಟಿಸಿದ ಮಾಯಾವತಿ?

Srinivas Rao BV

ನವದೆಹಲಿ: ಉತ್ತರ ಪ್ರದೇಶ ವಿಧಾನಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆಯೇ ಬಿಎಸ್ ಪಿ ಪಕ್ಷ ಬ್ರಾಹ್ಮಣ ಸಮುದಾಯದ ಮತಗಳ ಮೇಲೂ ಕಣ್ಣಿಟ್ಟಿದೆ ಎಂಬುದನ್ನು ಸಾಬೀತುಪಡಿಸುವಂತಹ ಘಟನೆ ನಡೆದಿದೆ.

ಸಾಮಾಜಿಕ ಜಾಲತಾಣದಲ್ಲಿ ಬ್ರಾಹ್ಮಣ ಸಮುದಾಯದ ವಿರುದ್ಧ ಬರೆದಿದ್ದ ದಲಿತ ಮುಖಂಡ ಸಂಜಯ್ ಭಾರ್ತಿ ಎಂಬುವವರನ್ನು ಮಾಯಾವತಿ ಅಮಾನತುಗೊಳಿಸಿದ್ದಾರೆ. ಆದರೆ ತಮ್ಮ ವಿರುದ್ಧ ಕೇಳಿಬಂದಿರುವ ಆರೋಪವನ್ನು ನಿರಾಕರಿಸಿರುವ ಸಂಜಯ್ ಭಾರ್ತಿ ತಾವು ಯಾರ ವಿರುದ್ಧವೂ ಸಾಮಾಜಿಕ ಜಾಲತಾಣದಲ್ಲಿ ಬರೆದಿಲ್ಲ, ನನ್ನ ಫೇಸ್ ಬುಕ್ ಖಾತೆ ಹ್ಯಾಕ್ ಆಗಿದ್ದು ಬೇರೆಯವರು ಬರೆದಿರುವ ಸಾಧ್ಯತೆ ಇದೆ ಎಂದು ಸ್ಪಷ್ಟನೆ ನೀಡಿದ್ದಾರೆ. ಪಕ್ಷದ ಸದಸ್ಯರೇ ನನ್ನ ತೇಜೋವಧೆ ಮಾಡಲು ಇಂತಹ ಕೆಲಸ ಮಾಡಿದ್ದಾರೆ ಎಂದು ಭಾರ್ತಿ ಆರೋಪಿಸಿದ್ದಾರೆ.

SCROLL FOR NEXT