ಅಲಕಾ ಲಂಬಾ 
ದೇಶ

ಶಿಸ್ತು ಉಲ್ಲಂಘನೆ: ವಕ್ತಾರೆ ಸ್ಥಾನದಿಂದ ಅಲಕಾ ಲಂಬಾ ವಜಾ

ಆಮ್ ಆದ್ಮಿ ಪಕ್ಷದ ಶಿಸ್ತು ಉಲ್ಲಂಘನೆ ಮಾಡಿದ ಕಾರಣಕ್ಕಾಗಿ ಪಕ್ಷದ ವಕ್ತಾರೆ ಅಲಕಾ ಲಂಬಾ ಅವರನ್ನು ಆಪ್ ಪಕ್ಷದ ವಕ್ತಾರ ಸ್ಥಾನದಿಂದ ಗುರುವಾರ...

ನವದೆಹಲಿ: ಆಮ್ ಆದ್ಮಿ ಪಕ್ಷದ ಶಿಸ್ತು ಉಲ್ಲಂಘನೆ ಮಾಡಿದ ಕಾರಣಕ್ಕಾಗಿ ಪಕ್ಷದ ವಕ್ತಾರೆ ಅಲಕಾ ಲಂಬಾ ಅವರನ್ನು ಆಪ್ ಪಕ್ಷದ ವಕ್ತಾರ ಸ್ಥಾನದಿಂದ ಗುರುವಾರ ವಜಾಗೊಳಿಸಲಾಗಿದೆ.

ಇತ್ತೀಚೆಗಷ್ಟೇ ಪ್ರೀಮಿಯಂ ಬಸ್ ಸೇವೆ ಹಗರಣಕ್ಕೆ ಸಂಬಂಧಿಸಿದಂತೆ ರಾಜೀನಾಮೆ ಸಲ್ಲಿಸಿದ್ದ ಮಾಜಿ ಸಾರಿಗೆ ಸಚಿವ ಗೋಪಾಲ್ ರಾಯ್ ಅವರಿಗೆ ಅಲಕಾ ಲಂಬಾ ಅವರು ಬೆಂಬಲ ಸೂಚಿಸಿದ್ದರು. ಅಲ್ಲದೆ, ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ರಾಯ್ ಅವರಿಗೆ ರಾಜೀನಾಮೆ ನೀಡುವಂತೆ ಸೂಚಿಸಿದ್ದರು ಎಂದು ಮಾಧ್ಯಮಗಳೊಂದಿಗೆ ಹೇಳಿಕೆ ನೀಡಿದ್ದರು.

ಗೋಪಾಲ್ ರಾಯ್ ಅವರು ಆರೋಗ್ಯ ಸಮಸ್ಯೆಯಿಂದಾಗಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆಂದು ಆಪ್ ಹೇಳುತ್ತಿದೆ. ನಿಜ ಹೇಳಬೇಕಾದರೆ ಮುಖ್ಯಮಂತ್ರಿ ಕೇಜ್ರಿಲಾಲ್ ಅವರು ನ್ಯಾಯೋಚಿತ ತನಿಖೆ ಬಯಸುತ್ತಿದ್ದು, ಇದಕ್ಕಾಗಿ ಗೋಪಾಲ್ ರಾಯ್ ಅವರು ರಾಜೀನಾಮೆ ಸಲ್ಲಿಸುವಂತೆ ಸೂಚಿದ್ದರು ಎಂದು ಹೇಳಿದ್ದರು.

ಲಂಬಾ ಆವರ ಈ ಹೇಳಿಕೆಯನ್ನು ಗಂಭೀರವಾಗಿ ಪರಿಗಣಿಸಿರುವ ಆಮ್ ಆದ್ಮಿ ಪಕ್ಷವು ಇದೀಗ ಪಕ್ಷದ ಶಿಸ್ತು ಉಲ್ಲಂಘನೆ ಆರೋಪದ ಮೇಲೆ ಅವರನ್ನು ವಕ್ತಾರೆ ಸ್ಥಾನದಿಂದ ವಜಾಗೊಳಿಸಿದೆ.

ಇನ್ನು ತಮ್ಮ ವಜಾ ಆದೇಶ ಸುದ್ದು ಕುರಿತಂತೆ ಟ್ವಿಟರ್ ನಲ್ಲಿ ಪ್ರತಿಕ್ರಿಯೆ ನೀಡಿರುವ ಅಲಕಾ ಲಂಬಾ ಅವರು, ಪಕ್ಷಕ್ಕೆ ನಾನು ಶಿಸ್ತಿನ ಕೆಲಸಗಾರರಳಾಗಿದ್ದೆ. ಇಂದು ಪಕ್ಷ ಯಾವುದೇ ನಿರ್ಧಾರ ತೆಗೆದುಕೊಂಡರೂ ಅದಕ್ಕೆ ನಾನು ತಲೆ ಬಾಗುತ್ತೇನೆ. ತಿಳಿಯದೆಯೇ ನನ್ನಿಂದ ಏನೇ ತಪ್ಪಾಗಿದ್ದರೂ, ಅದಕ್ಕೆ ಶಿಕ್ಷೆ ಅನುಭವಿಸಲು ನಾನು ಸಿದ್ಧಳಿದ್ದೇನೆಂದು ಹೇಳಿಕೊಂಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

ಕೃಷ್ಣಾ ಮೇಲ್ದಂಡೆ ಯೋಜನೆ-3: ಸರ್ವಪಕ್ಷ ನಾಯಕರೊಂದಿಗೆ ಶೀಘ್ರದಲ್ಲೇ ಸಭೆ; ಡಿಕೆ.ಶಿವಕುಮಾರ್

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

SCROLL FOR NEXT