ಬಾಂಗ್ಲಾದಲ್ಲಿ ಹೆಚ್ಚುತ್ತಿರುವ ಹಿಂದೂಗಳ ಹತ್ಯೆ: ವಲಸೆ ಭೀತಿ 
ದೇಶ

ಬಾಂಗ್ಲಾದಲ್ಲಿ ಹೆಚ್ಚುತ್ತಿರುವ ಹಿಂದೂಗಳ ಹತ್ಯೆ: ವಲಸೆ ಭೀತಿ

ನೆರೆಯ ರಾಷ್ಟ್ರ ಬಾಂಗ್ಲಾ ದೇಶದಲ್ಲಿ ಹಿಂದೂಗಳ ಹತ್ಯೆ ಹೆಚ್ಚಾಗುತ್ತಿದ್ದು, ಹಿಂದೂಗಳಲ್ಲಿ ವಲಸೆ ಭೀತಿ ಎದುರಾಗಿದೆ.

ನವದೆಹಲಿ: ನೆರೆಯ ರಾಷ್ಟ್ರ ಬಾಂಗ್ಲಾ ದೇಶದಲ್ಲಿ ಹಿಂದೂಗಳ ಹತ್ಯೆ ಹೆಚ್ಚಾಗುತ್ತಿದ್ದು, ಹಿಂದೂಗಳಲ್ಲಿ ವಲಸೆ ಭೀತಿ ಎದುರಾಗಿದೆ. ಈ ಹಿಂದೆಯೂ ಹಿಂದೂಗಳನ್ನು ಬಾಂಗ್ಲಾದಿಂದ ಹೊರಕಳುಹಿಸಲು ಅನೇಕ ರೀತಿಯಲ್ಲಿ ಕಿರುಕುಳ ನೀಡಲಾಗುತ್ತಿತ್ತು. ಆದರೆ ಇತ್ತೀಚಿನ ದಿನಗಳಲ್ಲಿ ಅಲ್ಪಸಂಖ್ಯಾತರಾಗಿರುವ ಹಿಂದೂಗಳ ಆಸ್ತಿ ಕಬಳಿಸಿ ಅವರನ್ನು ಹೊರಕಳುಹಿಸುವುದಕ್ಕಾಗಿ ಬೇರೆಯದ್ದೇ ರೀತಿಯ ಪ್ರಯತ್ನಗಳು ನಡೆಯುತ್ತಿದ್ದು, ಸಿಕ್ಕಸಿಕ್ಕಲ್ಲಿ ಹತ್ಯೆ ಮಾಡಲಾಗುತ್ತಿದೆ ಎಂದು ಹಿಂದೂ, ಕ್ರೈಸ್ತ, ಬೌದ್ಧ ಒಕ್ಕೂಟ ಪರಿಷತ್ ನ ಮುಖ್ಯಸ್ಥ ಕಾಜಲ್ ದೇಬನಾಥ್ ಆತಂಕ ವ್ಯಕ್ತಪಡಿಸಿದ್ದಾರೆ.

ಈ ಹಿಂದೆ ಹಿಂದುಗಳನ್ನು ಬೆದರಿಸಲು ಹಿಂದೂ ಮಹಿಳೆಯರು, ಹುಡುಗಿಯರ ಮೇಲೆ ಅತ್ಯಾಚಾರ ನಡೆಸಲಾಗುತ್ತಿತ್ತು, ಇಲ್ಲವೇ ದೇವಾಲಯ, ಮನೆಗಳ ಮೇಲೆ ದಾಳಿ ನಡೆಸಿ, ಭಯದ ವಾತಾವರಣ ನಿರ್ಮಿಸಿ ಹಿಂದೂಗಳನ್ನು ಬಾಂಗ್ಲಾದಿಂದ ಹೊರ ಹೋಗುವಂತೆ ಮಾಡಲಾಗುತ್ತಿತ್ತು. ಆದರೆ ಈಗ ಯಾವುದೇ ಆಸ್ತಿಯನ್ನು ಹೊಂದದ ಬಡ ಹಿಂದೂಗಳನ್ನು ನಿರ್ದಯವಾಗಿ ಹತ್ಯೆ ಮಾಡಲಾಗುತ್ತಿದ್ದು, ಹಿಂದೂಗಳಲ್ಲಿ ವಲಸೆ ಹೋಗುವ ಭೀತಿ ಎದುರಾಗಿದೆ ಎಂದು ದೇಬನಾಥ್ ಹೇಳಿದ್ದಾರೆ. ಇದೇ ವಿಷಯಕ್ಕೆ ಸಂಬಂಧಿಸಿದಂತೆ ಇತ್ತೀಚೆಗಷ್ಟೆ ಭಾರತ ಸರ್ಕಾರಕ್ಕೆ ಮನವಿ ಮಾಡಿದ್ದ ಕಾಜಲ್ ದೇಬನಾಥ್, ಬಾಂಗ್ಲಾದಲ್ಲಿರುವ  ಹಿಂದೂಗಳ ರಕ್ಷಣೆಗೆ ಭಾರತ ಸರ್ಕಾರ ಮಧ್ಯಪ್ರವೇಶ ಮಾಡಬೇಕು ಎಂದು ಒತ್ತಾಯಿಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT