ಕೇಂದ್ರ ಸಚಿವ ಮುಕ್ತಾರ್ ಅಬ್ಬಾಸ್ ನಖ್ವಿ 
ದೇಶ

ಇಶ್ರತ್ ಜಹಾನ್ ಪ್ರಕರಣದ ಕಡತಗಳ ನಾಶ ರಾಷ್ಟ್ರವಿರೋಧಿ ಚಟುವಟಿಕೆಗೆ ಸಮವಾದದ್ದು: ಮುಕ್ತಾರ್ ಅಬ್ಬಾಸ್ ನಖ್ವಿ

ಇಶ್ರತ್ ಜಹಾನ್ ಎನ್ ಕೌಂಟರ್ ಪ್ರಕರಣಕ್ಕೆ ಸಂಬಂಧಿಸಿದ ಕಡತಗಳನ್ನು ನಾಪತ್ತೆ ಮಾಡಿರುವುದು ರಾಷ್ಟ್ರ ವಿರೋಧಿ ಚಟುವಟಿಕೆಗೆ ಸಮನಾಗುತ್ತದೆ ಎಂದು ಕೇಂದ್ರ ಸಚಿವ ಮುಕ್ತಾರ್ ಅಬ್ಬಾಸ್ ನಖ್ವಿ ಹೇಳಿದ್ದಾರೆ.

ನವದೆಹಲಿ: ಇಶ್ರತ್ ಜಹಾನ್ ಎನ್ ಕೌಂಟರ್ ಪ್ರಕರಣಕ್ಕೆ ಸಂಬಂಧಿಸಿದ ಕಡತಗಳನ್ನು ನಾಪತ್ತೆ ಮಾಡಿರುವುದು ರಾಷ್ಟ್ರ ವಿರೋಧಿ ಚಟುವಟಿಕೆಗೆ ಸಮನಾಗುತ್ತದೆ ಎಂದು ಕೇಂದ್ರ ಸಚಿವ ಮುಕ್ತಾರ್ ಅಬ್ಬಾಸ್ ನಖ್ವಿ ಹೇಳಿದ್ದಾರೆ.

ಕಡತಗಳ ನಾಪತ್ತೆ ಮಾಡಿದ ಪ್ರಕರಣದ ಅಪರಾಧಿಗಳಿಗೆ ಕಠಿಣ ಶಿಕ್ಷೆ ನೀಡಲಾಗುವುದು ಎಂದು ಎಚ್ಚರಿಕೆ ನೀಡಿರುವ ಮುಕ್ತಾರ್ ಅಬ್ಬಾಸ್ ನಖ್ವಿ, ನಾಪತ್ತೆಯಾಗಿರುವ ಕಡತಗಳನ್ನು ಪತ್ತೆ ಮಾಡಲಾಗುತ್ತಿದೆ. ಕಡತಗಳನ್ನು ನಾಪತ್ತೆಯಾಗುವಂತೆ ಮಾಡಿರುವುದು ಕ್ರಿಮಿನಲ್ ಅಪರಾಧ ಹಾಗೂ ರಾಷ್ಟ್ರ ವಿರೋಧಿ ಚಟುವಟಿಕೆಯಾಗುತ್ತದೆ. ಇಶ್ರತ್ ಜಹಾನ್ ಳ ಉಗ್ರ ಹಿನ್ನೆಲೆಯನ್ನು ಮರೆಮಾಚಲು ಎರಡನೇ ಅಫಿಡವಿಟ್ ನ್ನು ಅಂದಿನ ಗೃಹ ಸಚಿವ ಪಿ ಚಿದಂಬರಂ ನಿರ್ದೇಶನದಲ್ಲಿ ತಯಾರಿಸಲಾಗಿತ್ತು ಎಂಬ ಆರೋಪ ಕೇಳಿಬಂದಿದೆ. ಇಶ್ರತ್ ಜಹಾನ್ ಳ ಎನ್ ಕೌಂಟರ್ ಪ್ರಕರಣಕ್ಕೆ ಸಂಬಂಧಿಸಿದ ಕಡತಗಳು ನಾಪತ್ತೆಯಾಗಿರುವ ಬಗ್ಗೆ ತನಿಖೆ ನಡೆಸುತ್ತಿರುವ ಗೃಹ ಸಚಿವಾಲಯದ ಹೆಚ್ಚುವರಿ ಕಾರ್ಯದರ್ಶಿ ಬಿಕೆ ಪ್ರಸಾದ್ ನಾಪತ್ತೆಯಾಗಿರುವ 5 ಕಡತಗಳ ಪೈಕಿ 4 ಕಡತಗಳು ಇನ್ನೂ ಪತ್ತೆಯಾಗಿಲ್ಲ ಎಂದು ಗೃಹ ಸಚಿವರಿಗೆ ಸಲ್ಲಿಸಿದ್ದ  ವರದಿಯಲ್ಲಿ ತಿಳಿಸಿದ್ದರು.  

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

SCROLL FOR NEXT