ಗುಲ್ಬರ್ಗ್ ಹತ್ಯಾಕಾಂಡ (ಸಂಗ್ರಹ ಚಿತ್ರ) 
ದೇಶ

ಗುಲ್ಬರ್ಗ್ ಹತ್ಯಾಕಾಂಡ ತೀರ್ಪು ಪ್ರಕಟ: 11 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

2002ರ ಗುಜರಾತ್ ಹಿಂಸಾಚಾರ ವೇಳೆ 69 ಮಂದಿಯ ಧಾರುಣ ಸಾವಿಗೆ ಕಾರಣವಾಗಿದ್ದ ಗುಲ್ಬರ್ಗ್ ಸೊಸೈಟಿ ಹತ್ಯಾಕಾಂಡದ 11 ಅಪರಾಧಿಗಳಿಗೆ ಅಹ್ಮದಾಬಾದ್ ವಿಶೇಷ ನ್ಯಾಯಾಲಯ ಶುಕ್ರವಾರ ಜೀವಾವಧಿ ಶಿಕ್ಷೆ ಪ್ರಕಟಿಸಿದೆ ಎಂದು ತಿಳಿದುಬಂದಿದೆ...

ಅಹ್ಮದಾಬಾದ್: 2002ರ ಗುಜರಾತ್ ಹಿಂಸಾಚಾರ ವೇಳೆ 69 ಮಂದಿಯ ಧಾರುಣ ಸಾವಿಗೆ ಕಾರಣವಾಗಿದ್ದ ಗುಲ್ಬರ್ಗ್ ಸೊಸೈಟಿ ಹತ್ಯಾಕಾಂಡದ 11 ಅಪರಾಧಿಗಳಿಗೆ ಅಹ್ಮದಾಬಾದ್ ವಿಶೇಷ  ನ್ಯಾಯಾಲಯ ಶುಕ್ರವಾರ ಜೀವಾವಧಿ ಶಿಕ್ಷೆ ಪ್ರಕಟಿಸಿದೆ ಎಂದು ತಿಳಿದುಬಂದಿದೆ.

ಇಡೀ ದೇಶದ ಕಾನೂನು ಸುವ್ಯವಸ್ಥೆಗೆ ಧಕ್ಕೆ ತಂದ ಈ ಭೀಕರ ಘಟನೆಯ ಅಪರಾಧಿಗಳಿಗೆ ಕಠಿಣ ಶಿಕ್ಷೆ ಕೊಡಿಸುವಲ್ಲಿ ಪ್ರಾಸಿಕ್ಯೂಷನ್ ವಿಫಲವಾಗಿದ್ದು, 24 ಮಂದಿ ಅಪರಾಧಿಗಳಿಗೆ ಇಂದು ನ್ಯಾಯಾಲಯ ಶಿಕ್ಷೆ ಪ್ರಮಾಣ ಪ್ರಕಟಿಸಿದೆ. ಪ್ರಕರಣ ಸಂಬಂಧ ಅಹ್ಮದಾಬಾದ ವಿಶೇಷ ನ್ಯಾಯಾಲಯ ಅಪರಾಧಿಗಳು ಎಂದು ಘೋಷಣೆ ಮಾಡಿದ್ದ 24 ಮಂದಿಯ ಪೈಕಿ ಕೊಲೆ ಆರೋಪ ಸಾಬೀತಾಗಿದ್ದ 11 ಆರೋಪಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದ್ದು, ಇತರೆ ಆರೋಪಗಳಡಿ ಅಪರಾಧಿಗಳಾಗಿದ್ದ 13 ಮಂದಿಗೆ ಏಳು ವರ್ಷ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಲಾಗಿದೆ ಎಂದು ತಿಳಿದುಬಂದಿದೆ.

ಕಳೆದ ಜೂನ್ 2ರಂದು ಗೋದ್ರೋತ್ತರ ಘರ್ಷಣೆ ವೇಳೆ ನಡೆದಿದ್ದ ಗುಲ್ಬರ್ಗ್ ಸೊಸೈಟಿ ಹತ್ಯಾಕಾಂಡ ಪ್ರಕರಣ ಸಂಬಂಧ ಅಹ್ಮದಾಬಾದ್ ವಿಶೇಷ ನ್ಯಾಯಾಲಯ 24 ಮಂದಿ ತಪ್ಪಿತಸ್ಥರು ಎಂದು  ತೀರ್ಪು ನೀಡಿತ್ತಾದರೂ, ಪ್ರಾಸಿಕ್ಯೂಷನ್ ಮತ್ತು ಡಿಫೆನ್ಸ್ ವಕೀಲರ ವಾದ-ಪ್ರತಿವಾದಗಳಿಂದಾಗಿ ಸತತ ಮೂರು ಬಾರಿ ನ್ಯಾಯಾಲಯ ಅಪರಾಧಿಗಳ ಶಿಕ್ಷೆ ಪ್ರಮಾಣ ಘೋಷಣೆಯನ್ನು  ಮುಂದೂಡಿತ್ತು. ಕಳೆದ ಜೂನ್ 13ರಂದು ನಡೆದ ವಿಚಾರಣೆಯಲ್ಲಿ ನ್ಯಾಯಾಲಯ ಜೂನ್ 17ರಂದು ಶಿಕ್ಷೆ ಪ್ರಮಾಣ ಘೋಷಣೆ ಮಾಡುವುದಾಗಿ ತಿಳಿಸಿತ್ತು.

ಅದರಂತೆ ಇಂದು ಅಹ್ಮದಾಬಾದ್ ವಿಶೇಷ ನ್ಯಾಯಾಲಯ ತನ್ನ ತೀರ್ಪು ನೀಡಲಿದ್ದು, ಇಡೀ ದೇಶದ ಚಿತ್ತ ಇದೀಗ ಅಹ್ಮದಾಬಾದ್ ವಿಶೇಷ ನ್ಯಾಯಾಲಯದತ್ತ ನೆಟ್ಟಿದೆ. ಈ ಹಿನ್ನಲೆಯಲ್ಲಿ  ಅಹ್ಮದಾಬಾದ್ ವಿಶೇಷ ನ್ಯಾಯಾಲಯದ ಸುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದ್ದು, ಇನ್ನು ಕೆಲವೇ ಕ್ಷಣಗಳಲ್ಲಿ ನ್ಯಾಯಾಲಯದ ಕಲಾಪ ಆರಂಭವಾಗಲಿದೆ.

ಇಡೀ ದೇಶದ ಗಮನ ಸೆಳೆದಿದ್ದ ಗುಲ್ಬರ್ಗ್ ಹತ್ಯಾಕಾಂಡ ತೀರ್ಪನ್ನು ಅಹ್ಮದಾಬಾದ್ ವಿಶೇಷ ನ್ಯಾಯಾಲಯ ಕಳೆದ ಜೂನ್ 2ರಂದು ಘೋಷಣೆ ಮಾಡಿತ್ತು. ಅದರಂತೆ ಪ್ರಕರಣದಲ್ಲಿ   ಬಂಧಿತರಾಗಿದ್ದ 66 ಮಂದಿಯ ಪೈಕಿ 24 ಮಂದಿಯ ಆರೋಪ ಸಾಬೀತಾಗಿದೆ ಎಂದು ಅಹ್ಮದಾಬಾದ್ ವಿಶೇಷ ನ್ಯಾಯಾಲಯದ ಹೇಳಿತ್ತು. ಪ್ರಕರಣದ ವಿಚಾರಣೆ ನಡೆಸಿದ್ದ ನ್ಯಾ.ಪಿಬಿ ದೇಸಾಯಿ  ಅವರು ತಮ್ಮ ಸುಧೀರ್ಘ ತೀರ್ಪು ಪ್ರಕಟಿಸಿದ್ದು, 66 ಮಂದಿ ಆರೋಪಿಗಳ ಪೈಕಿ 24 ಮಂದಿಯ ಆರೋಪ ಸಾಬೀತಾಗಿದೆ. ಈ ಪೈಕಿ ಸಾಕ್ಷ್ಯಾಧಾರಗಳ ಕೊರತೆಯಿಂದಾಗಿ 36 ಜನರನ್ನು ಖುಲಾಸೆ  ಮಾಡಲಾಗಿದ್ದು, 11 ಆರೋಪಿಗಳ ವಿರುದ್ಧದ ಕೊಲೆ ಆರೋಪ ಸಾಬೀತಾಗಿದೆ. ಉಳಿದ 13 ಆರೋಪಿಗಳ  ವಿರುದ್ಧ ಇತರೆ ಆರೋಪಗಳು ಸಾಬೀತಾಗಿದೆ ಎಂದು ತೀರ್ಪು ನೀಡಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜೀನಾಮೆ ಬಗ್ಗೆ ಖುದ್ದು ಸುಳಿವು ನೀಡಿದ CM ಸಿದ್ದರಾಮಯ್ಯ; ಸಾಮಾಜಿಕ ಮಾಧ್ಯಮದಲ್ಲಿ ಮಹತ್ವದ ಪೋಸ್ಟ್​!

ಹೈಕಮಾಂಡ್ ಅದೇಶ ಪಾಲನೆ: ಗುರುವಾರ ಬೆಳಗ್ಗೆ 10.30ಕ್ಕೆ ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ ಸಿಎಂ ಸಿದ್ದರಾಮಯ್ಯ; Video

SIR ಪ್ರಕ್ರಿಯೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್; ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಗೆ ಅಗತ್ಯ ಎಂದ ನ್ಯಾಯಪೀಠ..!

ಸಿಎಂ ಸಿದ್ದರಾಮಯ್ಯ ಪದತ್ಯಾಗ; ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಮಹತ್ವದ ಸಭೆ

Mysuru Rain: ಸಿಡಿಲು ಬಡಿದು ಬೆಂಗಳೂರಿನ ಟೆಕ್ಕಿ ಸಾವು

SCROLL FOR NEXT