ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ 
ದೇಶ

ಪರಿಣಾಮಕಾರಿ ಸಿನಿಮಾ 'ಉಡ್ತಾ ಪಂಜಾಬ್'ನ್ನು ಬಾದಲ್ ನೋಡಲೇಬೇಕು: ಕೇಜ್ರಿವಾಲ್

ಉಡ್ತಾ ಪಂಜಾಬ್ ಚಿತ್ರ ಪರಿಣಾಮಕಾರಿ ಸಿನಿಮಾವಾಗಿದ್ದು, ಪಂಜಾಬ್ ಮುಖ್ಯಮಂತ್ರಿ ಪ್ರಕಾಶ್ ಸಿಂಗ್ ಬಾದಲ್ ಅವರು ಸಿನಿಮಾ ನೋಡಲೇಬೇಕು ಎಂದು ದೆಹಲಿ ಮುಖ್ಯಮಂತ್ರಿ...

ನವದೆಹಲಿ: ಉಡ್ತಾ ಪಂಜಾಬ್ ಚಿತ್ರ ಪರಿಣಾಮಕಾರಿ ಸಿನಿಮಾವಾಗಿದ್ದು, ಪಂಜಾಬ್ ಮುಖ್ಯಮಂತ್ರಿ ಪ್ರಕಾಶ್ ಸಿಂಗ್ ಬಾದಲ್ ಅವರು ಸಿನಿಮಾ ನೋಡಲೇಬೇಕು ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಶನಿವಾರ ಹೇಳಿದ್ದಾರೆ.,

ಈ ಕುರಿತಂತೆ ಟ್ವಿಟರ್ ನಲ್ಲಿ ಪ್ರತಿಕ್ರಿಯೆ ನೀಡಿರುವ ಅವರು, ಈಗಷ್ಟೇ ಉಡ್ತಾ ಪಂಜಾಬ್ ಚಿತ್ರವನ್ನು ನೋಡಿದೆ. ಚಿತ್ರ ಅತ್ಯಂತ ಪರಿಣಾಮಕಾರಿಯಾಗಿದೆ. ಈ ಚಿತ್ರ ನೋಡುವ ಮೂಲಕ ಪಂಜಾಬ್ ನಲ್ಲಿ ತಾವು ಏನು ಮಾಡಿದ್ದೀರಿ ಎಂಬುದನ್ನು ಬಾದಲ್ ಅವರು ನೋಡಬೇಕು ಎಂದು ಹೇಳಿದ್ದಾರೆ.

ಪಂಜಾಬ್ ನಲ್ಲಿ ಪರಿಸ್ಥಿತಿ ಹಾಳಾಗಿದ್ದು, ರಾಜಕಾರಣಿಗಳೇ ಮಾದಕ ವಸ್ತುಗಳ ಮಾರಾಟದಲ್ಲಿ ಭಾಗಿಯಾಗುತ್ತಿದ್ದಾರೆ. ಉಡ್ತಾ ಪಂಜಾಬ್ ಚಿತ್ರ ಪರಿಣಾಮಕಾರಿ ಸಿನಿಮಾವಾಗಿದೆ ಎಂದು ಹೇಳಿದ್ದಾರೆ.

ನೈಜ ಕಥೆಯಾಧರಿಸಿ ಸಿನಿಮಾ ನಿರ್ದೇಶಿಸಿದ್ದ ಅನುರಾಗ್ ಕಶ್ಯಪ್ ಅವರಿಗೆ ಸೆನ್ಸಾರ್ ಮಂಡಳಿ ಆಘಾತ ನೀಡಿತ್ತು. ಪಂಜಾಬಿನ ಡ್ರಗ್ ಮಾಫಿಯಾ ಸತ್ಯಾಸತ್ಯತೆ ಬಿಚ್ಚಿಡುವ ಉಡ್ತಾ ಪಂಜಾಬ್ ಚಿತ್ರದ 89 ದೃಶ್ಯಗಳಿಗೆ ಕತ್ತರಿ ಹಾಕಲಾಗಿತ್ತು. ಆದರೆ ಸೆನ್ಸಾರ್ ಮಂಡಳಿಯ 89 ಕಟ್ ಗಳ ವಿರುದ್ಧ ಚಿತ್ರತಂಡ ಹೈಕೋರ್ಟ್ ಮೆಟ್ಟಿಲೇರಿತ್ತು. ಅರ್ಜಿಯ ವಿಚಾರಣೆ ನಡೆಸಿದ್ದ ನ್ಯಾಯಾಲಯವು ಜೂ.13ರಂದು ಅಂತಿಮ ತೀರ್ಪು ಪ್ರಕಟಿಸಿ, ಕೇವಲ 1 ದೃಶ್ಯಕ್ಕೆ ಮಾತ್ರ ಕತ್ತರಿ ಹಾಕುವಂತೆ ತಿಳಿಸಿತ್ತು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

ಕೃಷ್ಣಾ ಮೇಲ್ದಂಡೆ ಯೋಜನೆ-3: ಸರ್ವಪಕ್ಷ ನಾಯಕರೊಂದಿಗೆ ಶೀಘ್ರದಲ್ಲೇ ಸಭೆ; ಡಿಕೆ.ಶಿವಕುಮಾರ್

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

SCROLL FOR NEXT