ಮಕ್ಕಳ ಪೌಷ್ಠಿಕತೆ ಕುರಿತು ಯುನಿಸೆಫ್ ಆಶ್ರಯದಲ್ಲಿ ನಿನ್ನೆ ನಡೆದ ಸಭೆಯಲ್ಲಿ ಭಾಗಿಯಾಗಿರುವ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು 
ದೇಶ

ಹೆಚ್ಚೆಚ್ಚು ಮಕ್ಕಳನ್ನು ಹೆರಿ: ಸಿರಿವಂತರಿಗೆ ಸಿಎಂ ಚಂದ್ರಬಾಬು ನಾಯ್ಡು ಸಲಹೆ

ಒಂದೇ ಮಗು ಅಥವಾ ಮಕ್ಕಳೇ ಬೇಡ ಎಂಬ ತತ್ವಗಳನ್ನು ಬಿಟ್ಟು, ಹೆಚ್ಚೆಚ್ಚು ಮಕ್ಕಳನ್ನು ಹೆರಿ ಎಂದು ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರು ಶ್ರೀಮಂತ...

ವಿಜಯವಾಡ: ಒಂದೇ ಮಗು ಅಥವಾ ಮಕ್ಕಳೇ ಬೇಡ ಎಂಬ ತತ್ವಗಳನ್ನು ಬಿಟ್ಟು, ಹೆಚ್ಚೆಚ್ಚು ಮಕ್ಕಳನ್ನು ಹೆರಿ ಎಂದು ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರು ಶ್ರೀಮಂತ ಜನರಿಗೆ ಸಲಹೆ ನೀಡಿದ್ದಾರೆ.

ಈ ಹಿಂದಿನಿಂದಲೂ ಜನಸಂಖ್ಯೆ ಹೆಚ್ಚಳದ ಕುರಿತಂತೆ ಪ್ರತಿಪಾದಿಸಿಕೊಂಡು ಬಂದಿರುವ ನಾಯ್ಡು ಅವರು, ಮಕ್ಕಳ ಪೌಷ್ಠಿಕತೆ ಕುರಿತು ಯುನಿಸೆಫ್ ಆಶ್ರಯದಲ್ಲಿ ನಿನ್ನೆ ನಡೆದ ಸಭೆಯೊಂದರಲ್ಲಿ ಮತ್ತೆ ಜನಸಂಖ್ಯೆ ಹೆಚ್ಚಳ ಕುರಿತಂತೆ ಮಾತನಾಡಿದ್ದಾರೆ.

ಕುಟುಂಬ ಯೋಜನೆ ಪ್ರಚಾರದ ಫಲವಾಗಿ ಒಂದೇ ಮಗು ಸಾಕು, ಮಕ್ಕಳೇ ಬೇಡ ಎನ್ನುವ ಟ್ರೆಂಡ್ ಬಂದಿದೆ. ಇದೀಗ ಆ ಯೋಜನೆಯ ಪ್ರಸ್ತುತ ಅಲ್ಲ. ಒಂದು ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೆರಬೇಕು ಎಂದು ಹೇಳಬೇಕಿದೆ.

ಬಡ ಕುಟುಂಬದಲ್ಲಿ ಹೆಚ್ಚೆಚ್ಚು ಮಕ್ಕಳಿರುವುದನ್ನು ನಾನು ನೋಡಿದ್ದೇನೆ. ಆದರೆ, ಶ್ರೀಮಂತರ ಕುಟುಂಬಗಳಲ್ಲಿನ ಜನರು ಒಂದು ಮಗುವನ್ನು ಹೊಂದಿರುತ್ತಾರೆ. ಶ್ರೀಮಂತರ ಜನರೂ ಕೂಡ ಹೆಚ್ಚೆಚ್ಚು ಮಕ್ಕಳನ್ನು ಹೆತ್ತರೆ ಉತ್ತಮವಾಗುತ್ತದೆ ಎಂದು ಹೇಳಿದ್ದಾರೆ. ಅಲ್ಲದೆ, ಇದೇ ವೇಳೆ ಚೀನಾ ಮತ್ತು ಜಪಾನ್ ರಾಷ್ಟ್ರಗಳಲ್ಲಿ ಹೆಚ್ಚುತ್ತಿರುವ ವೃದ್ಧರ ಸಂಖ್ಯೆ ಬಗ್ಗೆ ಆತಂಕ ವ್ಯಕ್ತಪಡಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ದಿನದ ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥರು ಹಿಂಗ್ಯಾಕಂದ್ರು?

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟದ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

SCROLL FOR NEXT