ನರೇಂದ್ರ ಮೋದಿ 
ದೇಶ

ಹಾಕಿ ಚ್ಯಾಂಪಿಯನ್ ಟ್ರೋಪಿ: ಸೋತ ಭಾರತ ತಂಡಕ್ಕೆ ಸಮಾಧಾನ ಹೇಳಿದ ಪ್ರಧಾನಿ ಮೋದಿ

ಭಾರತದ ಪುರುಷರ ಹಾಕಿ ತಂಡದ ಹೋರಾಟವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಅಪಾರವಾಗಿ ಶ್ಲಾಘನೆ ಮಾಡಿ "ತಂಡದ ಈ ಅದ್ಭುತ ನಿರ್ವಹಣೆ ನಮಗೆಲ್ಲ ಹೆಮ್ಮೆ ತಂದಿದೆ..

ನವದೆಹಲಿ: ಇತಿಹಾಸದಲ್ಲೇ ಮೊದಲ ಬಾರಿಗೆ ಚಾಂಪಿಯನ್ಸ್ ಟ್ರೋಫಿ ಹಾಕಿ ಫೈನಲ್‌ ತಲುಪಿದ ಐತಿಹಾಸಿಕ ಸಾಧನೆ ಮಾಡಿದ್ದ ಭಾರತ, ಫೈನಲ್‌ ಪಂದ್ಯದಲ್ಲಿ , ಅದ್ಭುತ ಫಾರ್ಮ್ ನಲ್ಲಿರುವ ಆಸ್ಟ್ರೇಲಿಯದ ಎದುರು ಕೆಚ್ಚೆದೆಯ ಹೋರಾಟ ಪ್ರದರ್ಶಿಸಿ 1-3 ಗೋಲುಗಳ ವಿರೋಚಿತ ಸೋಲನ್ನು ಕಂಡಿದೆ.

ಭಾರತದ ಪುರುಷರ ಹಾಕಿ ತಂಡದ ಹೋರಾಟವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಅಪಾರವಾಗಿ ಶ್ಲಾಘನೆ ಮಾಡಿ "ತಂಡದ ಈ ಅದ್ಭುತ ನಿರ್ವಹಣೆ ನಮಗೆಲ್ಲ  ಹೆಮ್ಮೆ ತಂದಿದೆ' ಎಂದು ಟ್ವೀಟ್‌ ಮಾಡಿದ್ದಾರೆ.

ಮೂರೂ ಯತ್ನಗಳಲ್ಲಿ ಗೆಲ್ಲುವ ಅವಕಾಶ ಕಳೆದುಕೊಂಡ ಭಾರತ ಅಂತಿಮವಾಗಿ 1-3 ಸೋಲಿನೊಂದಿಗೆ ಬೆಳ್ಳಿಯ ಪದಕಕ್ಕೆ ತೃಪ್ತಿ ಪಡೆಯಬೇಕಾಯಿತು. ಆದರೆ ಪಂದ್ಯದ ಉದ್ದಕ್ಕೂ ಭಾರತೀಯ ಆಟಗಾರರು ನೀಡಿದ ಹೋರಾಟ ರೋಮಾಂಚಕವಾಗಿತ್ತು ಎಂದು ಮೋದಿ ಟ್ವೀಟ್ ಮಾಡುವ ಮೂಲಕ  ಭಾರತ ತಂಡ ಸೋಲಿನ ನೋವನ್ನು ಮರೆಯುವಂತೆ ಮಾಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT