ಕೈರಾನ ಹಿಂದುಗಳ ಸಾಮೂಹಿಕ ವಲಸೆಗೆ ಮುಸ್ಲಿಮರು ಕಾರಣ ಅಲ್ಲ: ಹಿಂದೂ ಸಂತರು 
ದೇಶ

ಕೈರಾನ ಹಿಂದುಗಳ ಸಾಮೂಹಿಕ ವಲಸೆಗೆ ಮುಸ್ಲಿಮರು ಕಾರಣ ಅಲ್ಲ: ಹಿಂದೂ ಸಂತರು

ಉತ್ತರ ಪ್ರದೇಶದ ಕೈರಾನದಲ್ಲಿ ಹಿಂದೂಗಳ ಸಾಮೂಹಿಕ ವಲಸೆ ಪ್ರಕರಣದ ಬಗ್ಗೆ ಸಿಬಿಐ ತನಿಖೆ ನಡೆಸಬೇಕೆಂದು ಬಿಜೆಪಿ ಒತ್ತಾಯಿಸುತ್ತಿದ್ದರೆ, ಕೈರಾಣ ವಲಸೆ ಪ್ರಕರಣವನ್ನು ಕೋಮು ಭಾವನೆಗಳ ಲಾಭ ಪಡೆಯಲು ಯತ್ನಿಸುತ್ತಿರುವುದಕ್ಕೆ ಬಿಜೆಪಿಯ ಬಗ್ಗೆ ಹಿಂದೂ ಸಂತರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಕೈರಾನ: ಉತ್ತರ ಪ್ರದೇಶದ ಕೈರಾನದಲ್ಲಿ ಹಿಂದೂಗಳ ಸಾಮೂಹಿಕ ವಲಸೆ ಪ್ರಕರಣದ ಬಗ್ಗೆ ಸಿಬಿಐ ತನಿಖೆ ನಡೆಸಬೇಕೆಂದು ಬಿಜೆಪಿ ಒತ್ತಾಯಿಸುತ್ತಿದ್ದರೆ, ಕೈರಾಣ ವಲಸೆ ಪ್ರಕರಣವನ್ನು ಕೋಮು ಭಾವನೆಗಳ ಲಾಭ ಪಡೆಯಲು ಯತ್ನಿಸುತ್ತಿರುವುದಕ್ಕೆ ಬಿಜೆಪಿಯ ಬಗ್ಗೆ ಹಿಂದೂ ಸಂತರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಹಿಂದೂ ಮಹಾಸಭಾದ ಮುಖಂಡ ಸ್ವಾಮಿ ಚಕ್ರಪಾಣಿ, ಸ್ವಾಮಿ ಚಿನ್ಮಯಾನಂದ, ಆಚಾರ್ಯ ಪ್ರಮೋದ್ ಕೃಷ್ಣನ್, ನಾರಾಯಣ್ ಗಿರಿ, ಸ್ವಾಮಿ ಕಲ್ಯಾಣ್ ದೇವ್ ಜಿ ಮಹಾರಾಜ್ ಅವರು ಕೈರಾನದಲ್ಲಿರುವ ಹಿಂದೂಗಳನ್ನು ಭೇಟಿ ಮಾಡಿದ್ದು, ಸಾಮೂಹಿಕ ವಲಸೆ ಹಿಂದಿನ ಕಾರಣವನ್ನು ತಿಳಿಯಲು ಯತ್ನಿಸಿದ್ದಾರೆ.

ಕೈರಾನಾದ ಹಿಂದೂ ಕುಟುಂಬಗಳನ್ನು ಭೇಟಿ ಮಾಡಿದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿರುವ ಸ್ವಾಮಿ ಚಕ್ರಪಾಣಿ, ಕೈರಾಣ ಸಮಸ್ಯೆಗೆ ಧಾರ್ಮಿಕ ನಂಟು ಕಲ್ಪಿಸುವುದು ತಪ್ಪು ಎಂದು ಹೇಳಿದ್ದಾರೆ. ಬಿಜೆಪಿ ಹಾಗೂ ಬಿಜೆಪಿಯ ಸಂಸದ ಹುಕುಂ ಸಿಂಗ್ ಕೈರಾಣ ಸಮಸ್ಯೆಗೆ ಸಂಬಂಧಿಸಿದಂತೆ ಕೋಮು ಭಾವನೆಗಳ ಲಾಭ ಪಡೆಯಲು ಯತ್ನಿಸುತ್ತಿದ್ದಾರೆ ಎಂದು ಸ್ವಾಮಿ ಚಕ್ರಪಾಣಿ ಹೇಳಿಕೆ ನೀಡಿದ್ದಾರೆ.
 
ಮುಸ್ಲಿಮರು ಬಹುಸಂಖ್ಯಾತರಾಗಿರುವ ಕೈರಾನದಲ್ಲಿ ಧಾರ್ಮಿಕ ವಿಷಯಗಳಿಂದ ಹಿಂದೂಗಳು ವಲಸೆ ಹೋಗುತ್ತಿಲ್ಲ, ಬದಲಾಗಿ ಹೆಚ್ಚುತ್ತಿರುವ ಅಪರಾಧ ಪ್ರಕರಣಗಳಿಂದ ವಲಸೆ ಹೋಗುತ್ತಿದ್ದಾರೆ ಎಂದು ಸ್ವಾಮಿ ಚಕ್ರಪಾಣಿ ಹೇಳಿದ್ದಾರೆ. ಕೈರಾಣ ಸಾಮೂಹಿಕ ವಲಸೆ ವಿಷಯ ರಾಷ್ಟ್ರಮಟ್ಟದಲ್ಲಿ ಚರ್ಚೆಗೆ ಗ್ರಾಸವಾಗುತ್ತಿದ್ದಂತೆಯೇ ಸಮಾಜವಾದಿ ಪಕ್ಷದ ಮುಖಂಡರು ಹಿಂದೂ ಸಂತರು ಕೈರಾನಗೆ ತೆರಳಿ ನೈಜ ಪರಿಸ್ಥಿತಿಯನ್ನು ತಿಳಿಸಬೇಕೆಂದು ಆಗ್ರಹಿಸಿದ್ದ ಹಿನ್ನೆಲೆಯಲ್ಲಿ ಹಿಂದೂ ಮಹಾಸಭಾದ ಮುಖಂಡರು ಕೈರಾನಾಗೆ ಭೇಟಿ ನೀಡಿ ಹಿಂದೂ ಕುಟುಂಬಗಳನ್ನು ಭೇಟಿ ಮಾಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Nepal floods: ಸಾವಿನ ಸಂಖ್ಯೆ 157ಕ್ಕೇರಿಕೆ, 750ಕ್ಕೂ ಅಧಿಕ ಮಂದಿ ನಾಪತ್ತೆ, ನೇಪಾಳಕ್ಕೆ ಭಾರತ ನೆರವು! ಸಹಾಯವಾಣಿ ಬಿಡುಗಡೆ

ನೇಪಾಳ ಭೀಕರ ಪ್ರವಾಹ: 95 ಮಂದಿ ಸಾವು; 105 ಭಾರತೀಯರು ಸೇರಿ 400 ಮಂದಿ ನಾಪತ್ತೆ: ಬಿಹಾರ, ಯುಪಿಯಲ್ಲಿ ಹೈ ಅಲರ್ಟ್! Video

ನೇಪಾಳ ಪ್ರವಾಹ: ಭಾರತಕ್ಕೆ ದೊಡ್ಡ ಆತಂಕವಿಲ್ಲ, ಜಲಾಶಯಗಳ ನೀರಿನ ಮಟ್ಟ ಇಳಿಕೆ: ಕೇಂದ್ರ ಸ್ಪಷ್ಟನೆ

Sugar Price: ಈರುಳ್ಳಿ ಬೆನ್ನಲ್ಲೇ ಇದೀಗ ಸಕ್ಕರೆ ಶಾಕ್: ಕೆಜಿಗೆ 65 ರೂ ದಾಟಿದ ದರ, ಗ್ರಾಹಕರ ಜೇಬಿಗೆ 'ಸಿಹಿ ಕಹಿ'!

2nd Test: ಬೌಂಡರಿ ಲೈನ್ ಬಳಿ ದುರ್ವರ್ತನೆ ತೋರಿದ್ದ ಲಂಕಾ ಆಟಗಾರ Prabath Jayasuriyaಗೆ ಬರೆ ಹಾಕಿದ ICC!