ಬಿಜೆಪಿ ಸಂಸದ ಯೋಗಿ ಆದಿತ್ಯನಾಥ್ 
ದೇಶ

"ಮದರ್ ತೆರೆಸಾ" ಕ್ರೈಸ್ತ ಮತಾಂತರ ಜಾಲದ ಭಾಗ; ಯೋಗಿ ಅದಿತ್ಯಾನಾಥ್ ವಿವಾದಾತ್ಮಕ ಹೇಳಿಕೆ

ನೊಬೆಲ್ ಪುರಸ್ಕೃತೆ ಮದರ್ ತೆರೆಸಾ ವಿರುದ್ಧ ಬಿಜೆಪಿ ಸಂಸದ ಯೋಗಿ ಆದಿತ್ಯನಾಥ್ ಅವರು ವಿವಾದಾತ್ಮಕ ಹೇಳಿಕೆಯನ್ನು ನೀಡಿದ್ದು, ಮದರ್ ತೆರಸಾ...

ಬಸ್ತಿ: ನೊಬೆಲ್ ಪುರಸ್ಕೃತೆ ಮದರ್ ತೆರೆಸಾ ವಿರುದ್ಧ ಬಿಜೆಪಿ ಸಂಸದ ಯೋಗಿ ಆದಿತ್ಯನಾಥ್ ಅವರು ವಿವಾದಾತ್ಮಕ ಹೇಳಿಕೆಯನ್ನು ನೀಡಿದ್ದು, ಮದರ್ ತೆರಸಾ ಭಾರತವನ್ನು ಕ್ರೈಸ್ತ ಧರ್ಮಕ್ಕೆ ಪರಿವರ್ತಿಸುವ ಜಾಲದ ಒಂದು ಭಾಗವಾಗಿದ್ದರು ಎಂದು ಆರೋಪಿಸಿದ್ದಾರೆ.

ಬಸ್ತಿಯಲ್ಲಿ ನಡೆದ ರಾಮ ಕಥಾ ಕಾರ್ಯಕ್ರಮದಲ್ಲಿ ಮಾತನಾಡಿರುವ ಅವರು, ಈಶಾನ್ಯ ರಾಜ್ಯಗಳಾದ ಅರುಣಾಚಲಪ್ರದೇಶ, ತ್ರಿಪುರ, ಮೇಘಾಲಯ ಮತ್ತು ನಾಗಾಲ್ಯಾಂಡ್ ಗಳಲ್ಲಿ ಮತಾಂತರದಿಂದ ಪ್ರತ್ಯೇಕತಾ ಚಳುವಳಿಗಳು ಪ್ರಾರಂಭವಾಗಿವೆ.

ಭಾರತದ ಈಶಾನ್ಯ ಭಾಗದಲ್ಲಿನ ಪರಿಸ್ಥಿತಿಯ ಬಗ್ಗೆ ಎಷ್ಟೋ ಜನರಿಗೆ ತಿಳಿದಿಲ್ಲ. ಒಮ್ಮೆ ಇಲ್ಲಿಗೆ ಭೇಟಿ ನೀಡಿ ಪರಿಸ್ಥಿತಿಯನ್ನು ಕಣ್ಣಾರೆ ನೋಡಿ, ಅರ್ಥ ಮಾಡಿಕೊಳ್ಳಬೇಕಿದೆ ಎಂದಿದ್ದಾರೆ.

ಈ ಹಿಂದೆ ಕೂಡ ಆರ್ ಎಸ್ಎಸ್ ಮುಖಂಡ ಮೋಹನ್ ಭಾಗವತ್ ಕೂಡ ಮದರ್ ತೆರೆಸಾ ಕುರಿತಂತೆ ವಿವಾದಾತ್ಮಕ ಹೇಳಿಕೆ ನೀಡಿದ್ದರು, ಮದರ್ ತೆರೆಸಾ ಅವರು ಬಡವರಿಗೆ ಸೇವೆ ನೀಡುವುದರ ಹಿಂದೆ ಅವರನ್ನು ಕ್ರೈಸ್ತ ಧರ್ಮಕ್ಕೆ ಮತಾಂತರ ಮಾಡುವ ಉದ್ದೇಶವಿಟ್ಟುಕೊಂಡಿದ್ದರು ಎಂದು ಆರೋಸಿದ್ದರು. ಇದೀರ ಯೋಗಿ ಆದಿತ್ಯನಾಥ್ ಅವರು ನೀಡಿರುವ ಹೇಳಿಕೆ ಮತ್ತೆ ಹೊಸ ವಿವಾದ ಸೃಷ್ಟಿಸಿದಂತಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಜೂನ್ 30ರೊಳಗೆ ಮುಗಿಸಿ: ರಾಜ್ಯ ಸರ್ಕಾರಕ್ಕೆ 'ಸುಪ್ರೀಂ' ಗಡುವು

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

ಕ್ರಿಕೆಟ್ ಇತಿಹಾಸದಲ್ಲೇ ಮೊದಲು: ಅಂತಾರಾಷ್ಟ್ರೀಯ ಕ್ರಿಕೆಟ್ ಲೀಗ್ ನಲ್ಲಿ ಜೊತೆಯಾಗಿ ಕಣಕ್ಕಿಳಿದ ಅಪ್ಪ-ಮಗ.. ಯಾರಿವರು?

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

SCROLL FOR NEXT