ಬಿಜೆಪಿ ಸಂಸದ ಯೋಗಿ ಆದಿತ್ಯನಾಥ್ 
ದೇಶ

"ಮದರ್ ತೆರೆಸಾ" ಕ್ರೈಸ್ತ ಮತಾಂತರ ಜಾಲದ ಭಾಗ; ಯೋಗಿ ಅದಿತ್ಯಾನಾಥ್ ವಿವಾದಾತ್ಮಕ ಹೇಳಿಕೆ

ನೊಬೆಲ್ ಪುರಸ್ಕೃತೆ ಮದರ್ ತೆರೆಸಾ ವಿರುದ್ಧ ಬಿಜೆಪಿ ಸಂಸದ ಯೋಗಿ ಆದಿತ್ಯನಾಥ್ ಅವರು ವಿವಾದಾತ್ಮಕ ಹೇಳಿಕೆಯನ್ನು ನೀಡಿದ್ದು, ಮದರ್ ತೆರಸಾ...

ಬಸ್ತಿ: ನೊಬೆಲ್ ಪುರಸ್ಕೃತೆ ಮದರ್ ತೆರೆಸಾ ವಿರುದ್ಧ ಬಿಜೆಪಿ ಸಂಸದ ಯೋಗಿ ಆದಿತ್ಯನಾಥ್ ಅವರು ವಿವಾದಾತ್ಮಕ ಹೇಳಿಕೆಯನ್ನು ನೀಡಿದ್ದು, ಮದರ್ ತೆರಸಾ ಭಾರತವನ್ನು ಕ್ರೈಸ್ತ ಧರ್ಮಕ್ಕೆ ಪರಿವರ್ತಿಸುವ ಜಾಲದ ಒಂದು ಭಾಗವಾಗಿದ್ದರು ಎಂದು ಆರೋಪಿಸಿದ್ದಾರೆ.

ಬಸ್ತಿಯಲ್ಲಿ ನಡೆದ ರಾಮ ಕಥಾ ಕಾರ್ಯಕ್ರಮದಲ್ಲಿ ಮಾತನಾಡಿರುವ ಅವರು, ಈಶಾನ್ಯ ರಾಜ್ಯಗಳಾದ ಅರುಣಾಚಲಪ್ರದೇಶ, ತ್ರಿಪುರ, ಮೇಘಾಲಯ ಮತ್ತು ನಾಗಾಲ್ಯಾಂಡ್ ಗಳಲ್ಲಿ ಮತಾಂತರದಿಂದ ಪ್ರತ್ಯೇಕತಾ ಚಳುವಳಿಗಳು ಪ್ರಾರಂಭವಾಗಿವೆ.

ಭಾರತದ ಈಶಾನ್ಯ ಭಾಗದಲ್ಲಿನ ಪರಿಸ್ಥಿತಿಯ ಬಗ್ಗೆ ಎಷ್ಟೋ ಜನರಿಗೆ ತಿಳಿದಿಲ್ಲ. ಒಮ್ಮೆ ಇಲ್ಲಿಗೆ ಭೇಟಿ ನೀಡಿ ಪರಿಸ್ಥಿತಿಯನ್ನು ಕಣ್ಣಾರೆ ನೋಡಿ, ಅರ್ಥ ಮಾಡಿಕೊಳ್ಳಬೇಕಿದೆ ಎಂದಿದ್ದಾರೆ.

ಈ ಹಿಂದೆ ಕೂಡ ಆರ್ ಎಸ್ಎಸ್ ಮುಖಂಡ ಮೋಹನ್ ಭಾಗವತ್ ಕೂಡ ಮದರ್ ತೆರೆಸಾ ಕುರಿತಂತೆ ವಿವಾದಾತ್ಮಕ ಹೇಳಿಕೆ ನೀಡಿದ್ದರು, ಮದರ್ ತೆರೆಸಾ ಅವರು ಬಡವರಿಗೆ ಸೇವೆ ನೀಡುವುದರ ಹಿಂದೆ ಅವರನ್ನು ಕ್ರೈಸ್ತ ಧರ್ಮಕ್ಕೆ ಮತಾಂತರ ಮಾಡುವ ಉದ್ದೇಶವಿಟ್ಟುಕೊಂಡಿದ್ದರು ಎಂದು ಆರೋಸಿದ್ದರು. ಇದೀರ ಯೋಗಿ ಆದಿತ್ಯನಾಥ್ ಅವರು ನೀಡಿರುವ ಹೇಳಿಕೆ ಮತ್ತೆ ಹೊಸ ವಿವಾದ ಸೃಷ್ಟಿಸಿದಂತಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel