ರವೀಂದ್ರ ಚವಾಣ್ 
ದೇಶ

ದಲಿತರನ್ನು ಹಂದಿಗೆ ಹೋಲಿಸಿದ ಬಿಜೆಪಿ ಶಾಸಕ: ವಿಡಿಯೋ ವೈರಲ್, ಆಕ್ರೋಶ

ಡೊಂಬಿವಿಲಿ ಬಿಜೆಪಿ ಶಾಸರ ದಲಿತರನ್ನು ಹಂದಿಗೆ ಹೋಲಿಸುವ ಹೇಳಿಕೆಯ ವಿಡಿಯೋ ವೈರಲ್ ಆಗಿದ್ದು, ರಾಜಕೀಯ ವಲಯದಲ್ಲಿ ಕೋಲಾಹಲ ಮೂಡಿಸಿದೆ...

ಮುಂಬಯಿ: ಡೊಂಬಿವಿಲಿ ಬಿಜೆಪಿ ಶಾಸರ ದಲಿತರನ್ನು ಹಂದಿಗೆ ಹೋಲಿಸುವ ಹೇಳಿಕೆಯ ವಿಡಿಯೋ ವೈರಲ್ ಆಗಿದ್ದು, ರಾಜಕೀಯ ವಲಯದಲ್ಲಿ ಕೋಲಾಹಲ ಮೂಡಿಸಿದೆ.

ಠಾಣೆ ಪ್ರದೇಶದಲ್ಲಿ ನಡೆದ ಸ್ಮಾರ್ಟ್ ಸಿಟಿ ಕಾರ್ಯಕ್ರಮದಲ್ಲಿ ಬಿಜೆಪಿ ಶಾಸಕ ರವೀಂದ್ರ ಚವ್ಹಾಣ್ ನೀಡಿರುವ ಹೇಳಿಕೆ ದಲಿತ ಸಮುದಾಯದ ಆಕ್ರೋಶಕ್ಕೆ ಕಾರಣವಾಗಿದೆ.  

ದಲಿತರನ್ನು ಹಂದಿಗಳಿಗೆ ಹೋಲಿಸುತ್ತಿರುವ ಭಾಷಣದ ವಿಡಿಯೋ ವೈರಲ್ ಆಗುತ್ತಿದ್ದಂತೆ  ರವೀಂದ್ರ ಚವಾಣ್ ಕ್ಷಮೆಯಾಚಿಸಬೇಕು ಎಂದು ವಿಪಕ್ಷಗಳು ಆಗ್ರಹಿಸಿವೆ.
 
ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ದಲಿತರ ಏಳಿಗೆಗಾಗಿ ಶ್ರಮಿಸುತ್ತಿದ್ದಾರೆ ಎಂದು ಶಾಸಕರು ಹೇಳಿದ್ದಾರೆ.

ಪ್ರತಿಭಟನೆ ಕಾವು ಹೆಚ್ಚಾಗುತ್ತಿದ್ದಂತೆ ಎನ್‌ಸಿಪಿ ಪಕ್ಷದ ಮುಖಂಡರು ಹಂದಿಗೆ ನಾಮಕಾರಣ ಕಾರ್ಯಕ್ರಮ ಮಾಡಿ ಅದಕ್ಕೆ ಬಿಜೆಪಿ ಶಾಸಕ ರವೀಂದ್ರ ಚೌಹಾನ್ ಅವರ ಹೆಸರಿಟ್ಟು ಪ್ರತಿಭಟಿಸಿದರು.

ನನ್ನ ವಿಡಿಯೋ ರೆಕಾರ್ಡ್ ಮಾಡಿಕೊಂಡವರು ನಾನು ಮಾತನಾಡಿದ್ದ ಆಡಿಯೋವನ್ನು ನಾಶಗೊಳಿಸಿ, ಹೊಸದಾಗಿ ಎಡಿಟ್ ಮಾಡಿದ್ದಾರೆ ಎಂದು ರವೀಂದ್ರ ಚವಾಣ್ ಸ್ಪಷ್ಟನೆ ನೀಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT