ಸರಿತಾ ನಾಯರ್ 
ದೇಶ

ಸೋಲಾರ್ ಹಗರಣ: ಸರಿತಾ ನಾಯರ್ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್

ಕೇರಳದ ರಾಜಕೀಯ ವಲಯದಲ್ಲಿ ತೀವ್ರ ಸಂಚಲನ ಮೂಡಿಸಿದ್ದ ಸೋಲಾರ್ ಹಗರಣದ ಪ್ರಮುಖ ಆರೋಪಿ ಸರಿತಾ ಎಸ್ ನಾಯರ್ ವಿರುದ್ಧ ನ್ಯಾಯಾಂಗ ಆಯೋಗ...

ಕೊಚ್ಚಿ: ಕೇರಳದ ರಾಜಕೀಯ ವಲಯದಲ್ಲಿ ತೀವ್ರ ಸಂಚಲನ ಮೂಡಿಸಿದ್ದ ಸೋಲಾರ್ ಹಗರಣದ ಪ್ರಮುಖ ಆರೋಪಿ ಸರಿತಾ ಎಸ್ ನಾಯರ್ ವಿರುದ್ಧ ನ್ಯಾಯಾಂಗ ಆಯೋಗ ಗುರುವಾರ ಜಾಮೀನು ರಹಿತ ಬಂಧನ ವಾರಂಟ್ ಜಾರಿ ಮಾಡಿದೆ.
ಸಮನ್ಸ್ ನೀಡಿದರೂ ವಿಚಾರಣೆಗೆ ಹಾಜರಾಗದ ಸರಿತಾ ವಿರುದ್ಧ ಹಗರಣದ ತನಿಖೆ ನಡೆಸುತ್ತಿರುವ ನ್ಯಾಯಮೂರ್ತಿ ಜಿ. ಶಿವರಾಜನ್‌ ಅವರು ಇಂದು ಜಾಮೀನು ರಹಿತ ಬಂಧನ ವಾರಂಟ್ ಜಾರಿ ಮಾಡಿದ್ದಾರೆ. ಅಲ್ಲದೆ ಆರೋಪಿಯನ್ನು ಬಂಧಿಸಿ ಜೂನ್ 27ರಂದು ಆಯೋಗದ ಮುಂದೆ ವಿಚಾರಣೆಗೆ ಹಾಜರುಪಡಿಸುವಂತೆ ರಾಜ್ಯ ಪೊಲೀಸ್ ಮುಖ್ಯಸ್ಥರಿಗೆ ಸೂಚಿಸಿದ್ದಾರೆ.
ನಿನ್ನೆಯಷ್ಟೇ ಆರೋಪಿಯನ್ನು ನಾಳೆ ವಿಚಾರಣೆಗೆ ಹಾಜರುಪಡಿಸುವಂತೆ ಶಿವರಾಜನ್ ಅವರು ಸರಿತಾ ಪರ ವಕೀಲ ಸಿ ಡಿ ಜಾನಿ ಅವರಿಗೆ ಸೂಚಿಸಿತ್ತು. ಆದರೆ ತನ್ನ ಕಕ್ಷಿದಾರಳನ್ನು ಇಂದು ವಿಚಾರಣೆಗೆ ಹಾಜರುಪಡಿಸಿದ ಜಾನಿ, ಒಂದು ವಾರಗಳ ಕಾಲವಕಾಶ ನೀಡುವಂತೆ ಮನವಿ ಮಾಡಿದರು. ಇದರಿಂದ ಆಕ್ರೋಶಗೊಂಡ ನ್ಯಾಮೂರ್ತಿಗಳು, ಆರೋಪಿಯ ವಿರುದ್ಧ ಬಂಧನ ವಾರಂಟ್ ಜಾರಿ ಮಾಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT