ಸುಬ್ರಹ್ಮಣಿಯನ್ ಸ್ವಾಮಿ 
ದೇಶ

ಅರುಣ್ ಜೇಟ್ಲಿ ವಿರುದ್ಧ ವಾಗ್ದಾಳಿ: ಸುಬ್ರಹ್ಮಣಿಯನ್ ಸ್ವಾಮಿ ಬಗ್ಗೆ ಬಿಜೆಪಿ ವರಿಷ್ಠರ ಅಸಮಾಧಾನ

ಬಿಜೆಪಿಯ ವರಿಷ್ಠರು ಸ್ವಾಮಿ ನಡೆಯ ಬಗ್ಗೆ ಅಸಮಾಧಾನಗೊಂಡಿದ್ದಾರೆ ಎಂದು ವಿಶ್ಲೇಷಿಸಲಾಗುತ್ತಿದೆ.

ನವದೆಹಲಿ: ಇತ್ತೀಚಿನ ದಿನಗಳಲ್ಲಿ ಬಿಜೆಪಿ ಸಂಸದ ಸುಬ್ರಹ್ಮಣಿಯನ್ ಸ್ವಾಮಿ ಕೇಂದ್ರ ವಿತ್ತ ಸಚಿವ ಅರುಣ್ ಜೇಟ್ಲಿ ಹಾಗೂ ಸರ್ಕಾರದ ಉನ್ನತ ಮಟ್ಟದ ಅಧಿಕಾರಿಗಳ ವಿರುದ್ಧ ಮಾತನಾಡುತ್ತಿರುವುದು ಪಕ್ಷಕ್ಕೆ ಮುಜುಗರ ಉಂಟಾಗಿದ್ದು, ಬಿಜೆಪಿಯ ವರಿಷ್ಠರು ಸ್ವಾಮಿ ನಡೆಯ ಬಗ್ಗೆ ಅಸಮಾಧಾನಗೊಂಡಿದ್ದಾರೆ ಎಂದು ವಿಶ್ಲೇಷಿಸಲಾಗುತ್ತಿದೆ.

ಸುಬ್ರಹ್ಮಣಿಯನ್ ಸ್ವಾಮಿ ನಡೆಸುತ್ತಿರುವ ವಾಗ್ದಾಳಿಯ ಬಗ್ಗೆ ಬಿಜೆಪಿ ವರಿಷ್ಠರು ಅಸಮಾಧಾನಗೊಂಡಿದ್ದಾರಾದರೂ, ಸ್ವಾಮಿ ಅವರ ವಿರುದ್ಧ ಕ್ರಮ ಕೈಗೊಳ್ಳುವ ಬಗ್ಗೆ ಆತುರದ ನಿರ್ಧಾರ ತೆಗೆದುಕೊಳ್ಳದೆ ಇರಲು ನಿರ್ಧರಿಸಿದ್ದಾರಂತೆ. ಸುಬ್ರಹ್ಮಣಿಯನ್ ಸ್ವಾಮಿ ಅವರ ಮುಂದಿನ ನಡೆಗಳನ್ನು ಗಮನಿಸಿ ಅವರ ವಿರುದ್ಧ ಕ್ರಮ ಕೈಗೊಳ್ಳುವುದೋ ಬೇಡವೋ ಎಂಬ ಬಗ್ಗೆ ತೀರ್ಮಾನಿಸಲು ಬಿಜೆಪಿ ನಾಯಕರು ನಿರ್ಧರಿಸಿದ್ದಾರೆ. 

ಸರ್ಕಾರದಲ್ಲಿರುವ ಪ್ರಮುಖ ಸಚಿವರ ವಿರುದ್ಧ ವಾಗ್ದಾಳಿ ನಡೆಸುತ್ತಿರುವ ಸುಬ್ರಹ್ಮಣಿಯನ್ ಸ್ವಾಮಿ ಅವರಿಗೆ ಆರ್ ಎಸ್ ಎಸ್ ನ ಬೆಂಬಲವಿದೆ ಎಂಬ ಊಹಾಪೋಹಗಳನ್ನು ಬಿಜೆಪಿಯ ಹಿರಿಯ ನಾಯಕರೊಬ್ಬರು ನಿರಾಕರಿಸಿದ್ದು, ಸಂಘಪರಿವಾರ ಸರ್ಕಾರದ ವರ್ಚಸ್ಸಿಗೆ ಧಕ್ಕೆ ಉಂಟಾಗುವ ರೀತಿಯ ವಾಗ್ದಾಳಿಗಳನ್ನು ಬೆಂಬಲಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT