ನರೇಂದ್ರ ಮೋದಿ 
ದೇಶ

ತುರ್ತು ಪರಿಸ್ಥಿತಿ ಭಾರತದ ಕರಾಳ ಅಧ್ಯಾಯ: ಪ್ರಧಾನಿ ಮೋದಿ

ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ತುರ್ತು ಪರಿಸ್ಥಿತಿಯ ದಿನಗಳನ್ನು ನೆನೆಸಿಕೊಂಡಿರುವ ಪ್ರಧಾನಿ ನರೇಂದ್ರ ಮೋದಿ ತುರ್ತು ಪರಿಸ್ಥಿತಿಯನ್ನು ಭಾರತದ ಕರಾಳ ಅಧ್ಯಾಯ ಎಂದು ಹೇಳಿದ್ದಾರೆ.

ನವದೆಹಲಿ: ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ತುರ್ತು ಪರಿಸ್ಥಿತಿಯ ದಿನಗಳನ್ನು ನೆನೆಸಿಕೊಂಡಿರುವ ಪ್ರಧಾನಿ ನರೇಂದ್ರ ಮೋದಿ ತುರ್ತು ಪರಿಸ್ಥಿತಿಯನ್ನು ಭಾರತದ ಕರಾಳ ಅಧ್ಯಾಯ ಎಂದು ಹೇಳಿದ್ದಾರೆ.

ತುರ್ತು ಪರಿಸ್ಥಿತಿಯಂತಹ ಕರಾಳ ಅಧ್ಯಾಯದ ಹೊರತಾಗಿಯೂ ಭಾರತದ ಜನತೆ ಪ್ರಜಾಪ್ರಭುತ್ವಕ್ಕೆ ಹೆಚ್ಚಿನ ಆದ್ಯತೆ ನೀಡಿದ್ದಾರೆ. ದೇಶದ ಜನರ ಧ್ವನಿಯನ್ನು ಅಡಗಿಸುವಂತಹ ದಿನಗಳಿದ್ದವು, ಆದರೆ ಈಗ ದೇಶದ ಜನತೆ ಸರ್ಕಾರದ ಕಾರ್ಯವೈಖರಿ ಕುರಿತು ತಮ್ಮ ಅಭಿಪ್ರಾಯಗಳನ್ನು ಮುಕ್ತವಾಗಿ ಪ್ರಕಟಿಸುತ್ತಿದ್ದಾರೆ ಎಂದು ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

1975 ರಲ್ಲಿ ದೇಶದ ಮೇಲೆ ತುರ್ತು ಪರಿಸ್ಥಿತಿ ಹೇರಿಕೆಯಾದಾಗ ಸಾವಿರಾರು ರಾಜಕೀಯ ಕಾರ್ಯಕರ್ತರು ಹಾಗೂ ವಿದ್ಯಾರ್ಥಿ ನಾಯಕರುಗಳನ್ನು ಕಾರಣವೇ ಇಲ್ಲದೆ ಬಂಧಿಸಲಾಗಿತ್ತು. ಜನರ ಮೂಲಭೂತ ಹಕ್ಕುಗಳನ್ನು ಕಸಿದುಕೊಳ್ಳಲಾಗಿತ್ತು, ಜಯಪ್ರಕಾಶ್ ನಾರಾಯಣ್ ಸೇರಿದಂತೆ ಹಲವು ರಾಜಕೀಯ ಮುಖಂಡರ ಬಂಧನದ ಮೂಲಕ ಇಡೀ ದೇಶವೇ ಒಂದು ಬೃಹತ್ ಜೈಲಾಗಿ ಪರಿವರ್ತನೆಯಾಗಿತ್ತು ಎಂದು ಮೋದಿ ತುರ್ತು ಪರಿಸ್ಥಿತಿಯ ದಿನಗಳನ್ನು ನೆನಪಿಸಿಕೊಂಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬಂಗಾಳದಲ್ಲಿ CAA, UCC ತ್ವರಿತ ಅನುಷ್ಠಾನ; ಮಾತುವಾ, ನಮಸುದ್ರರಿಗೆ ಪೌರತ್ವ ನೀಡುತ್ತೇವೆ: ಪ್ರಧಾನಿ ಮೋದಿ

ಹಾರ್ಮುಜ್ ತೆರೆಯಲು ಇರಾನ್ ಪರದಾಟ: ಜಲಸಂಧಿ ನಿರ್ಬಂಧಿಸಲು ತಾನೇ ನೆಟ್ಟ ಮೈನ್ಸ್ ಹುಡುಕಲು ವಿಫಲ; ಹಾಗಾದ್ರೆ ಮುಂದೇನು?

ಇಸ್ಲಾಮಾಬಾದ್‌ಗೆ ಆಗಮಿಸಿದ ಜೆಡಿ ವ್ಯಾನ್ಸ್ ವಿಮಾನಕ್ಕೆ ಪಾಕ್‌ನ ಐದು ಎಫ್-16 ಎಸ್ಕಾರ್ಟ್; Video ನೋಡಿ

ಹಾಡಹಗಲೇ, ನಡುರಸ್ತೆಯಲ್ಲಿ ಲಾಯರ್ ಗೆ ಗುಂಡಿಕ್ಕಿ ಹತ್ಯೆ, ಬೈಕ್ ಸ್ಟಾರ್ಟ್ ಆಗದೇ ಹಂತಕರ ಪರದಾಟ! Video

Viral Video: 'ರೀಲ್ಸ್‌ಗಾಗಿ ಮಗುವಿನ ಪ್ರಾಣವನ್ನೇ ಪಣಕ್ಕಿಟ್ಟ ತಂದೆ'; ಬಾಲ್ಕನಿಯಿಂದ ಜಿಗಿದ ಬಾಲಕ, ಅಪ್ಪನ ಹುಚ್ಚಾಟಕ್ಕೆ ತೀವ್ರ ಆಕ್ರೋಶ!

SCROLL FOR NEXT