ದೇಶ

ಸರ್ಕಾರ ರಾಮಮಂದಿರ ನಿರ್ಮಾಣ ಮಸೂದೆ ಪಾಸ್ ಮಾಡುವ ನಂಬಿಕೆಯಿದೆ: ತೊಗಾಡಿಯ

Shilpa D

ಪಾಟ್ನಾ: ಮೋದಿ ನೇತೃತ್ವದ ಎನ್ ಡಿಎ ಸರ್ಕಾರ ಉಳಿದ ಮೂರು ವರ್ಷಗಳಲ್ಲಿ ರಾಮ ಮಂದಿರ ನಿರ್ಮಾಣ ಮಾಡುವ ಸಂಬಂಧಿತ ಕಾಯಿದೆಯನ್ನು ಜಾರಿಗೆ ತರುತ್ತದೆ ಎಂಬ ನಂಬಿಕೆ ಇದೆ ಎಂದು ವಿಶ್ವ ಹಿಂದೂ ಪರಿಷತ್ ಮುಖ್ಯಸ್ಥ ಪ್ರವೀಣ್ ತೊಗಾಡಿಯಾ ಹೇಳಿದ್ದಾರೆ.

ಅಯೋಧ್ಯೆಯಲ್ಲಿ ರಾಮ ನಿರ್ಮಾಣ ಮಾಡಬೇಕೆಂದರೇ ಕಾನೂನು ಜಾರಿಗೆ ತರುವುದರಿಂದ ಮಾತ್ರ ಸಾಧ್ಯ ಎಂದು ಅವರು ಅಭಿಪ್ರಾಯ ಪಟ್ಟಿದ್ದಾರೆ.

ಪರಸ್ಪರ ಒಪ್ಪಿಗೆಯ ಮೇರೆಗೆ ರಾಮ ಮಂದಿರ ನಿರ್ಮಾಣ ಮಾಡುವಂತ ತೀರ್ಪನ್ನು ಕೋರ್ಟ್ ನೀಡದಿದ್ದರೇ, ಸಂಸತ್ತಿನಲ್ಲಿ  ಕಾನೂನು ಜಾರಿಗೆ ತಂದು ಅನಂತರವಷ್ಟೇ ನಿರ್ಮಾಣ ಮಾಡಲು ಸಾಧ್ಯ ಎಂದು ಅವರು ಹೇಳಿದ್ದಾರೆ. ಹೀಗಾಗಿ  ಸರ್ಕಾರ ರಾಮ ಮಂದಿರ ನಿರ್ಮಾಣ ಮಾಡುವ ಕಾನೂನನ್ನು ಜಾರಿಗೆ ತರಬೇಕೆಂದು ಅವರು ಒತ್ತಾಯಿಸಿದ್ದಾರೆ.

SCROLL FOR NEXT