ಅರುಣ್ ಜೇಟ್ಲಿ 
ದೇಶ

ಸಚಿವ ಅರುಣ್ ಜೇಟ್ಲಿ ಚೀನಾ ಪ್ರವಾಸ ಒಂದು ದಿನ ಮೊಟಕು

ಬಿಜೆಪಿ ಸಂಸದ ಸುಬ್ರಹ್ಮಣಿಯನ್ ಸ್ವಾಮಿ ವಾಗ್ದಾಳಿ ಬೆನ್ನಲ್ಲೇ, ಕೇಂದ್ರ ವಿತ್ತ ಸಚಿವ ಅರುಣ್ ಜೇಟ್ಲಿ ತಮ್ಮ ಚೀನಾ ಪ್ರವಾಸವನ್ನು ಒಂದು ದಿನ ಮುಂಚಿತವಾಗಿಯೇ ಮುಕ್ತಾಯಗೊಳಿಸಿ ಭಾರತಕ್ಕೆ ವಾಪಸ್ಸಾಗಿದ್ದಾರೆ.

ನವದೆಹಲಿ: ಬಿಜೆಪಿ ಸಂಸದ ಸುಬ್ರಹ್ಮಣಿಯನ್ ಸ್ವಾಮಿ ವಾಗ್ದಾಳಿ ಬೆನ್ನಲ್ಲೇ, ಕೇಂದ್ರ ವಿತ್ತ ಸಚಿವ ಅರುಣ್ ಜೇಟ್ಲಿ ತಮ್ಮ ಚೀನಾ ಪ್ರವಾಸವನ್ನು ಒಂದು ದಿನ ಮುಂಚಿತವಾಗಿಯೇ ಮುಕ್ತಾಯಗೊಳಿಸಿ ಭಾರತಕ್ಕೆ ವಾಪಸ್ಸಾಗಿದ್ದಾರೆ.

ಏಷ್ಯನ್ ಇನ್ಫ್ರಾಸ್ಟ್ರಕ್ಚರ್ ಇನ್ವೇಸ್ಟ್ ಮೆಂಟ್ ಬ್ಯಾಂಕ್ (ಎಐಐಬಿ) ನ ಅಧ್ಯಕ್ಷೀಯ ಮಂಡಳಿ ಸಭೆಯಲ್ಲಿ ಭಾಗವಹಿಸುವ ಉದ್ದೇಶದಿಂದ ಚೀನಾಗೆ ತೆರಳಿದ್ದ ಅರುಣ್ ಜೇಟ್ಲಿ, ಜು.24 ರಿಂದ 5 ದಿನಗಳ ಚೀನಾ ಪ್ರವಾಸ ಕೈಗೊಂಡಿದ್ದರು. 5 ದಿನಗಳ ಪ್ರವಾಸ ಕೈಗೊಂಡಿದ್ದರಾದರೂ ನಾಲ್ಕೇ ದಿನಕ್ಕೆ ಎಲ್ಲಾ ನಿಗದಿತ ಕಾರ್ಯಕ್ರಮಗಳೂ ಪೂರ್ಣಗೊಂಡಿರುವುದರಿಂದ ಅರುಣ್ ಜೇಟ್ಲಿ ಒಂದು ದಿನ ಮುಂಚಿತವಾಗಿ ಭಾರತಕ್ಕೆ ಆಗಮಿಸಿದ್ದಾರೆ ಎಂದು ತಿಳಿದುಬಂದಿದೆ.

ಪೂರ್ವ ನಿಗದಿಯಂತೆ ಅರುಣ್ ಜೇಟ್ಲಿ ಜೂ.26 ರಂದು ಚೀನಾದ ವಿತ್ತ ಸಚಿವರನ್ನು ಭೇಟಿ ಮಾಡಬೇಕಿತ್ತು, ಆದರೆ ಈ ಭೇಟಿ ಸೇರಿದಂತೆ ಇನ್ನು ಹಲವು ಪೂರ್ವ ನಿಗದಿತ ಕಾರ್ಯಕ್ರಮಗಳು ಜೂ.27 ರಂದೇ ಪೂರ್ಣಗೊಂಡಿದ್ದು ಜೂ.26 ರ ರಾತ್ರಿಯೇ ಅರುಣ್ ಜೇಟ್ಲಿ ಭಾರತಕ್ಕೆ ವಾಪಸ್ಸಾಗಿದ್ದಾರೆ.

ಅರುಣ್ ಜೇಟ್ಲಿ ಭಾರತಕ್ಕೆ ಒಂದು ದಿನ ಮುಂಚಿತವಾಗಿ ಬರುವುದಕ್ಕೆ ನಿಗದಿಯಾಗಿದ್ದ ಕಾರ್ಯಕ್ರಮಗಳು ಬೇಗ ಮುಕ್ತಾಯಗೊಂಡಿರುವುದೇ ಕಾರಣ ಎಂದು ಹೇಳಲಾಗುತ್ತಿದ್ದರೂ,ಸುಬ್ರಹ್ಮಣಿಯನ್ ಸ್ವಾಮಿ ತಮ್ಮ ವಿರುದ್ಧ ವಾಗ್ದಾಳಿ ನಡೆಸಿದ್ದರ ಬಗ್ಗೆ ಅಸಮಾಧಾನಗೊಂಡು ಚೀನಾ ಪ್ರವಾಸವನ್ನು ಜೇಟ್ಲಿ ಮೊಟಕುಗೊಳಿಸಿದ್ದಾರೆ ಎಂದು ವಿಶ್ಲೇಷಿಸಲಾಗುತ್ತಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ; ರಾಜ್ಯಸಭಾ ಸದಸ್ಯತ್ವ ನಿರಾಕರಣೆ

Siddaramaiah Press Meet: 'ಹೈಕಮಾಂಡ್ ಆದೇಶದ ಮೇಲೆ ರಾಜಿನಾಮೆ ನೀಡಿದ್ದೇನೆ': ಸಿದ್ದರಾಮಯ್ಯ ವಿದಾಯದ ಮಾತು

'ರಾಷ್ಟ್ರ ರಾಜಕಾರಣಕ್ಕೆ ಹೋಗಲ್ಲ, ರಾಜ್ಯದಲ್ಲೇ ಸಕ್ರಿಯನಾಗಿರುತ್ತೇನೆ': ಸಿದ್ದರಾಮಯ್ಯ

ರಾಜ್ಯದ ಮುಂದಿನ CM ಆಗಲು ಕಾಂಗ್ರೆಸ್ ಟ್ರಬಲ್ ಶೂಟರ್ ರೆಡಿ: ಯಾರಿದು ಡಿಕೆ ಶಿವಕುಮಾರ್? ರಾಜಕೀಯವಾಗಿ ಬೆಳೆದುಬಂದದ್ದು ಹೇಗೆ?

ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಸಿದ್ದರಾಮಯ್ಯ! ರಾಜ್ಯಪಾಲರ ವಿಶೇಷ ಕಾರ್ಯದರ್ಶಿಗೆ ಪತ್ರ ಹಸ್ತಾಂತರ

SCROLL FOR NEXT