ಶೀಲಾ ದಿಕ್ಷಿತ್ 
ದೇಶ

ಉ.ಪ್ರದೇಶದಲ್ಲಿ ಸಿಎಂ ಅಭ್ಯರ್ಥಿಯಾಗಲು ಶೀಲಾ ದಿಕ್ಷಿತ್ ನಕಾರ

ಮುಂಬರುವ 2017ರ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಮುಖ್ಯಮಂತ್ರಿಯಾಗಲು ಮಾಜಿ ದೆಹಲಿ ಮುಖ್ಯಮಂತ್ರಿ ಹಾಗೂ...

ನವದೆಹಲಿ: ಮುಂಬರುವ 2017ರ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಮುಖ್ಯಮಂತ್ರಿಯಾಗಲು ಮಾಜಿ ದೆಹಲಿ ಮುಖ್ಯಮಂತ್ರಿ ಹಾಗೂ ಹಿರಿಯ ಕಾಂಗ್ರೆಸ್ ನಾಯಕಿ ಶೀಲಾ ದಿಕ್ಷಿತ್ ಅವರು ನಿರಾಕರಿಸಿದ್ದಾರೆ.
ಮಾಧ್ಯಮಗಳ ವರದಿಯ ಪ್ರಕಾರ, ಮುಂದಿನ ವರ್ಷ ನಡೆಯುವ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆ ಪ್ರಚಾರದಲ್ಲಿ ಪ್ರಮುಖ ಬ್ರಾಹ್ಮಣ ಸಮುದಾಯಕ್ಕೆ ಸೇರಿದ ಶೀಲಾ ದಿಕ್ಷಿತ್ ಅವರು ಪ್ರಮುಖ ಪಾತ್ರ ವಹಿಸಲಿದ್ದು, ಅವರನ್ನು ಸಿಎಂ ಅಭ್ಯರ್ಥಿಯಾಗಿ ಘೋಷಿಸುವಂತೆ ಉತ್ತರ ಪ್ರದೇಶ ಚುನಾವಣೆ ತಂತ್ರಗಾರ ಪ್ರಶಾಂತ್ ಕಿಶೋರ್ ಅವರು ಹೈಕಮಾಂಡ್ ಗೆ ಮನವಿ ಮಾಡಿದ್ದರು. ಇದನ್ನು ಪುರಷ್ಕರಿಸಿದ ಕಾಂಗ್ರೆಸ್ ಹೈಕಮಾಂಡ್ ಸಿಎಂ ಅಭ್ಯರ್ಥಿಯಾಗುವಂತೆ ಶೀಲಾ ದಿಕ್ಷಿತ್ ಅವರಿಗೆ ಆಹ್ವಾನ ನೀಡಿತ್ತೆ. ಆದರೆ ಹೈಕಮಾಂಡ್ ಆಹ್ವಾನವನ್ನು ಅವರು ತಿರಸ್ಕರಿಸಿದ್ದಾರೆ ಎನ್ನಲಾಗಿದೆ.
ಮಂದಿರ-ಮಂಡಲ್ ರಾಜಕೀಯದಿಂದಾಗಿ ಇತ್ತೀಚಿಗ ಬ್ರಾಹ್ಮಣರ ಮತಗಳು ಬಿಜೆಪಿಗೆ ಶಿಫ್ಟ್ ಆಗಿದ್ದು, ಆ ಮತಗಳನ್ನು ಸೆಳೆಯಲು ಶೀಲಾ ದಿಕ್ಷಿತ್ ಬೇಕು ಎಂದು ಪ್ರಶಾಂತ್ ಕಿಶೋರ್ ಸಲಹೆ ನೀಡಿದ್ದರು. ಆದರೆ ಇತ್ತೀಚಿಗೆ ಸುಮಾರು 600 ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಪುತ್ರಿ ಪ್ರಿಯಾಂಕಾ ಗಾಂಧಿ ಅವರನ್ನು ಸಕ್ರಿಯೆ ರಾಜಕೀಯಕ್ಕೆ ಕರೆ ತನ್ನಿ ಎಂದು ಪ್ರಶಾಂತ್ ಕಿಶೋರ್ ಗೆ ಒತ್ತಾಯಿಸಿದ್ದಾರೆ. 
78 ವರ್ಷದ ಶೀಲಾ ದಿಕ್ಷಿತ್ ಅವರು 1999ರಿಂದ 2014ರವರೆಗೆ ಸತತ ಮೂರು ಬಾರಿ ದೆಹಲಿ ಮುಖ್ಯಮಂತ್ರಿಯಾಗಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT