ಪಾಕಿಸ್ತಾನ ಹೈ ಕಮಿಷನರ್ ಅಬ್ದುಲ್ ಬಸಿತ್ (ಸಂಗ್ರಹ ಚಿತ್ರ) 
ದೇಶ

ಪಾಕ್'ಗೆ ನೀಡಿದ್ದ ಇಫ್ತಾರ್ ಕೂಟ ಆಹ್ವಾನ ಹಿಂಪಡೆದ ರಾಷ್ಟ್ರೀಯ ಮುಸ್ಲಿಂ ಮಂಚ್

ರಮ್ಜಾನ್ ಪ್ರಯುಕ್ತ ಆಯೋಜಿಸಲಾಗಿರುವ ಇಫ್ತಾರ್ ಕೂಟಕ್ಕೆ ಪಾಕಿಸ್ತಾನಕ್ಕೆ ನೀಡಲಾಗಿದ್ದ ಆಹ್ವಾನವನ್ನು ರಾಷ್ಟ್ರೀಯ ಮುಸ್ಲಿಂ ಮಂಚ್ ಮಂಗಳವಾರ ಹಿಂಪಡೆದಿದೆ...

ನವದೆಹಲಿ: ರಮ್ಜಾನ್ ಪ್ರಯುಕ್ತ ಆಯೋಜಿಸಲಾಗಿರುವ ಇಫ್ತಾರ್ ಕೂಟಕ್ಕೆ ಪಾಕಿಸ್ತಾನಕ್ಕೆ ನೀಡಲಾಗಿದ್ದ ಆಹ್ವಾನವನ್ನು ರಾಷ್ಟ್ರೀಯ ಮುಸ್ಲಿಂ ಮಂಚ್ ಮಂಗಳವಾರ ಹಿಂಪಡೆದಿದೆ.

ರಮ್ಜಾನ್ ಹಬ್ಬದ ಪ್ರಯುಕ್ತ ಜುಲೈ 2 ರಂದು ಸಂಸದೀಯ ಭವನದಲ್ಲಿ ಆರ್ ಎಸ್ಎಸ್ ಅಂಗಸಂಸ್ಥೆ ಮುಸ್ಲಿಂ ರಾಷ್ಟ್ರೀಯ ಮಂಚ್ ಇಫ್ತಾರ್ ಕೂಟವನ್ನು ಆಯೋಜಿಸಿತ್ತು. ಇದಕ್ಕೆ ಪಾಕಿಸ್ತಾನ ಸೇರಿ 140 ರಾಷ್ಟ್ರಗಳ ರಾಯಭಾರಿಗಳನ್ನು ಆಹ್ವಾನಿಸಿತ್ತು. ಇದರಂತೆ ಪಾಕ್ ಹೈ ಕಮಿಷನರ್ ಅಬ್ದುಲ್ ಬಸಿತ್ ಅವರಿಗೂ ಆಹ್ವಾನ ನೀಡಿತ್ತು.

ಆದರೆ, ಪಾಂಪೋರದಲ್ಲಿ ನಡೆದ ದಾಳಿ ಹಿನ್ನೆಲೆಯಲ್ಲಿ ಅಬ್ದುಲ್ ಬಸಿತ್ ನೀಡಿದ್ದ ಹೇಳಿಕೆ ವಿರುದ್ಧ ಕಿಡಿಕಾರಿರುವ ಮುಸ್ಲಿಂ ರಾಷ್ಟ್ರೀಯ ಮಂಚ್ ಇದೀಗ ಇಫ್ತಾರ್ ಕೂಟ ಸಂಬಂಧ ಅಬ್ದುಲ್ ಬಸಿತ್ ಗೆ ನೀಡಿದ್ದ ಆಹ್ವಾನವನ್ನು ಹಿಂಪಡೆದಿದೆ ಎನ್ನಲಾಗಿದೆ.

ಕಾಶ್ಮೀರದ ಪುಲ್ವಾಮ ಜಿಲ್ಲೆಯ ಪಾಂಪೋರ ಬಳಿ ಸಿಆರ್ ಪಿಎಫ್ ಯೋಧರ ಮೇಲೆ ಉಗ್ರರ ಗುಂಪೊಂದು ದಾಳಿ ಮಾಡಿತ್ತು. ದಾಳಿಯಲ್ಲಿ 8 ಸಿಆರ್ ಪಿಎಫ್ ಯೋಧರು ಸಾವನ್ನಪ್ಪಿದ್ದರು. ದಾಳಿ ಹಿಂದೆ ಪಾಕಿಸ್ತಾನದ ಲಷ್ಕರ್-ಇ-ತೊಯ್ಬಾ ಉಗ್ರ ಸಂಘಟನೆ ಇದೆ ಎಂದು ಹೇಳಲಾಗುತ್ತಿತ್ತು.

ದಾಳಿ ಸಂಬಂಧ ಹೇಳಿಕೆ ನೀಡಿದ್ದ ಪಾಕಿಸ್ತಾನ ಹೈ ಕಮಿಷನರ್ ಅಬ್ದುಲ್ ಬಸಿತ್ ಅವರು, ಇದು ರಮ್ಜಾನ್ ತಿಂಗಳು. ಪ್ರಸ್ತುತ ಇಫ್ತಾರ್ ಪಾರ್ಟಿ ಬಗ್ಗೆ ಗಮನ ಹರಿಸೋಣ. ಜಮ್ಮು ಮತ್ತು ಕಾಶ್ಮೀರ ವಿಚಾರ ಭಾರತ ಮತ್ತು ಪಾಕಿಸ್ತಾನಕ್ಕೆ ಸಂಬಂಧಿಸಿದ್ದು. ಈ ವಿಚಾರ ಬಗೆಹರಿಯುವ ಅಗತ್ಯವಿದೆ. ಕುಳಿತು ಚರ್ಚಿಸಿದರೆ ಸಮಸ್ಯೆಗೆ ಪರಿಹಾರವನ್ನು ಕಂಡುಕೊಳ್ಳಬಹುದು. ಇಫ್ತಾರ್ ಪಾರ್ಟಿ ಆಯೋಜಿಸಿ ಸಂತಸದಲ್ಲಿರೋಣ. ಮಾಧ್ಯಮಗಳು ಇಫ್ತಾರ್ ಪಾರ್ಟಿ ಬಗ್ಗೆ ಹೆಚ್ಚು ಗಮನ ಹರಿಸಿದರೆ ಒಳ್ಳೆಯದು ಎಂದು ಹೇಳಿದ್ದರು.

ಆರ್ ಎಸ್ಎಸ್ ಅಂಗಸಂಸ್ಥೆ ಮುಸ್ಲಿಂ ರಾಷ್ಟ್ರೀಯ ಮಂಚ್ ಆಯೋಜಿಸಿರುವ ಇಫ್ತಾರ್ ಕೂಟದ ವಿರುದ್ಧ ಕಿಡಿಕಾರಿದ್ದ ಶಿವಸೇನೆಯು, ಆರ್ ಎಸ್ ಎಸ್  ತನ್ನ ಇತಿಹಾಸ ಮತ್ತು ಪ್ರಮುಖ ಧ್ಯೇಯಗಳನ್ನು ಮರೆತು ಇದೀಗ ಇಫ್ತಾರ್​ ಕೂಟ ಏರ್ಪಡಿಸಲು ಮುಂದಾಗಿರುವುದು ದುರಂತದ ಸಂಗತಿಯಾಗಿದೆ. ರಾಷ್ಟ್ರೀಯ ಸ್ವಯಂ ಸೇವಕ ಸಂಘ ಮುಸ್ಲಿಮರ ಓಲೈಕೆಗೆ ಮುಂದಾಗಿದೆ. ಹಿಂದೂ ರಾಷ್ಟ್ರದ ತತ್ವ ಸಿದ್ಧಾಂತಗಳ ಮೇಲೆ ಸ್ಥಾಪಿತವಾಗಿರುವ ಆರ್ ಎಸ್ ಎಸ್ ಮುಸ್ಲಿಮರಿಗೆ ಇಫ್ತಾರ್ ಕೂಟ ಏರ್ಪಡಿಸಲು ಮುಂದಾಗಿರುವುದು ನಿಜಕ್ಕೂ ಆಶ್ಟರ್ಯವನ್ನುಂಟು ಮಾಡಿದೆ ಎಂದು ಹೇಳಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಪಕ್ಷದ ಹಿತಕ್ಕಾಗಿ ನಾಗೇಂದ್ರ ಯಾವುದೇ ತ್ಯಾಗಕ್ಕೂ ಸಿದ್ಧ, ಆದ್ರೆ...: ಹೈಕಮಾಂಡ್ ಭೇಟಿ ಬಳಿಕ CM ಡಿಕೆ ಶಿವಕುಮಾರ್

Nepal Floods: ನೇಪಾಳ ಭೀಕರ ಪ್ರವಾಹಕ್ಕೆ ಚೀನಾದ ನಿರ್ಮಾಣ ಕಾರ್ಯವೇ ಕಾರಣ?

‘ನೇಪಾಳಿಗರೇ, ನೀವು ಒಂಟಿಯಲ್ಲ, ನಾನು ನಿಮ್ಮೊಂದಿಗೆ ನಿಲ್ಲುತ್ತೇನೆ’: ಪ್ರವಾಹ ಪೀಡಿತ ಸಂತ್ರಸ್ತರಿಗೆ ನೆರವಿನ ಹಸ್ತ ಚಾಚಿದ ಬಾಲಿವುಡ್ ನಟ ಸೋನು ಸೂದ್!

'ಸಿಂಹ ಸುಮ್ಮನೆ ಕುಳಿತಿದೆ ಅಂದ್ರೆ ಸುಸ್ತಾಗಿದೆ ಅಂತಲ್ಲ, ಮುಂದಿನ ಬೇಟೆಗೆ ರೆಡಿ ಆಗ್ತಿದೆ ಎಂದರ್ಥ': ಕಿಚ್ಚ ಸುದೀಪ್ ದಿಢೀರ್ ಪೋಸ್ಟ್; ಇಲ್ಲಿದೆ ಕಾರಣ...

ಕಾನ್ಪುರದಲ್ಲಿ ತರಬೇತಿ ವಿಮಾನ ಪತನ: ಕರ್ನಾಟಕದ ಪೈಲಟ್‌ ಅಭಿಷೇಕ್​ ಸೇರಿ ಇಬ್ಬರು ಸಾವು; Video