ಕೊಲೆಯಾದ ಸ್ವಾತಿ 
ದೇಶ

ವೈಯಕ್ತಿಕ ದ್ವೇಷದಿಂದ ಟೆಕ್ಕಿ ಸ್ವಾತಿ ಕೊಲೆ?

ಇನ್‌ಪೋಸಿಸ್ ಉದ್ಯೋಗಿ ಸ್ವಾತಿ ಕೊಲೆಗೆ ವೈಯಕ್ತಿಕ ದ್ವೇಷ ಕಾರಣವಾಗಿರಬಹುದು ಎಂದು ಚೆನ್ನೈ ಪೊಲೀಸರು ಅಭಿಪ್ರಾಯ ಪಟ್ಟಿದ್ದಾರೆ...

ಚೆನ್ನೈ: ಇನ್‌ಪೋಸಿಸ್ ಉದ್ಯೋಗಿ ಸ್ವಾತಿ ಕೊಲೆಗೆ ವೈಯಕ್ತಿಕ ದ್ವೇಷ ಕಾರಣವಾಗಿರಬಹುದು ಎಂದು ಚೆನ್ನೈ ಪೊಲೀಸರು ಅಭಿಪ್ರಾಯ ಪಟ್ಟಿದ್ದಾರೆ.

ನುಂಗಬಾಕ್ಕಂ ರೈಲ್ವೆ ನಿಲ್ದಾಣದಲ್ಲಿ ಹಾಡಹಗಲೇ ನಡೆದಿದ್ದ ಸ್ವಾತಿ ಕೊಲೆ  ಪ್ರಕರಣದ ತನಿಖೆ ನಡೆಸುತ್ತಿರುವ ಪೊಲೀಸರು ಅಪರಿಚಿತನ ರೇಖಾ ಚಿತ್ರ ಬಿಡಿಸಲು ಸಿದ್ಧತೆ ನಡೆಸಿದ್ದಾರೆ.

ಸ್ವಾತಿಯನ್ನು ಹಿಂಬಾಲಿಸುತ್ತಿದ್ದ ವ್ಯಕ್ತಿಯ ರೇಖಾಚಿತ್ರ ಬಿಡಿಸಲು ಆಕೆ ಮೂವರು ಸ್ನೇಹಿತರ ಸಹಾಯ ಪಡೆದುಕೊಂಡಿದ್ದಾರೆ. ಜೊತೆಗೆ ಪರ್ನೂರ್ ನಗರದ ಮಹೀಂದ್ರಾ ವರ್ಲ್ಡ್ ಬಳಿ ಅಳವಡಿಸಿರುವ ಸಿಸಿಟಿವಿ ದೃಶ್ಯಾವಳಿಗಳನ್ನು ಪೊಲೀಸರು ಪಡೆದುಕೊಂಡಿದ್ದಾರೆ. ಕಳೆದ ಎರಡು ವಾರಗಳಿಂದ ಅಪರಿಚಿತ ವ್ಯಕ್ತಿ ಸ್ವಾತಿಯನ್ನು ಹಿಂಬಾಲಿಸುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಸಂಬಂಧ ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆ ಸಿಎಂ ಜಯಲಲಿತಾ ಪರಿಶೀಲನಾ ಸಬೆ ನಡೆಸಿದ್ದು, ರಾಜ್ಯದ ಕಾನೂನು ಸುವ್ಯವಸ್ಥೆ ಬಗ್ಗೆ ಮಾಹಿತಿ ಪಡೆದುಕೊಂಡಿದ್ದಾರೆ. ನಗರ ಪೊಲೀಸ್ ಆಯುಕ್ತ ಟಿ.ಕೆ ರಾಜೇಂದ್ರಮ್ ಕೊಲೆ ನಡೆದ ರೈಲ್ವೆ ನಿಲ್ದಾಣಕ್ಕೆ ಭೇಟಿ ನೀಡಿ ಪ್ರತ್ಯಕ್ಷ ದರ್ಶಿಗಳ ವಿವರಣೆ ಪಡೆಯುವಂತೆ ತನಿಖಾಧಿಕಾರಿಗಳಿಗೆ ತಿಳಿಸಿದ್ದಾರೆ.

ಪ್ರಕರಣವನ್ನು ಎಲ್ಲಾ ಆಯಾಮಗಳಿಂದ ಪರಿಶೀಲನೆ ನಡೆಸುತ್ತಿದ್ದು, ವೈಯಕ್ತಿಕ ದ್ವೇಷಕ್ಕಾಗಿ ಕೊಲೆ ನಡೆದಿರಬಹುದು ಎಂದು ಪೊಲೀಸರು ಅಭಿಪ್ರಾಯ ಪಟ್ಟಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT