ಭೂಗತ ಪಾತಕಿ ದಾವೂದ್ ಇಬ್ರಾಹಿಂ ಮತ್ತು ಹಿಂದೂ ಮಹಾಸಭಾದ ಮುಖ್ಯಸ್ಥ ಸ್ವಾಮಿ ಚಕ್ರಪಾಣಿ 
ದೇಶ

ದಾವೂದ್ ನಿಂದ ಜೀವ ಬೆದರಿಕೆ: ಸ್ವಾಮಿ ಚಕ್ರಪಾಣಿಗೆ 'ಝಡ್‌' ಶ್ರೇಣಿ ಭದ್ರತೆ

ಭೂಗತ ಪಾತಕಿ ದಾವೂದ್ ಇಬ್ರಾಹಿಂ ಕಾರಿಗೆ ಬೆಂಕಿ ಹಚ್ಚಿ ಜೀವ ಬೆದರಿಕೆ ಪಡೆದಿದ್ದ ಹಿಂದೂ ಮಹಾಸಭಾದ ಮುಖ್ಯಸ್ಥ ಸ್ವಾಮಿ ಚಕ್ರಪಾಣಿ ಅವರುಗೆ 'ಝಡ್‌' ಶ್ರೇಣಿ ಭದ್ರತೆ...

ನವದೆಹಲಿ: ಭೂಗತ ಪಾತಕಿ ದಾವೂದ್ ಇಬ್ರಾಹಿಂ ಕಾರಿಗೆ ಬೆಂಕಿ ಹಚ್ಚಿ ಜೀವ ಬೆದರಿಕೆ ಪಡೆದಿದ್ದ ಹಿಂದೂ ಮಹಾಸಭಾದ ಮುಖ್ಯಸ್ಥ ಸ್ವಾಮಿ ಚಕ್ರಪಾಣಿ ಅವರುಗೆ 'ಝಡ್‌' ಶ್ರೇಣಿ ಭದ್ರತೆ ನೀಡಲಾಗಿದೆ ಎಂದು ತಿಳಿದುಬಂದಿದೆ.

ಮುಂಬೈನಲ್ಲಿ ದಾವೂದ್ ಕಾರನ್ನು ಅಖಿಲ ಭಾರತ ಹಿಂದೂ ಮಹಾಸಭಾದ ಮುಖ್ಯಸ್ಥರಾದ ಸ್ವಾಮಿ ಚಕ್ರಪಾಣಿ ಅವರು ಹರಾಜಿನಲ್ಲಿ ಖರೀದಿ ಮಾಡಿದ್ದರು. ಅಲ್ಲದೆ, ದಾವೂದ್ ಹುಟ್ಟುಹಬ್ಬದ ದಿನದಂದು ಕಾರಿಗೆ ಬೆಂಕಿ ಹಚ್ಚಿದ್ದರು.

ಘಟನೆ ನಂತರ ಜೀವ ಬೆದರಿಕೆ ಬರುತ್ತಿರುವುದಾಗಿ ಹೇಳಿಕೊಂಡಿದ್ದ ಸ್ವಾಮಿ ಅವರು ಈ ಬಗ್ಗೆ ಕೇಂದ್ರ ಸರ್ಕಾರಕ್ಕೆ ಪತ್ರವೊಂದನ್ನು ಬರೆದಿದ್ದರು. ಇದರಂತೆ ತನಿಖೆ ಕೈಗೊಂಡಿದ್ದ ಪೊಲೀಸರು ನಾಲ್ವರನ್ನು ಬಂಧನಕ್ಕೊಳಪಡಿಸಿದ್ದರು. ವಿಚಾರಣೆ ವೇಳೆ ಬಂಧಿತರು ಸ್ವಾಮಿ ಚಕ್ರಪಾಣಿಯವರ ಮೇಲೆ ದಾಳಿ ಮಾಡಲು ಸಂಚು ರೂಪಿಸಿರುವುದು ಬಹಿರಂಗಗೊಂಡಿದೆ. ಈ ಹಿನ್ನೆಲೆಯಲ್ಲಿ ಸ್ವಾಮಿ ಚಕ್ರಪಾಣಿಗೆ ಸರ್ಕಾರ ಇದೀಗ 'ಝಡ್‌' ಶ್ರೇಣಿ ಭದ್ರತೆ ನೀಡಿರುವುದಾಗಿ ತಿಳಿದುಬಂದಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT