ಬೆಂಕಿ ಹತ್ತಿಕೊಂಡ ಮೆಡಿಕಲ್ ಶಾಪ್ 
ದೇಶ

ಮುಂಬೈ: ಔಷಧಿ ಅಂಗಡಿಯಲ್ಲಿ ಬೆಂಕಿ; ಸಾವಿನ ಸಂಖ್ಯೆ 9ಕ್ಕೆ ಏರಿಕೆ

ಉಪನಗರ ಅಂದೇರಿ ಪ್ರದೇಶದ ಚವಲ್ ಎಂಬಲ್ಲಿ ಔಷಧಿ ಅಂಗಡಿಯೊಂದರಲ್ಲಿ ಗುರುವಾರ ಬೆಳಗ್ಗೆ ಬೆಂಕಿ ಹತ್ತಿ ಉರಿದು...

ಮುಂಬೈ: ಉಪನಗರ ಅಂದೇರಿ ಪ್ರದೇಶದ ಚವಲ್ ಎಂಬಲ್ಲಿ ಮೆಡಿಕಲ್ ಸ್ಟೋರ್ ವೊಂದರಲ್ಲಿ ಗುರುವಾರ ಬೆಳಗ್ಗೆ ಬೆಂಕಿ ಹತ್ತಿ ಉರಿದು ಸಾವನ್ನಪ್ಪಿದವರ ಸಂಖ್ಯೆ 9ಕ್ಕೇರಿದೆ. ಅವರಲ್ಲಿ 3 ತಿಂಗಳ ಮಗು ಸೇರಿದಂತೆ ಐವರು ಮಕ್ಕಳು ಸೇರಿದ್ದಾರೆ.

 ಬೆಳಗ್ಗೆ 5.15ರ ಸುಮಾರಿಗೆ ಅಂದೇರಿ ಉಪನಗರದ ಜುಹಿ ಗಲ್ಲಿಯಲ್ಲಿರುವ ವಾಫಾ ಮೆಡಿಕಲ್ ಶಾಪ್ ವೊಂದರಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ ಹತ್ತಿ ಉರಿಯತೊಡಗಿತು. ಆಗ ಕಟ್ಟಡದೊಳಗೆ ನಿದ್ದೆ ಮಾಡುತ್ತಿದ್ದ 8 ಮಂದಿ ಸಾವನ್ನಪ್ಪಿದ್ದು, ಒಬ್ಬರಿಗೆ ಗಾಯವಾಗಿದೆ ಎಂದು ಮುಂಬೈ ಪೊಲೀಸ್ ವಕ್ತಾರ ಅಶೋಕ್ ದುದೆ ತಿಳಿಸಿದ್ದಾರೆ.

ಆರಂಭದಲ್ಲಿ ಎಂಟು ಮಂದಿ ಸಾವಿಗೀಡಾಗಿದ್ದರು, ನಂತರ ತೀವ್ರವಾಗಿ ಸುಟ್ಟುಹೋಗಿದ್ದ ಮಹಿಳೆ ಆಸ್ಪತ್ರೆಯಲ್ಲಿ ಅಸುನೀಗಿದರು. ಘಟನೆಯಲ್ಲಿ ಓರ್ವ ಅಗ್ನಿಶಾಮಕ ಸಿಬ್ಬಂದಿಗೂ ಗಾಯಗಳಾಗಿವೆ.

ಘಟನೆಯಲ್ಲಿ ಸಾವನ್ನಪ್ಪಿದವರ ಕುಟುಂಬದವರು ಕಟ್ಟಡದ ಮೊದಲ ಮತ್ತು ಎರಡನೇ ಮಹಡಿಯಲ್ಲಿ ವಾಸಿಸುತ್ತಿದ್ದಾರೆ.

ಮಾಹಿತಿ ಬಂದ ಕೂಡಲೇ ಅಗ್ನಿಶಾಮಕ ತಂಡ ಸ್ಥಳಕ್ಕೆ ಧಾವಿಸಿತು. ಔಷಧಾಲಯದಲ್ಲಿ ಇಟ್ಟಿದ್ದ ಸಿಲೆಂಡರ್ ಸೋರಿಕೆಯಾಗಿ ಬೆಂಕಿ ಸ್ಪೋಟವುಂಟಾಗಿರಬಹುದು ಎಂದು ಅಗ್ನಿಶಾಮಕ ಅಧಿಕಾರಿಗಳು ತಿಳಿಸಿದ್ದಾರೆ.

ಕಟ್ಟಡದ ನೆಲ ಮಹಡಿಯಲ್ಲಿರುವ ಮೆಡಿಕಲ್ ಶಾಪ್ ನಲ್ಲಿರುವ ವಿದ್ಯುತ್ ಅನುಸ್ಥಾಪನೆಗೆ ಮೊದಲು ಬೆಂಕಿ ಹತ್ತಿಕೊಂಡು ನಂತರ ಮೊದಲ ಮತ್ತು ಎರಡನೇ ಮಹಡಿಗೆ ಪಸರಿಸಿತು. ಕಟ್ಟಡದಲ್ಲಿ ಸುಮಾರು 17ರಿಂದ 18 ಮಂದಿ ವಾಸಿಸುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ