ಬೆಂಕಿ ಹತ್ತಿಕೊಂಡ ಮೆಡಿಕಲ್ ಶಾಪ್ 
ದೇಶ

ಮುಂಬೈ: ಔಷಧಿ ಅಂಗಡಿಯಲ್ಲಿ ಬೆಂಕಿ; ಸಾವಿನ ಸಂಖ್ಯೆ 9ಕ್ಕೆ ಏರಿಕೆ

ಉಪನಗರ ಅಂದೇರಿ ಪ್ರದೇಶದ ಚವಲ್ ಎಂಬಲ್ಲಿ ಔಷಧಿ ಅಂಗಡಿಯೊಂದರಲ್ಲಿ ಗುರುವಾರ ಬೆಳಗ್ಗೆ ಬೆಂಕಿ ಹತ್ತಿ ಉರಿದು...

ಮುಂಬೈ: ಉಪನಗರ ಅಂದೇರಿ ಪ್ರದೇಶದ ಚವಲ್ ಎಂಬಲ್ಲಿ ಮೆಡಿಕಲ್ ಸ್ಟೋರ್ ವೊಂದರಲ್ಲಿ ಗುರುವಾರ ಬೆಳಗ್ಗೆ ಬೆಂಕಿ ಹತ್ತಿ ಉರಿದು ಸಾವನ್ನಪ್ಪಿದವರ ಸಂಖ್ಯೆ 9ಕ್ಕೇರಿದೆ. ಅವರಲ್ಲಿ 3 ತಿಂಗಳ ಮಗು ಸೇರಿದಂತೆ ಐವರು ಮಕ್ಕಳು ಸೇರಿದ್ದಾರೆ.

 ಬೆಳಗ್ಗೆ 5.15ರ ಸುಮಾರಿಗೆ ಅಂದೇರಿ ಉಪನಗರದ ಜುಹಿ ಗಲ್ಲಿಯಲ್ಲಿರುವ ವಾಫಾ ಮೆಡಿಕಲ್ ಶಾಪ್ ವೊಂದರಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ ಹತ್ತಿ ಉರಿಯತೊಡಗಿತು. ಆಗ ಕಟ್ಟಡದೊಳಗೆ ನಿದ್ದೆ ಮಾಡುತ್ತಿದ್ದ 8 ಮಂದಿ ಸಾವನ್ನಪ್ಪಿದ್ದು, ಒಬ್ಬರಿಗೆ ಗಾಯವಾಗಿದೆ ಎಂದು ಮುಂಬೈ ಪೊಲೀಸ್ ವಕ್ತಾರ ಅಶೋಕ್ ದುದೆ ತಿಳಿಸಿದ್ದಾರೆ.

ಆರಂಭದಲ್ಲಿ ಎಂಟು ಮಂದಿ ಸಾವಿಗೀಡಾಗಿದ್ದರು, ನಂತರ ತೀವ್ರವಾಗಿ ಸುಟ್ಟುಹೋಗಿದ್ದ ಮಹಿಳೆ ಆಸ್ಪತ್ರೆಯಲ್ಲಿ ಅಸುನೀಗಿದರು. ಘಟನೆಯಲ್ಲಿ ಓರ್ವ ಅಗ್ನಿಶಾಮಕ ಸಿಬ್ಬಂದಿಗೂ ಗಾಯಗಳಾಗಿವೆ.

ಘಟನೆಯಲ್ಲಿ ಸಾವನ್ನಪ್ಪಿದವರ ಕುಟುಂಬದವರು ಕಟ್ಟಡದ ಮೊದಲ ಮತ್ತು ಎರಡನೇ ಮಹಡಿಯಲ್ಲಿ ವಾಸಿಸುತ್ತಿದ್ದಾರೆ.

ಮಾಹಿತಿ ಬಂದ ಕೂಡಲೇ ಅಗ್ನಿಶಾಮಕ ತಂಡ ಸ್ಥಳಕ್ಕೆ ಧಾವಿಸಿತು. ಔಷಧಾಲಯದಲ್ಲಿ ಇಟ್ಟಿದ್ದ ಸಿಲೆಂಡರ್ ಸೋರಿಕೆಯಾಗಿ ಬೆಂಕಿ ಸ್ಪೋಟವುಂಟಾಗಿರಬಹುದು ಎಂದು ಅಗ್ನಿಶಾಮಕ ಅಧಿಕಾರಿಗಳು ತಿಳಿಸಿದ್ದಾರೆ.

ಕಟ್ಟಡದ ನೆಲ ಮಹಡಿಯಲ್ಲಿರುವ ಮೆಡಿಕಲ್ ಶಾಪ್ ನಲ್ಲಿರುವ ವಿದ್ಯುತ್ ಅನುಸ್ಥಾಪನೆಗೆ ಮೊದಲು ಬೆಂಕಿ ಹತ್ತಿಕೊಂಡು ನಂತರ ಮೊದಲ ಮತ್ತು ಎರಡನೇ ಮಹಡಿಗೆ ಪಸರಿಸಿತು. ಕಟ್ಟಡದಲ್ಲಿ ಸುಮಾರು 17ರಿಂದ 18 ಮಂದಿ ವಾಸಿಸುತ್ತಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT