ಸರಿತಾ ಎಸ್ ನಾಯರ್ 
ದೇಶ

ಕೇರಳ ವಿಧಾನಸಭೆಯಲ್ಲಿ ಸರಿತಾರನ್ನು ವೇಶ್ಯೆ ಎಂದು ಜರಿದ ಶಾಸಕ

ಶಾಸಕರೊಬ್ಬರು ವಿಧಾನಸಭೆ ಅಧಿವೇಶನದಲ್ಲಿ ಮಹಿಳೆಯೊಬ್ಬರನ್ನು ವೇಶ್ಯೆ ಎಂದು ಜರಿದಿದ್ದು ಕೇರಳ ವಿಧಾನಸಭೆ ಇತಿಹಾಸದ...

ತಿರುವನಂತಪುರಂ: ಶಾಸಕರೊಬ್ಬರು ವಿಧಾನಸಭೆ ಅಧಿವೇಶನದಲ್ಲಿ ಮಹಿಳೆಯೊಬ್ಬರನ್ನು ವೇಶ್ಯೆ ಎಂದು ಜರಿದಿದ್ದು ಕೇರಳ ವಿಧಾನಸಭೆ ಇತಿಹಾಸದಲ್ಲೇ ಇದೇ ಮೊದಲು ಅಂತ ಕಾಣುತ್ತೆ. 
ಇಂದು ವಿಧಾನಸಭೆಯಲ್ಲಿ ರಾಜ್ಯಪಾಲರ ಭಾಷಣದ ಮೇಲಿನ ವಂದನಾ ನಿರ್ಣಯದ ಕುರಿತ ಚರ್ಚೆಯ ವೇಳೆ ಸೋಲಾರ ಹಗರಣವನ್ನು ಪ್ರಸ್ತಾಪಿಸಿದ ಸಿಪಿಎಂ ಸ್ವತಂತ್ರ ಶಾಸಕ ಪಿ ವಿ ಅನ್ವರ್ ಅವರು, ಹಗರಣದ ಪ್ರಮುಖ ಆರೋಪಿ ಸರಿತಾ ಎಸ್ ನಾಯರ್ ಅವರು ಒಬ್ಬ ವೇಶ್ಯೆ ಎಂದು ಜರಿದರು.
ಈ ವೇಳೆ ಸದನದಲ್ಲಿ ಹಲವು ಸಚಿವರು, ಮಾಜಿ ಸಚಿವರು ಹಾಗೂ ಪ್ರತಿಪಕ್ಷದ ನಾಯಕ ಸೇರಿದಂತೆ ಹಲವು ಹಿರಿಯ ಸದಸ್ಯ ಉಪಸ್ಥಿತಿರಿದ್ದರು. ಆದರೆ ಅನ್ವರ್ ಅವರು ಓರ್ವ ಮಹಿಳೆ ವಿರುದ್ಧ ಅವಹೇಳನಾಕಾರಿ ಭಾಷೆ ಬಳಸಿದ್ದಕ್ಕೆ ಯಾರೂ ಆಕ್ಷೇಪ ವ್ಯಕ್ತಪಡಿಸಲಿಲ್ಲ.
ಮಾಜಿ ಮುಖ್ಯಮಂತ್ರಿ ಉಮ್ಮನ್ ಚಾಂಡಿ ಕೇರಳದ ರಾಜಕೀಯ ವಲಯದಲ್ಲಿ ತೀವ್ರ ಸಂಚಲನ ಮೂಡಿಸಿದ್ದ ಸೋಲಾರ್ ಹಗರಣದ ಆರೋಪಿ ಸರಿತಾ ಅವರೊಂದಿಗೆ ಅನೈತಿಕ ಸಂಬಂಧ ಹೊಂದಿದ್ದಾರೆ ಎಂಬ ಆರೋಪ ಸಹ ಕೇಳಿಬಂದಿತ್ತು. ಈ ಆರೋಪಗಳನ್ನು ಸರಿತಾ ಸ್ಪಷ್ಟವಾಗಿ ತಳ್ಳಿಹಾಕಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT