ಪ್ರಧಾನಿ ನರೇಂದ್ರ ಮೋದಿ ಮತ್ತು ತೇಜಸ್ ಯುದ್ಧ ವಿಮಾನ (ಸಂಗ್ರಹ ಚಿತ್ರ) 
ದೇಶ

ವಾಯು ಸೇನೆಗೆ ತೇಜಸ್ ಸೇರ್ಪಡೆ; ಹೆಎಚ್ ಎಲ್ ಸಾಧನೆ ಶ್ಲಾಘಿಸಿದ ಪ್ರಧಾನಿ ಮೋದಿ

ಭಾರತೀಯ ವಾಯು ಸೇನೆಯ ದಶಕಗಳ ಕನಸಾಗಿದ್ದ ಸ್ವದೇಶಿ ನಿರ್ಮಿತ ವಿಮಾನದ ಕನಸನ್ನು ನನಸು ಮಾಡಿದ ಹೆಎಚ್ ಎಲ್ ಮತ್ತು ಎಡಿಎ ಅಧಿಕಾರಿಗಳ ಸಾಧನೆಯನ್ನು ಪ್ರಧಾನಿ ನರೇಂದ್ರ ಮೋದಿ ಶ್ಲಾಘಿಸಿದ್ದಾರೆ.

ನವದೆಹಲಿ: ಭಾರತೀಯ ವಾಯು ಸೇನೆಯ ದಶಕಗಳ ಕನಸಾಗಿದ್ದ ಸ್ವದೇಶಿ ನಿರ್ಮಿತ ವಿಮಾನದ ಕನಸನ್ನು ನನಸು ಮಾಡಿದ ಹೆಎಚ್ ಎಲ್ ಮತ್ತು ಎಡಿಎ ಅಧಿಕಾರಿಗಳ ಸಾಧನೆಯನ್ನು  ಪ್ರಧಾನಿ ನರೇಂದ್ರ ಮೋದಿ ಶ್ಲಾಘಿಸಿದ್ದಾರೆ.

ಬೆಂಗಳೂರಿನ ಹೆಚ್ ಎಎಲ್ ವಿಮಾನ ನಿಲ್ದಾಣದಲ್ಲಿ ಇಂದು ಸ್ವದೇಶಿ ನಿರ್ಮಿತ ವಿಮಾನ  ತೇಜಸ್ ಅನ್ನು ವಾಯು ಸೇನೆಗೆ ಸೇರ್ಪಡೆಗೊಳಿಸಿದ ಹಿನ್ನಲೆಯಲ್ಲಿ ಟ್ವೀಟ್ ಮಾಡಿರುವ ಪ್ರಧಾನಿ  ನರೇಂದ್ರ ಮೋದಿ ಅವರು, ತೇಜಸ್ ಸೇರ್ಪಡೆ ಭಾರತೀಯರಲ್ಲಿ ಅಪಾರ ಹೆಮ್ಮೆ ಮತ್ತು ಅತಿಯಾದ ಖುಷಿಯನ್ನು ನೀಡಿದೆ. ಸೇನೆಗೆ ತೇಜಸ್ ಸೇರ್ಪಡೆ ಮೂಲಕ ಸ್ವದೇಶಿ ರಕ್ಷಣಾ ಪರಿಕರಗಳ  ಸ್ವದೇಶಿ ನಿರ್ಮಾಣಕ್ಕೆ ಉತ್ತೇಜನ ನೀಡಿದಂತಾಗಿದ್ದು, ನಮ್ಮ ಕೌಶಲ್ಯಗಳನ್ನು ಮತ್ತು ಸಾಮರ್ಥ್ಯವನ್ನು ಇಡೀ ಜಗತ್ತೀಗೆ ಪರಿಚಯಿಸಿದೆ ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.

ಇಂದು ಬೆಳಗ್ಗೆ ಬೆಂಗಳೂರಿನ ಹೆಚ್ ಎಎಲ್ ವಿಮಾನ ನಿಲ್ದಾಣದಲ್ಲಿ ಹೆಚ್ ಎಎಲ್ ವ್ಯವಸ್ಥಾಪಕರಾದ ಶ್ರೀಧರನ್ ಅವರು ವಾಯು ಸೇನೆಯ ಮುಖ್ಯಾಧಿಕಾರಿ ಜಸ್ಬೀರ್ ವಾಲಿಯಾ ಅವರಿಗೆ  ತೇಜಸ್ ವಿಮಾನಗಳನ್ನು ಹಸ್ತಾಂತರಿಸಿದರು. ತೇಜಸ್ ಯುದ್ಧ ವಿಮಾನಕ್ಕೆ ಪೂಜೆ ಸಲ್ಲಿಸುವ ಮೂಲಕ ಅಧಿಕೃತವಾಗಿ ವಾಯು ಸೇನೆಗೆ ಸೇರ್ಪಡೆಗೊಳಿಸಲಾಯಿತು.ಬಳಿಕ ಎಲ್ಲ ಸಮುದಾಯದ  ಧಾರ್ಮಿಕ ಗುರುಗಳು ಪ್ರಾರ್ಥನೆ ಸಲ್ಲಿಸಿ, ತೇಜಸ್ ಗೆ ಶುಭ ಕೋರಿದರು. ಬಳಿಕ ತೇಜಸ್ ವಿಮಾನವನ್ನೇರಿದ ವಾಯುಸೇನೆ ಗ್ರೂಪ್ ಕ್ಯಾಪ್ಟನ್ ಮಾಧವ್ ರಂಗಾಚಾರಿ ತೇಜಸ್ ವಿಮಾನದಲ್ಲಿ ಹಾರಾಟ ನಡೆಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಧಮ್ ಇದ್ರೆ ನನ್ನ ಕೊಲ್ಲಿ.. ಕನಿಷ್ಠ 1 ಸಾವಿರ ಕ್ಷಿಪಣಿಗಳು ಲೋಡ್ ಆಗಿ ನಿಂತಿವೆ': ಇರಾನ್ ಗೆ Donald Trump ಎಚ್ಚರಿಕೆ

ಭಾರತ–ನ್ಯೂಜಿಲ್ಯಾಂಡ್ ಸಂಬಂಧ ಕಾರ್ಯತಂತ್ರ ಪಾಲುದಾರಿಕೆಗೆ ಉನ್ನತಿ; 5 ವರ್ಷಗಳಲ್ಲಿ 35,000 ಕೋಟಿ ರೂ ವ್ಯಾಪಾರದ ಗುರಿ; Video

'ಮಟನ್ ಹಾಕ್ತೀವಿ ಅಂತ ಹೇಳಿ ಚಿಕನ್ ಕೊಟ್ರು': ರಣಾಂಗಣವಾಯ್ತು 'ನಿಕಾಹ್ ಸಮಾರಂಭ', 12 ಮಂದಿಗೆ ಗಾಯ, Video

ಕದನ ವಿರಾಮ ಅಂತ್ಯ; ಹೊಸ ಮಾತುಕತೆಗೆ ಡೊನಾಲ್ಡ್ ಟ್ರಂಪ್ ಒಪ್ಪಿಗೆ – 'ಶರಣಾಗುವುದಿಲ್ಲ' ಎಂದ ಇರಾನ್

ಬೆಂಗಳೂರು: ತಾಯಿ, ಅಜ್ಜಿ, ಮಾವನನ್ನು ಕೊಂದು ಆರೋಪಿ ಆತ್ಮಹತ್ಯೆ!