ಸಾಂದರ್ಭಿಕ ಚಿತ್ರ 
ದೇಶ

ಅಬಕಾರಿ ಸುಂಕ ಮರು ಜಾರಿ ವಿರೋಧಿಸಿ ಚಿನ್ನಾಭರಣ ವರ್ತಕರ ಮುಷ್ಕರ

ಚಿನ್ನಾಭರಣ ಕ್ಷೇತ್ರವನ್ನು ಅಬಕಾರಿ ಸುಂಕದ ವ್ಯಾಪ್ತಿಗೆ ಒಳಪಡಿಸಿರುವುದನ್ನು ಖಂಡಿಸಿ ಅಖಿಲ ಭಾರತ ಆಭರಣ ಮಾರಾಟಗಾರರ ಒಕ್ಕೂಟ ಮೂರು ದಿನಗಳ ಕಾಲ ...

ಮುಂಬಯಿ: ಚಿನ್ನಾಭರಣ ಕ್ಷೇತ್ರವನ್ನು ಅಬಕಾರಿ ಸುಂಕದ ವ್ಯಾಪ್ತಿಗೆ ಒಳಪಡಿಸಿರುವುದನ್ನು ಖಂಡಿಸಿ ಅಖಿಲ ಭಾರತ ಆಭರಣ ಮಾರಾಟಗಾರರ ಒಕ್ಕೂಟ ಮೂರು ದಿನಗಳ ಕಾಲ ಚಿನ್ನಾಭರಣ ಅಂಗಡಿಗಳ ಬಂದ್​ಗೆ ಕರೆ ನೀಡಿದೆ.

ಶೇ.1 ಅಬಕಾರಿ ಸುಂಕದ ಮರು ಜಾರಿ ಹಾಗೂ 2 ಲಕ್ಷ ರೂ.ಗಿಂತ ಹೆಚ್ಚಿನ ಮೌಲ್ಯದ ಆಭರಣ ವ್ಯವಹಾರಗಳಿಗೆ ಪ್ಯಾನ್ ಕಾರ್ಡ್ ಕಡ್ಡಾಯಗೊಳಿಸಿರುವುದನ್ನು ವಿರೋಧಿಸಿ ಮುಷ್ಕರ ನಡೆಸಲಾಗುವುದು ಎಂದು ಆಲ್ ಇಂಡಿಯಾ ಜೆಮ್ಸ್ ಆ್ಯಂಡ್ ಜ್ಯುವೆಲ್ಲರಿ ಟ್ರೇಡ್ ಫೆಡರೇಷನ್ (ಜಿಜೆಎಫ್) ಅಧ್ಯಕ್ಷ ಶ್ರೀಧರ್ ಜಿ.ವಿ ತಿಳಿಸಿದ್ದಾರೆ.

ಸುಮಾರು 300ಕ್ಕೂ ಹೆಚ್ಚು ಸಂಘಟನೆಗಳು ಭಾಗವಹಿಸಲಿದ್ದು, ಉತ್ಪಾದಕರು, ರಿಟೇಲ್ ವರ್ತಕರು, ಕುಶಲಕರ್ಮಿಗಳು ಮುಷ್ಕರ ಹೂಡಲಿದ್ದಾರೆ ಎಂದು ಹೇಳಿದ್ದಾರೆ. ಈ ನಡುವೆ ಕೇರಳ ಮತ್ತು ರಾಜ್ ಕೋಟ್‌ನಲ್ಲಿ (ಗುಜರಾತ್) ಎಲ್ಲ ಜ್ಯುವೆಲರ್ಸ್‌ ಅಸೋಸಿಯೇಶನ್‌ಗಳು ಮಂಗಳವಾರವೇ ಮುಷ್ಕರ ಆರಂಭಿಸಿವೆ.

ಬಜೆಟ್‌ನಲ್ಲಿ ಶೇ.1ರ ಅಬಕಾರಿ ಸುಂಕವನ್ನು ಮತ್ತೆ ಜಾರಿಗೊಳಿಸಲು ಪ್ರಸ್ತಾಪಿಸಿರುವುದು ಸಮಂಜಸವಲ್ಲ. 2ಲಕ್ಷ ರೂ.ಗಿಂತ ಹೆಚ್ಚಿನ ಮೊತ್ತದ ವ್ಯವಹಾರಗಳಿಗೆ ಪ್ಯಾನ್ ಕಡ್ಡಾಯ ಮಾಡಿರುವುದರಿಂದ ಈಗಾಗಲೇ ಆಭರಣ ವಲಯದ ವಹಿವಾಟು 25-30 ಪರ್ಸೆಂಟ್ ತಗ್ಗಿದೆ. 2ಲಕ್ಷ ರೂ.ಗಳ ಮಿತಿಯನ್ನು 10 ಲಕ್ಷ ರೂ.ಗೆ ವಿಸ್ತರಿಸುವುದರ ಬದಲಿಗೆ ಶೇ.1ರಷ್ಟು ಅಬಕಾರಿ ಸುಂಕವನ್ನು ಮರು ಜಾರಿಗೊಳಿಸುವ ಸರಕಾರದ ನಿರ್ಧಾರದಿಂದ ಮತ್ತಷ್ಟು ತೊಂದರೆಯಾಗಲಿದೆ ಎಂದು ಶ್ರೀಧರ್ ವಿವರಿಸಿದರು.

ಈ ಹಿಂದೆ 2005 ಹಾಗೂ 2012ರಲ್ಲಿ ಅಬಕಾರಿ ಸುಂಕ ವಿಧಿಸಲಾಗಿತ್ತಾದರೂ ಅಸಂಘಟಿತ ವಲಯವಾಗಿರುವ ಕ್ಷೇತ್ರದ ಮೇಲೆ ತೆರಿಗೆ ಹೇರಿಕೆಯಿಂದ ಉಂಟಾಗುತ್ತಿದ್ದ ತೊಂದರೆಗಳನ್ನು ಪರಿಗಣಿಸಿ ಯುಪಿಎ ಸರ್ಕಾರ ನಿರ್ಧಾರವನ್ನು ಹಿಂಪಡೆದಿತ್ತು. ಇದೀಗ ಮತ್ತೆ ತೆರಿಗೆ ವಿಧಿಸುವುದರಿಂದ ಚಿನ್ನಾಭರಣ ವ್ಯಾಪಾರ ಕುಂಠಿತವಾಗುತ್ತದೆ. ಸಣ್ಣ ಮತ್ತು ಮಧ್ಯಮ ವ್ಯಾಪಾರಸ್ಥರು ಬೀದಿಗೆ ಬರಬೇಕಾಗುತ್ತದೆ. ಲಕ್ಷಾಂತರ ನೌಕರರು ಉದ್ಯೋಗ ಕಳೆದುಕೊಳ್ಳಬೇಕಾಗುತ್ತದೆ. ಹಾಗಾಗಿ ತೆರಿಗೆ ಏರಿಕೆ ನಿರ್ಧಾರವನ್ನು ವಾಪಸ್ ಪಡೆಯುವಂತೆ ಕೇಂದ್ರ ಸರ್ಕಾರವನ್ನು ಆಗ್ರಹಿಸುವುದು ಬಂದ್​ನ ಉದ್ದೇಶ ಎಂದು ಒಕ್ಕೂಟದ ಅಧ್ಯಕ್ಷ ಜಿ.ವಿ.ಶ್ರೀಧರ್ ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

SCROLL FOR NEXT