ದಿಲೀಪ್ ಘೋಷ್ 
ದೇಶ

ಯಾರಾದರೂ ದೇಶವಿರೋಧಿ ಮಾತನಾಡಿದರೇ ಇಂಚಿಂಚಾಗಿ ಕತ್ತರಿಸುತ್ತೇನೆ: ಬಿಜೆಪಿ ನಾಯಕ

ಭಾರತದಲ್ಲಿ ಯಾರಾದರೂ ದೇಶ ವಿರೋಧಿ ಘೋಷಣೆ ಕೂಗಿದರೇ ಅವರನ್ನು ಇಂಚಿಂಚಾಗಿ ಕತ್ತರಿಸುವುದಾಗಿ ಬಿಜೆಪಿ ನಾಯಕರೊಬ್ಬರು ವಿವಾದಾತ್ಮಕ ಹೇಳಿಕೆ

ಕೊಲ್ಕೋತಾ: ಭಾರತದಲ್ಲಿ ಯಾರಾದರೂ ದೇಶ ವಿರೋಧಿ ಘೋಷಣೆ ಕೂಗಿದರೇ ಅವರನ್ನು ಇಂಚಿಂಚಾಗಿ ಕತ್ತರಿಸುವುದಾಗಿ ಬಿಜೆಪಿ ನಾಯಕರೊಬ್ಬರು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಪಶ್ಚಿಮ ಬಂಗಾಳದ ಬಿರ್ ಭೂಮ್ ರಾಜಧಾನಿ ಸಿಯೂರಿಯಲ್ಲಿ ಪ್ರತಿಭಟನಾ ರ್ಯಾಲಿ ಉದ್ಘಾಟಿಸಿ ಮಾತನಾಡಿದ ಪಶ್ಚಿಮ ಬಂಗಾಳ ಬಿಜೆಪಿ ರಾಜ್ಯಾಧ್ಯಕ್ಷ ದಿಲಿಪ್ ಘೋಷ್ ದೇಶ ವಿರೋಧಿ ಘೋಷಣೆ ಕೂಗುವವರ ವಿರುದ್ಧ ಹರಿಹಾಯ್ದಿದ್ದಾರೆ.

ಯಾರಾದರೂ ಪಾಕಿಸ್ತಾನ ಜಿಂದಾಬಾದ್ ಎಂದು ಕೂಗಿದರೇ, ಅಂಥವರನ್ನು ತಲೆಯಿಂದ ಬುಡದವರೆಗೆ  ಇಂಚಿಂಚಾಗಿ ಕತ್ತರಿಸುವುದಾಗಿ ಬಿರ್ ಭೂಮ್ ನಲ್ಲಿ ನಡೆದ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಹೇಳಿದ್ದಾರೆ.

ಈ ವಿವಾದಾತ್ಮಕ ಹೇಳಿಕೆಯನ್ನು ವಿದ್ಯಾರ್ಥಿಯೊಬ್ಬ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾನೆ. ಈ ಹೇಳಿಕೆ ಜಿಲ್ಲೆಯ ಹಲವೆಡೆ ಕಿಡಿ ಹೊತ್ತಿಸಿದ್ದು, ಇಲ್ಲಮ್ ಬಜಾರ್ ಸೇರಿ ಹಲವೆಡೆ ಪೊಲೀಸ್ ಠಾಣೆ ಮತ್ತು ಹಲವು ವಾಹನಗಳನ್ನು ಜಖಂಗೊಳಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

Indian Stock Market: ಸತತ ಕುಸಿತ, ಬರೊಬ್ಬರಿ ಶೇ.1ರಷ್ಟು ಕುಸಿದ Sensex, Nifty 50, ರೂಪಾಯಿ ಮೌಲ್ಯ ಇಳಿಕೆ!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

SCROLL FOR NEXT