ಶಿವರಾಜ್ ಸಿಂಗ್ ಚೌಹಾಣ್ 
ದೇಶ

ಮುಖ್ಯಮಂತ್ರಿ ದಾರಿಗಾಗಿ ಮಾನವೀಯತೆ ಮರೆತ ಪೊಲೀಸರು

ಪೊಲೀಸರ ಅಮಾನವೀಯತೆಗೆ ಮಧ್ಯ ಪ್ರದೇಶದಲ್ಲಿ ವಿದ್ಯಾರ್ಥಿಯೊಬ್ಬ ಪ್ರಾಣ ತೆತ್ತಿದ್ದಾನೆ. ಮುಖ್ಯಮಂತ್ರಿ ಶಿವರಾಜ್ ಸಿಂಗ್ ಬೆಂಗಾವಲು ವಾಹನಕ್ಕೆ ದಾರಿ ಮಾಡಿಕೊಡುವ ...

ಭೋಪಾಲ್: ಪೊಲೀಸರ ಅಮಾನವೀಯತೆಗೆ ಮಧ್ಯ ಪ್ರದೇಶದಲ್ಲಿ ವಿದ್ಯಾರ್ಥಿಯೊಬ್ಬ ಪ್ರಾಣ ತೆತ್ತಿದ್ದಾನೆ. ಮುಖ್ಯಮಂತ್ರಿ ಶಿವರಾಜ್ ಸಿಂಗ್ ಬೆಂಗಾವಲು ವಾಹನಕ್ಕೆ ದಾರಿ ಮಾಡಿಕೊಡುವ ರಭಸದಲ್ಲಿ ಪೊಲೀಸರು, ಬಸ್ಸಿಗೆ ಡಿಕ್ಕಿ ಹೊಡೆದು ರಕ್ತದ ಮಡುವಿನಲ್ಲಿ ಬಿದ್ದ ಯುವಕನನ್ನು ನಿರ್ಲಕ್ಷಿಸಿದ್ದರಿಂದ, ಆತ ಮೃತಪಟ್ಟ ಅಮಾನವೀಯ ಘಟನೆ ನಡೆದಿದೆ.

ಸಿಎಂ  ಶಿವರಾಜ್ ಸಿಂಗ್ ಚೌಹಾಣ್ ವಾಹನಕ್ಕೆ ದಾರಿ ಮಾಡಿಕೊಡುವಾಗ ಬಸ್ಸೊಂದು ಯುವಕನಿಗೆ ಡಿಕ್ಕಿ ಹೊಡೆದಿತ್ತು.  ರಕ್ತದ ಮಡುವಿನಲ್ಲಿ ಬಿದ್ದಿದ್ದ ವಿಕಾಸ್ ಪ್ರಸಾದ್ ಸೊನಿಯಾ ಎಂಬ ಯುವಕನನ್ನು ಪೊಲೀಸರು ಆಸ್ಪತ್ರೆಗೆ ಸೇರಿಸುವ ಬದಲು, ಪಾದಚಾರಿ ರಸ್ತೆಯಲ್ಲಿ ಹಾಕಿದರು. ಸುಮಾರು 45 ನಿಮಿಷಗಳ ಕಾಲ ವಿಕಾಸ್ ಹಾಗೆಯೇ ಒದ್ದಾಡಿ, ಪ್ರಜ್ಞಾ ಹೀನ ಸ್ಥಿತಿಗೆ ತಲುಪಿದರು. ಮುಖ್ಯಮಂತ್ರಿ ತೆರಳಿ, ರಸ್ತೆ ಬಿಡುವಾದ ನಂತರ ಆ್ಯಂಬುಲೆನ್ಸ್‌ವೊಂದು ಬಂದು ವಿಕಾಸ್‌ನನ್ನು ಆಸ್ಪತ್ರೆಗೆ ಕರೆದುಕೊಂಡು ಹೋಯಿತು.

ಅಲ್ಲಿಯೂ ಸುಮಾರು 20 ನಿಮಿಷಗಳ ಕಾಲ ಆತನಿಗೆ ಯಾವ ಚಿಕಿತ್ಸೆಯೂ ನೀಡದ ಕಾರಣ ಕಾರಿಡಾರಿನಲ್ಲಿಯೇ ಕಾಲ ಕಳೆಯುವಂತಾಯಿತು. 11.45ಕ್ಕೆ ಆತನನ್ನು ಆ್ಯಂಬುಲೆನ್ಸ್ ಆಸ್ಪತ್ರೆಗೆ ತಲುಪಿಸಿದರೆ, ಸುಮಾರು 12.06 ಗಂಟೆಗೆ ವೈದ್ಯರು ಪರೀಕ್ಷಿಸಿದ್ದಾರೆ. ಆದರೆ, ತಕ್ಷಣವೇ ಆತನನ್ನು ನರ್ಮದಾ ತುರ್ತು ನಿಗಮ ಘಟಕಕ್ಕೆ ಹೋಗಲು ಹೇಳಿದ್ದಾರೆ. ಅಲ್ಲಿ ಸುಮಾರು ಎರಡು ಗಂಟೆಗಳ ನಂತರ ವಿಕಾಸ ಕೊನೆಯುಸಿರೆಳೆದಿದ್ದಾನೆ. 'ಅಗತ್ಯ ಯಂತ್ರಗಳು ಕಾರ್ಯನಿರ್ವಹಿಸದ ಕಾರಣ ವಿಕಾಸ್ ಗಂಟಲೊಳಗೆ ಹೋಗುತ್ತಿದ್ದ ರಕ್ತವನ್ನು ನಿಯಂತ್ರಿಸಲು ವೈದ್ಯರು ವಿಫಲರಾದರು. ನನ್ನ ಕಣ್ಣೆದುರೇ ಮಗ ಕೊನೆಯುಸಿರೆಳೆದ,' ಎಂದು  ತಂದೆ ಗೋಕುಲ್ ಪ್ರಸಾದ್ ಸೋನಿಯಾ ನೊಂದು ನುಡಿದಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಯುಕ್ರೇನ್-ರಷ್ಯಾ ಶಾಂತಿ ಒಪ್ಪಂದ ಸನಿಹ: ಸುಳಿವು ನೀಡಿದ ಯುಕ್ರೇನ್

2026 T20 ವಿಶ್ವಕಪ್: ಕೊಲಂಬೋದಲ್ಲಿ ಫೆ.15 ರಂದು ಭಾರತ- ಪಾಕ್ ಪಂದ್ಯ

ಕಾರು ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಸಾವು: ಸಿಎಂ, ಡಿಸಿಎಂ ಸಂತಾಪ

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ರಾಸಾಯನಿಕಗಳು, ಎಲೆಕ್ಟ್ರಾನಿಕ್ ಘಟಕಗಳ ಸುಲಭ ಲಭ್ಯತೆಯಿಂದ ಐಇಡಿ ಅಪಾಯ ಹೆಚ್ಚು: NSG

SCROLL FOR NEXT