ದೇಶ

ರಾಜಕೀಯದಿಂದ ದೂರವಿರಲು ಕನ್ಹಯ್ಯಗೆ ಕೇಂದ್ರ ಸಚಿವ ವೆಂಕಯ್ಯ ನಾಯ್ಡು ಸಲಹೆ

ಜೆ ಎನ್ ಯು ವಿದ್ಯಾರ್ಥಿ ಸಂಘಟನೆ ಮುಖಂಡ ಕನ್ಹಯ್ಯ ಕುಮಾರ್ ಗೆ ರಾಜಕೀಯದಿಂದ ದೂರವಿದ್ದು ಶಿಕ್ಷಣದತ್ತ ಗಮನ ಕೇಂದ್ರೀಕರಿಸಲು ವೆಂಕಯ್ಯ ನಾಯ್ಡು ಸಲಹೆ ನೀಡಿದ್ದಾರೆ.

ನವದೆಹಲಿ: ಸಂಸತ್ ನಲ್ಲಿ ಎಡಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿರುವ ಕೇಂದ್ರ ಸಚಿವ ವೆಂಕಯ್ಯ ನಾಯ್ಡು, ಜೆ ಎನ್ ಯು ವಿದ್ಯಾರ್ಥಿ ಸಂಘಟನೆ ಮುಖಂಡ ಕನ್ಹಯ್ಯ ಕುಮಾರ್ ಗೆ ರಾಜಕೀಯದಿಂದ ದೂರವಿದ್ದು ಶಿಕ್ಷಣದತ್ತ ಗಮನ ಕೇಂದ್ರೀಕರಿಸಲು ಸಲಹೆ ನೀಡಿದ್ದಾರೆ.
ಕನ್ಹಯ್ಯ ಕುಮಾರ್ ವಿವಾದದಿಂದ ಉಂಟಾಗಿರುವ ಜನಪ್ರಿಯತೆಗೆ ಹೆಚ್ಚು ಗಮನ ಕೊಡದೇ ಫೆ.9 ರಂದು ನಡೆದಂತಹ ಘಟನೆಗಳು ಪುನಾರಾವರ್ತನೆಯಾಗದಂತೆ ಎಚ್ಚರ ವಹಿಸಲಿ ಎಂದು ವೆಂಕಯ್ಯ ನಾಯ್ಡು ಹೇಳಿದ್ದಾರೆ. ಜೆಎನ್ ಯು ವಿದ್ಯಾರ್ಥಿಗಳು ರಾಜಕೀಯದಿಂದ ದೂರ ಉಳಿಯಬೇಕು, ಒಂದು ವೇಳೆ ರಾಜಕೀಯದಲ್ಲಿ ತೀವ್ರವಾದ ಆಸಕ್ತಿಯುಳ್ಳವರಾದರೆ, ಶಿಕ್ಷಣ ಮೊಟಕುಗೊಳಿಸಿ ರಾಜಕೀಯ ಪಕ್ಷ ಸೇರಲಿ, ಕನ್ಹಯ್ಯ ಕುಮಾರ್ ನ ನೆಚ್ಚಿನ ಪಕ್ಷ ಸಂಸತ್ ನಲ್ಲಿ ಒಂದು ಅಂಕಿಯ ಸದಸ್ಯರ ಬಲ ಹೊಂದಿದೆ. ರಾಜಕೀಯ ಆಸಕ್ತಿಯನ್ನು ಇಟ್ಟುಕೊಂಡು, ಅಫ್ಜಲ್ ಗುರು, ಯಾಕೂಬ್ ಮೆಮನ್, ಮುಕ್ಬೂಲ್ ಭಟ್ ನಂತಹವರನ್ನು ಬೆಂಬಲಿಸಿ ವಿದ್ಯಾರ್ಥಿಗಳನ್ನು ಸೆಳೆಯುವ ಅಗತ್ಯವಿಲ್ಲ  ಎಂದು ಎಡಪಕ್ಷಗಳ ವಿರುದ್ಧ ವೆಂಕಯ್ಯ ನಾಯ್ಡು ವಾಗ್ದಾಳಿ ನಡೆಸಿದ್ದಾರೆ. ಜೆಎನ್ ಯು ನಲ್ಲಿ ರಾಷ್ಟ್ರವಿರೋಧಿ ಘೋಷಣೆ ಕೇಳಿಬಂದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿದ್ಯಾರ್ಥಿ ಸಂಘಟನೆ ಮುಖಂಡ ಕನ್ಹಯ್ಯ ಕುಮಾರ್ ನನ್ನು ಪೊಲೀಸರು ಬಂಧಿಸಿ ರಾಷ್ಟ್ರದ್ರೋಹ ಪ್ರಕರಣ ದಾಖಲಿಸಿದ್ದರು. ಕನ್ಹಯ್ಯ ಕುಮಾರ್ ಮಾ.3 ರಂದು ಜಾಮೀನು ಪಡೆದು ಹೊರಬಂದಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT